• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CN Ashwath Narayan: ಮದ್ದೂರು ಗಲಭೆಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ವೈಫಲ್ಯವೇ ಕಾರಣ-ಅಶ್ವತ್ ನಾರಾಯಣ

ಪ್ರತಿಧ್ವನಿ by ಪ್ರತಿಧ್ವನಿ
September 27, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮದ್ದೂರಿನಲ್ಲಿ 34 ವರ್ಷಗಳಿಂದ ಗಣಪತಿ ಉತ್ಸವ ನಡೆಯುತ್ತಿದ್ದು, ಒಂದು ವರ್ಷವೂ ಘರ್ಷಣೆ ಆಗಿರಲಿಲ್ಲ; ಕಳೆದ ವರ್ಷ ಡಿಸೆಂಬರ್‍ನಲ್ಲಿ ಮಸೀದಿ ಅಕ್ರಮವಾಗಿ ನಿರ್ಮಾಣಗೊಂಡ ಬಳಿಕ ಗಲಾಟೆಗೆ ಕುಮ್ಮಕ್ಕು ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥÀನಾರಾಯಣ್ ಅವರು ಆರೋಪಿಸಿದ್ದಾರೆ. ಅಕ್ರಮ ಮಸೀದಿ ವಿರುದ್ಧ ಕ್ರಮ ಜರುಗಿಸಬೇಕು; ಅಮಾನುಷವಾಗಿ ವರ್ತಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಗಾಯಾಳುಗಳಿಗೆ ಸರಕಾರ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ADVERTISEMENT


ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸತ್ಯಶೋಧನಾ ಸಮಿತಿಯ ವರದಿ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಗಲಭೆ ಮಾಡುವ ಉದ್ದೇಶದಿಂದ ಬೀದಿ ದೀಪ ನಂದಿಸಿದ್ದಾರೆ. ಪೊಲೀಸರು ಗಣಪತಿ ಮೆರವಣಿಗೆಗೆ ಯಾವುದೇ ರೀತಿ ಪೂರ್ವತಯಾರಿ ಇಲ್ಲದೇ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದರು ಎಂದು ಟೀಕಿಸಿದರು. ಶಾಂತ ರೀತಿಯಲ್ಲಿ ತೆರಳುತ್ತಿದ್ದ ಮೆರವಣಿಗೆ ಮೇಲೆ ಪೊಲೀಸರು ಏಕಾಏಕಿ ಲಾಠಿಚಾರ್ಜ್ ಮಾಡಿದ್ದಾಗಿ ಆಕ್ಷೇಪಿಸಿದರು. ಜಿಲ್ಲಾಡಳಿತ- ಪೊಲೀಸ್ ಇಲಾಖೆಯ ವೈಫಲ್ಯವೇ ಇದಕ್ಕೆ ನೇರ ಕಾರಣ ಎಂದು ಸ್ಪಷ್ಟವಾಗಿ ಕಂಡುಬರುತ್ತದೆ ಎಂದು ನುಡಿದರು.


