ರಿಷಭ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಚಿತ್ರ ಕಾಂತಾರ ಬಿಡುಗಡೆಗೂ ಮುನ್ನ ಹಾಗೂ ನಂತರ ಚಿತ್ರದಲ್ಲಿನ ವಿಶೇಷತಗಳಿಂದಾಗಿ ಹೆಚ್ಚು ಸದ್ದು ಮಾಡುತ್ತಿದೆ.
ಸೆಪ್ಟೆಂಬರ್ 30ರಂದು ಬಿಡುಗಡೆಯಾದ ಕಾಂತಾರ ಚಿತ್ರವು ಕರ್ನಾಟಕದಲ್ಲಿ ಅತಿ ಹೆಚ್ಚು ವೀಕ್ಷಣೆಯಾದ ಚಿತ್ರ ಎಂಬ ಹೆಗ್ಗಳಿಕೆಗೂ ಸಹ ಪಾತ್ರವಾಗಿದೆ.
ಮನುಷ್ಯ ಹಾಗೂ ಪ್ರಕೃತಿ ನಡುವಿನ ಸಂಘರ್ಷವನ್ನ ಅದ್ಭುತವಾಗಿ ಕಟ್ಟಿಕೊಡುವಲ್ಲಿ ನಿರ್ದೇಶಕ ರಿಷಭ್ ಶೆಟ್ಟಿ ಯಶ ಕಂಡಿದ್ದಾರೆ. ಚಿತ್ರ ಬಿಡುಗಡೆಯಾಗಿ 50+ ದಿನಗಳು ಹ ಚಿತ್ರದ ಬಗೆಗಿನ ಕ್ರೇಜ್ ಮಾತ್ರ ಇನ್ನು ಕಡಿಮೆಯಾಗಿಲ್ಲ.

ಕೇರಳದ ಮ್ಯೂಸಿಕ್ ಬ್ಯಾಂಡ್ ಥೈಕುಂಡಮ್ ಬ್ರಿಡ್ಜ್ ಸಿದ್ಧಪಡಿಸಿದ್ದ ನವರೂಪಂ ಹಾಡಿನ ನಕಲು ಕಾಂತಾರ ಚಿತ್ರದ ವರಹ ರೂಪಂ ಎಂಬ ಆರೋಪಿಸಿ ಮೊಕದ್ದಮೆ ಹೂಡಿತ್ತು. ಕಾಂತಾರ ಚಿತ್ರತಂಡವು ಕೋಯಿಕ್ಕೋಡ್ ಹಾಗೂ ಪಾಲಕ್ಕಾಡ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆದೇಶವನ್ನ ಪ್ರಶ್ನಿಸಿ ಚಿತ್ರತಂಡವು ಕೇರಳ ಹೈಕೋರ್ಟ್ ಮೆಟ್ಟಿಲೇರಿತ್ತು.
ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ವಿವಾದವನ್ನ ಕೆಳ ನ್ಯಾಯಾಲಯದಲ್ಲೇ ಬಗೆಹರಿಸಿಕೊಳ್ಳುವಂತೆ ನಿರ್ದೇಶನ ನೀಡಿತ್ತು. ಅದರಂತೆ ಕೆಳ ನ್ಯಾಯಾಲಯದಲ್ಲಿ ವಾದ ಪ್ರತಿವಾದವನ್ನ ಆಲಿಸಿದ ನಂತರ ಹಾಡಿಗೆ ವಿಧಿಸಲಾಗಿದ್ದ ತಡೆಯಾಜ್ಞೆಯನ್ನ ನ್ಯಾಯಾಲಯ ತೆರವು ಮಾಡಿದೆ ಮತ್ತು ಥೈಕುಂಡಮ್ ಬ್ರಿಡ್ಜ್ ಸಲ್ಲಿಸಿದ ಅರ್ಜಿಯನ್ನ ವಜಾ ಮಾಡಿತ್ತು.
ಕಾಂತಾರ ಚಿತ್ರದಲ್ಲಿ ರಿಷಭ್ಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದು ಇನ್ನುಳಿದಂತೆ ಕಿಶೋರ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್, ಪ್ರಕಾಶ್ ತುಮ್ಮಿನಾಡ್ ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು ಹೊಂಬಾಳೆ ಫಿಲಂಸ್ ಬಂಡವಾಳ ಹೂಡಿದೆ.