ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಲಿಂಗಾಯತ ಧರ್ಮಗುರು ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕರ್ನಾಟಕ ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಮುರುಘಾ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ
ಪೋಕ್ಸೋ ಕಾಯ್ದೆ ಪ್ರಕರಣ ಹಿನ್ನಲೆಯಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಲಾಗಿದೆ.
ಶರಣರ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳ ಆಗ್ರಹ
ಪೋಕ್ಸೋ ಕಾಯ್ದೆಯಡಿ ಮುರುಘ ಶರಣರನ್ನು ಪೊಲೀಸರು ವಿಚಾರಣೆ ನಡೆಸಿಲ್ಲ. ಹೀಗಾಗಿ ಅವರ ಬಂಧನಕ್ಕೆ ಆಗ್ರಹಿಸಿ ದಲಿತ ಹಾಗೂ ಮಹಿಳಾ ಸಂಘಟನೆಗಳು ಬೀದಿಗಿಳಿದಿವೆ. ಆರೋಪಿ ಸ್ಥಾನದಲ್ಲಿರುವ ಶರಣರಿಗೆ ಮಠದ ಆವರಣದಿಂದ ಹೊರಬರದಂತೆ ಮಾತ್ರ ಹೇಳಲಾಗಿದೆ. ಶರಣರ ವಿರುದ್ಧ ಲೈಗಿಂಕ ಆರೋಪ ಹೊರಿಸಿರುವ ಸಂತ್ರಸ್ತೆಯರಲ್ಲಿ ಒಬ್ಬರು ಪರಿಶಿಷ್ಟ ಜಾತಿಗೆ ಸೇರಿದವರು ಮತ್ತು ಇನ್ನೊಬ್ಬರು ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ. ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯದ ವೀಡಿಯೊಗಳನ್ನು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಡಿಎಚ್ ವರದಿ ಮಾಡಿದೆ.
ಆರೋಪ ಏನು?
ಮುರುಗಾ ಶರಣರಿಗೆ ಪ್ರತಿ ವಾರ ಒಂದು ಹೆಣ್ಣು ಮಗು ಹಣ್ಣು ಹಂಪಲು ನೀಡಲು ಅವರ ಕೋಣೆಗೆ ಕಳಿಸಲಾಗುತ್ತಿತ್ತು. ಅಲ್ಲಿ ಶರಣರು ಇಷ್ಟವಿಲ್ಲ ಎಂದು ಹೇಳಿದರೂ ಹುಡುಗಿಯರ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದರು. ಅದಾದ ನಂತರ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದರು. ಅದಾದ ನಂತರ ಸ್ವಚ್ಚಗೊಳಿಸಲು ಟಿಶ್ಯೂ ಬಳಸುತ್ತಿದ್ದರು. ವಿದ್ಯಾರ್ಥಿನಿಯರಿಗೆ ಸ್ನಾನದ ಕೋಣೆಗೆ ಹೋಗಿ ಸ್ನಾನ ಮಾಡಿ ಹೋಗುವಂತೆ ಹೇಳುತ್ತಿದ್ದರು ಎಂದು ಆರೋಪಿಸಲಾಗಿದೆ.
ಪ್ರತಿನಿತ್ಯ ಒಂದು ಹುಡುಗಿಯನ್ನು ಆಪ್ತ ಸಹಾಯಕರು ಕರೆದುಕೊಂಡು ಹೋಗಿ ಶರಣರ ಜೊತೆ ಕೋಣೆಯಲ್ಲಿ ಕೂಡಿಹಾಕುತ್ತಿದ್ದರು. ಹಲವಾರು ಬಾರಿ ಈ ರೀತಿ ನಡೆದ ನಂತರ ಅದರ ವಿಡಿಯೋಗಳನ್ನು ಕೂಡ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಶರಣರು ಅವರ ವಿರುದ್ಧದ ಯಾವುದೇ ವರದಿಯನ್ನು ಬಿತ್ತರಿಸದಂತೆ ಕೋರ್ಟ್ನಿಂದ ಆದೇಶ ಪಡೆದಿದ್ದಾರೆ.