ಅಶೋಕ್ ಕಡಬ (Ashok kadaba) ಅವರ ನಿರ್ದೇಶನದ, ಮಹಾಂತೇಶ್ ವಿ.ಕೆ. ಅವರ ನಿರ್ಮಾಣದ ಸತ್ಯಂ (sathyam ) ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚೆಗಷ್ಟೇ ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ (Censor board) ಚಿತ್ರದ ಕಾನ್ಸೆಪ್ಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಚಿತ್ರಕ್ಕೆ ಯು/ಎ (U/A) ಸರ್ಟಿಫಿಕೇಟ್ ನೀಡಿದೆ.
![](https://pratidhvani.com/wp-content/uploads/2024/05/f87c0b6d-5839-4a76-8f9d-a5be41c8107c-1024x682.jpeg)
ಕೆಂಪ, ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ (Santosh balaraj) ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಕನ್ನಡತಿ ಖ್ಯಾತಿಯ ರಂಜನಿ ರಾಘವನ್ (Ranjini raaghavan) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸತ್ಯಂ ಮಾಸ್ ಚಿತ್ರವಾದರೂ ತುಳುನಾಡಿನ ದೈವಾರಾಧನೆಯ ಬಗ್ಗೆ ಒಂದು ಎಳೆ ಈ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ. ಕಾಂತಾರ (Kantara) ಚಿತ್ರಕ್ಕೂ ಮುನ್ನವೇ ಸತ್ಯಂ ಕಥೆಯನ್ನು ರೆಡಿ ಮಾಡಿಕೊಂಡಿದ್ದಾಗಿ ನಿರ್ದೇಶಕರೇ ಹೇಳಿದ್ದಾರೆ.
ಸೆನ್ಸಾರ್ ಅಧಿಕಾರಿಗಳು (Censor board) ಹಲವಾರು ಚಿತ್ರಗಳನ್ನು ವೀಕ್ಷಿಸುತ್ತಾರೆ. ಅದರ ನಡುವೆ ಹೊಸತನದಿಂದ ಕೂಡಿದ ಚಿತ್ರ ನೋಡಿದಾಗ ಅವರ ಪ್ರತಿಕ್ರಿಯೆ ಬೇರೆಥರ ಇರುತ್ತದೆ. ಅಂದಹಾಗೆ, ಯಾವುದೇ ಕಟ್, ಮ್ಯೂಟ್ ಇಲ್ಲದೆ ಈ ಚಿತ್ರ ಸೆನ್ಸಾರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದೆ.
![](https://pratidhvani.com/wp-content/uploads/2024/05/d7ed9eda-3252-4945-9a17-2cc93cf517c2-1024x682.jpeg)
ಶ್ರೀ ಮಾತಾ ಕ್ರಿಯೇಷನ್ಸ್ ಬ್ಯಾನರಿನಡಿಯಲ್ಲಿ ಮಹಾಂತೇಶ್ ವಿ.ಕೆ. ಅವರ ನಿರ್ಮಾಣದ ಸತ್ಯಂ ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ, ಎಲ್ಲ ವರ್ಗದ ಪ್ರೇಕ್ಷಕರನ್ನೂ ಆವರಿಸಿಕೊಳ್ಳುವಂಥ ಕಥೆ ಸತ್ಯಂ ಚಿತ್ರಕ್ಕಿದೆ. ಕೆಜಿಎಫ್. ಖ್ಯಾತಿಯ ರವಿ ಬಸ್ರೂರು ಈ ಚಿತ್ರದ ಸಂಗೀತ ನಿರ್ದೇಶನ ಮಾಡಿದರೆ.