ಮಂಡ್ಯ ಜಿಲ್ಲೆ ಮದ್ದೂರಿನ ರಾಮ್- ರಹೀಂ ನಗರದಲ್ಲಿ 34 ವರ್ಷಗಳಿಂದ ನಿರಂತರವಾಗಿ ಇಲ್ಲಿ ಗಣಪತಿ ಪ್ರತಿಷ್ಠೆ ಮಾಡಿ ವಿಸರ್ಜನೆ ನಡೆಯುತ್ತಿತ್ತು. ಸೆ.7ರಂದು ಇಲ್ಲಿನ ಹಿಂದೂ ಗಣಪತಿ ಉತ್ಸವದ ವಿಸರ್ಜನೆಗೆ ಹೊರಟಾಗ ಹೊಸದಾಗಿ ನಿರ್ಮಿಸಿದ ಮಸೀದಿ ಮುಂಭಾಗದಲ್ಲಿ ಮೆರವಣಿಗೆ ತೆರಳುವಾಗ ಮ್ಯೂಸಿಕ್, ಬ್ಯಾಂಡ್ ಸೆಟ್ ಬಾರಿಸದೇ ಇರಲು ಪೊಲೀಸರು ಕೋರಿದ್ದರು. ಅದರÀಂತೆ ಕಾರ್ಯಕರ್ತರು ನಿಶ್ಶÀಬ್ದವಾಗಿ ತೆರಳುತ್ತಿದ್ದರು. 7.20ಕ್ಕೆ ಅಲ್ಲಿದ್ದ ಹೈಮಾಸ್ಟ್ ಬೀದಿದೀಪವನ್ನು ಆರಿಸಿದ್ದರು ಎಂದು ಆರೋಪಿಸಿದರು.
ಏಕಾಏಕಿ ಮನೆಗಳ ಮೇಲಿನ ಮಸೀದಿ ಕಡೆಯಿಂದ ಕಲ್ಲು ತೂರಿದ್ದಾರೆ. ಬಿಗು ವಾತಾವರಣ ನಿರ್ಮಾಣವಾಗಿದ್ದು, ಗಣಪತಿ ಉತ್ಸವದಲ್ಲಿ ತೆರಳುವ ಕಾರ್ಯಕರ್ತರ ಮೇಲೆ ಪೊಲೀಸರು ಬಲವಾದ ಲಾಠಿ ಪ್ರಹಾರ ಮಾಡಿದ್ದರು ಎಂದು ವಿವರಿಸಿದರು. ಗಣಪತಿ ವಿಗ್ರಹವನ್ನು ಪೊಲೀಸ್ ವಶಕ್ಕೆ ಪಡೆದಿದ್ದು, ಪೊಲೀಸರೇ ಗಣಪತಿ ವಿಸರ್ಜನೆ ಮಾಡಿದ್ದಾರೆ ಎಂದರು.
ಹಾದಿ ಬೀದಿಯಲ್ಲಿ ಹೋಗುವವರ ಮೇಲೂ ಲಾಠಿ ಚಾರ್ಜ್ ಮಾಡಿದ್ದು, ಮರುದಿನ ಕಾರ್ಯಕರ್ತರು ಮದ್ದೂರು ಬಂದ್ ಕರೆ ನೀಡಿದ್ದರು. ಜಿಲ್ಲೆಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದರು. ಈ ಎಲ್ಲ ಘಟನೆಗೆ ಬಿಜೆಪಿ ಕುಮ್ಮಕ್ಕೇ ಕಾರಣ. ಆರೆಸ್ಸೆಸ್, ಬಜರಂಗದಳ ಕಾರಣ ಎಂದು ಎಲ್ಲೋ ಕುಳಿತು ಹೇಳಿಕೆ ನೀಡಿದ್ದರು ಎಂದು ಟೀಕಿಸಿದರು.


ಬಳಿಕ ಸಾಮೂಹಿಕ ಗಣಪತಿ ವಿಸರ್ಜನೆಗೆ ಮುಂದಾದರು. ಆ ಮಸೀದಿಯ ಭಾಗವಾದ ಮುಸ್ಲಿಂ ಮುಖಂಡ ಆದಿಲ್ ಎಂಬುವರು ಈ ಘಟನೆಗೆ ನೇರವಾಗಿ ಮುಸ್ಲಿಂ ಯುವಕರೇ ಕಾರಣ ಎಂದು ಹೇಳಿಕೆ ಕೊಟ್ಟಿದ್ದರು. ಬಳಿಕ ಚಲುವರಾಯಸ್ವಾಮಿ ಅವರೂ ಮುಸ್ಲಿಮರ ತಪ್ಪೆಂದು ಹೇಳಿಕೆ ಕೊಟ್ಟರು. ಈ ರೀತಿ ಬೇಜವಾಬ್ದಾರಿಯಿಂದ ಸಚಿವರು ನಡೆದುಕೊಂಡಿದ್ದರು ಎಂದು ಆಕ್ಷೇಪಿಸಿದರು.


ನಾನು, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ವೆಂಕಟೇಶ್ ದೊಡ್ಡೇರಿ, ವಿಜಯಪ್ರಸಾದ್, ಡಾ.ಎನ್.ಎಸ್.ಇಂದ್ರೇಶ್, ಕು.ಮಂಜುಳಾ, ಮುಖಂಡ ಸ್ವಾಮಿಗೌಡ ಅವರಿದ್ದ ಸತ್ಯಶೋಧನಾ ಸಮಿತಿಯನ್ನು ರಾಜ್ಯಾಧ್ಯಕ್ಷರು ರಚಿಸಿದ್ದರು; ನಾವು ಸ್ಥಳಕ್ಕೆ ಭೇಟಿ ಕೊಟ್ಟಿದ್ದೇವೆ ಎಂದರು. 3 ದಿನಗಳ ಮೊದಲು ಈದ್ ಮಿಲಾದ್ ಆಚರಿಸಿದ್ದರು. ಉದ್ದೇಶಪೂರ್ವಕವಾಗಿ ಗಣೇಶನ ಪ್ರತಿಷ್ಠೆ ಮಾಡಿದ ಶಾಮಿಯಾನದ ಮುಂದೆ ಮುಸ್ಲಿಂ ಯುವಕರು ಡ್ಯಾನ್ಸ್ ಮಾಡಿದ್ದಾರೆ. ಆದರೆ, ಹಿಂದೂ ಯುವಕರು ಘರ್ಷಣೆಗೆ ಅವಕಾಶ ಮಾಡಿರಲಿಲ್ಲ; ಶಾಂತ ರೀತಿಯಿಂದ ಸ್ಪಂದಿಸಿದ್ದರು ಎಂದರು.


ಮಸೀದಿ ಮುಂದೆ ಬ್ಯಾಂಡ್ ಸೆಟ್ ಬಾರಿಸಬಾರದು; ಡ್ಯಾನ್ಸ್ ಮಾಡಬಾರದು, ಜಗಮಗಿಸುವ ಲೈಟ್ ಹಾಕಬಾರದು, ಡಿಜೆ ಹಾಕಬಾರದೆಂದು ಸಿದ್ದರಾಮಯ್ಯರ ಸರಕಾರ ಬಂದ ಮೇಲೆ ತಿಳಿಸುತ್ತಿದೆ. ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುವ ಜ್ಯೋತಿ ಎಂಬ ಮಹಿಳೆಗೆ ಅಮಾನುಷವಾಗಿ ಹೊಡೆದಿದ್ದಾರೆ. ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ 5 ಎಫ್‍ಐಆರ್ ದಾಖಲಿಸಿದ್ದಾರೆ; ವಿಚಾರಣೆಗೆ ಕರೆಯುತ್ತಿರುವುದು ತಪ್ಪು ಎಂದು ತಿಳಿಸಿದರು.

Tags: an ashwath narayan newsashwath narayanashwath narayan newsashwatha narayanabengaluru stampedec n ashwathnarayanC. N. Ashwath NarayanCN Ashwath Narayancn ashwath narayan agecn ashwath narayan educationcn ashwath narayan familycn ashwath narayan interviewcn ashwath narayan ministercnashwath narayancnashwath narayan castecnashwath narayan wifeDCM Ashwath Narayandr ashwath narayandr c n ashwath narayanDR CN Ashwath Narayanganesha visarjan incident in maddurmaddur clash newsmaddur ganeshmaddur ganesh newsmaddur ganesh processionmaddur ganesha incidentmaddur ganesha incident todaymaddur ganesha newsmaddur ganesha procession stone peltingmaddur ganesha stone peltingmaddur ganesha visarjanamaddur newsmaddur stone peltingmaddur stone pelting incidentmaddurumadduru ganesha galatemadduru ganeshtsava'madduru newsmahakumbh stampedemandya maddur newsstampede
Previous Post

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ.

Next Post

CM Siddaramaiah, KJ George: ಬೆಂಗಳೂರು ಸಿಟಿ ರೌಂಡ್ಸ್..!!

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

September 30, 2025
Next Post

CM Siddaramaiah, KJ George: ಬೆಂಗಳೂರು ಸಿಟಿ ರೌಂಡ್ಸ್..!!

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada