• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CN Ashwath Narayan: ಮದ್ದೂರು ಗಲಭೆಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ವೈಫಲ್ಯವೇ ಕಾರಣ-ಅಶ್ವತ್ ನಾರಾಯಣ

ಪ್ರತಿಧ್ವನಿ by ಪ್ರತಿಧ್ವನಿ
September 27, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮದ್ದೂರಿನಲ್ಲಿ 34 ವರ್ಷಗಳಿಂದ ಗಣಪತಿ ಉತ್ಸವ ನಡೆಯುತ್ತಿದ್ದು, ಒಂದು ವರ್ಷವೂ ಘರ್ಷಣೆ ಆಗಿರಲಿಲ್ಲ; ಕಳೆದ ವರ್ಷ ಡಿಸೆಂಬರ್‍ನಲ್ಲಿ ಮಸೀದಿ ಅಕ್ರಮವಾಗಿ ನಿರ್ಮಾಣಗೊಂಡ ಬಳಿಕ ಗಲಾಟೆಗೆ ಕುಮ್ಮಕ್ಕು ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥÀನಾರಾಯಣ್ ಅವರು ಆರೋಪಿಸಿದ್ದಾರೆ. ಅಕ್ರಮ ಮಸೀದಿ ವಿರುದ್ಧ ಕ್ರಮ ಜರುಗಿಸಬೇಕು; ಅಮಾನುಷವಾಗಿ ವರ್ತಿಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಗಾಯಾಳುಗಳಿಗೆ ಸರಕಾರ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ADVERTISEMENT


ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸತ್ಯಶೋಧನಾ ಸಮಿತಿಯ ವರದಿ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಗಲಭೆ ಮಾಡುವ ಉದ್ದೇಶದಿಂದ ಬೀದಿ ದೀಪ ನಂದಿಸಿದ್ದಾರೆ. ಪೊಲೀಸರು ಗಣಪತಿ ಮೆರವಣಿಗೆಗೆ ಯಾವುದೇ ರೀತಿ ಪೂರ್ವತಯಾರಿ ಇಲ್ಲದೇ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದರು ಎಂದು ಟೀಕಿಸಿದರು. ಶಾಂತ ರೀತಿಯಲ್ಲಿ ತೆರಳುತ್ತಿದ್ದ ಮೆರವಣಿಗೆ ಮೇಲೆ ಪೊಲೀಸರು ಏಕಾಏಕಿ ಲಾಠಿಚಾರ್ಜ್ ಮಾಡಿದ್ದಾಗಿ ಆಕ್ಷೇಪಿಸಿದರು. ಜಿಲ್ಲಾಡಳಿತ- ಪೊಲೀಸ್ ಇಲಾಖೆಯ ವೈಫಲ್ಯವೇ ಇದಕ್ಕೆ ನೇರ ಕಾರಣ ಎಂದು ಸ್ಪಷ್ಟವಾಗಿ ಕಂಡುಬರುತ್ತದೆ ಎಂದು ನುಡಿದರು.


ಮಂಡ್ಯ ಜಿಲ್ಲೆ ಮದ್ದೂರಿನ ರಾಮ್- ರಹೀಂ ನಗರದಲ್ಲಿ 34 ವರ್ಷಗಳಿಂದ ನಿರಂತರವಾಗಿ ಇಲ್ಲಿ ಗಣಪತಿ ಪ್ರತಿಷ್ಠೆ ಮಾಡಿ ವಿಸರ್ಜನೆ ನಡೆಯುತ್ತಿತ್ತು. ಸೆ.7ರಂದು ಇಲ್ಲಿನ ಹಿಂದೂ ಗಣಪತಿ ಉತ್ಸವದ ವಿಸರ್ಜನೆಗೆ ಹೊರಟಾಗ ಹೊಸದಾಗಿ ನಿರ್ಮಿಸಿದ ಮಸೀದಿ ಮುಂಭಾಗದಲ್ಲಿ ಮೆರವಣಿಗೆ ತೆರಳುವಾಗ ಮ್ಯೂಸಿಕ್, ಬ್ಯಾಂಡ್ ಸೆಟ್ ಬಾರಿಸದೇ ಇರಲು ಪೊಲೀಸರು ಕೋರಿದ್ದರು. ಅದರÀಂತೆ ಕಾರ್ಯಕರ್ತರು ನಿಶ್ಶÀಬ್ದವಾಗಿ ತೆರಳುತ್ತಿದ್ದರು. 7.20ಕ್ಕೆ ಅಲ್ಲಿದ್ದ ಹೈಮಾಸ್ಟ್ ಬೀದಿದೀಪವನ್ನು ಆರಿಸಿದ್ದರು ಎಂದು ಆರೋಪಿಸಿದರು.
ಏಕಾಏಕಿ ಮನೆಗಳ ಮೇಲಿನ ಮಸೀದಿ ಕಡೆಯಿಂದ ಕಲ್ಲು ತೂರಿದ್ದಾರೆ. ಬಿಗು ವಾತಾವರಣ ನಿರ್ಮಾಣವಾಗಿದ್ದು, ಗಣಪತಿ ಉತ್ಸವದಲ್ಲಿ ತೆರಳುವ ಕಾರ್ಯಕರ್ತರ ಮೇಲೆ ಪೊಲೀಸರು ಬಲವಾದ ಲಾಠಿ ಪ್ರಹಾರ ಮಾಡಿದ್ದರು ಎಂದು ವಿವರಿಸಿದರು. ಗಣಪತಿ ವಿಗ್ರಹವನ್ನು ಪೊಲೀಸ್ ವಶಕ್ಕೆ ಪಡೆದಿದ್ದು, ಪೊಲೀಸರೇ ಗಣಪತಿ ವಿಸರ್ಜನೆ ಮಾಡಿದ್ದಾರೆ ಎಂದರು.
ಹಾದಿ ಬೀದಿಯಲ್ಲಿ ಹೋಗುವವರ ಮೇಲೂ ಲಾಠಿ ಚಾರ್ಜ್ ಮಾಡಿದ್ದು, ಮರುದಿನ ಕಾರ್ಯಕರ್ತರು ಮದ್ದೂರು ಬಂದ್ ಕರೆ ನೀಡಿದ್ದರು. ಜಿಲ್ಲೆಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದರು. ಈ ಎಲ್ಲ ಘಟನೆಗೆ ಬಿಜೆಪಿ ಕುಮ್ಮಕ್ಕೇ ಕಾರಣ. ಆರೆಸ್ಸೆಸ್, ಬಜರಂಗದಳ ಕಾರಣ ಎಂದು ಎಲ್ಲೋ ಕುಳಿತು ಹೇಳಿಕೆ ನೀಡಿದ್ದರು ಎಂದು ಟೀಕಿಸಿದರು.


ಬಳಿಕ ಸಾಮೂಹಿಕ ಗಣಪತಿ ವಿಸರ್ಜನೆಗೆ ಮುಂದಾದರು. ಆ ಮಸೀದಿಯ ಭಾಗವಾದ ಮುಸ್ಲಿಂ ಮುಖಂಡ ಆದಿಲ್ ಎಂಬುವರು ಈ ಘಟನೆಗೆ ನೇರವಾಗಿ ಮುಸ್ಲಿಂ ಯುವಕರೇ ಕಾರಣ ಎಂದು ಹೇಳಿಕೆ ಕೊಟ್ಟಿದ್ದರು. ಬಳಿಕ ಚಲುವರಾಯಸ್ವಾಮಿ ಅವರೂ ಮುಸ್ಲಿಮರ ತಪ್ಪೆಂದು ಹೇಳಿಕೆ ಕೊಟ್ಟರು. ಈ ರೀತಿ ಬೇಜವಾಬ್ದಾರಿಯಿಂದ ಸಚಿವರು ನಡೆದುಕೊಂಡಿದ್ದರು ಎಂದು ಆಕ್ಷೇಪಿಸಿದರು.


ನಾನು, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ವೆಂಕಟೇಶ್ ದೊಡ್ಡೇರಿ, ವಿಜಯಪ್ರಸಾದ್, ಡಾ.ಎನ್.ಎಸ್.ಇಂದ್ರೇಶ್, ಕು.ಮಂಜುಳಾ, ಮುಖಂಡ ಸ್ವಾಮಿಗೌಡ ಅವರಿದ್ದ ಸತ್ಯಶೋಧನಾ ಸಮಿತಿಯನ್ನು ರಾಜ್ಯಾಧ್ಯಕ್ಷರು ರಚಿಸಿದ್ದರು; ನಾವು ಸ್ಥಳಕ್ಕೆ ಭೇಟಿ ಕೊಟ್ಟಿದ್ದೇವೆ ಎಂದರು. 3 ದಿನಗಳ ಮೊದಲು ಈದ್ ಮಿಲಾದ್ ಆಚರಿಸಿದ್ದರು. ಉದ್ದೇಶಪೂರ್ವಕವಾಗಿ ಗಣೇಶನ ಪ್ರತಿಷ್ಠೆ ಮಾಡಿದ ಶಾಮಿಯಾನದ ಮುಂದೆ ಮುಸ್ಲಿಂ ಯುವಕರು ಡ್ಯಾನ್ಸ್ ಮಾಡಿದ್ದಾರೆ. ಆದರೆ, ಹಿಂದೂ ಯುವಕರು ಘರ್ಷಣೆಗೆ ಅವಕಾಶ ಮಾಡಿರಲಿಲ್ಲ; ಶಾಂತ ರೀತಿಯಿಂದ ಸ್ಪಂದಿಸಿದ್ದರು ಎಂದರು.


ಮಸೀದಿ ಮುಂದೆ ಬ್ಯಾಂಡ್ ಸೆಟ್ ಬಾರಿಸಬಾರದು; ಡ್ಯಾನ್ಸ್ ಮಾಡಬಾರದು, ಜಗಮಗಿಸುವ ಲೈಟ್ ಹಾಕಬಾರದು, ಡಿಜೆ ಹಾಕಬಾರದೆಂದು ಸಿದ್ದರಾಮಯ್ಯರ ಸರಕಾರ ಬಂದ ಮೇಲೆ ತಿಳಿಸುತ್ತಿದೆ. ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುವ ಜ್ಯೋತಿ ಎಂಬ ಮಹಿಳೆಗೆ ಅಮಾನುಷವಾಗಿ ಹೊಡೆದಿದ್ದಾರೆ. ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ 5 ಎಫ್‍ಐಆರ್ ದಾಖಲಿಸಿದ್ದಾರೆ; ವಿಚಾರಣೆಗೆ ಕರೆಯುತ್ತಿರುವುದು ತಪ್ಪು ಎಂದು ತಿಳಿಸಿದರು.

Tags: an ashwath narayan newsashwath narayanashwath narayan newsashwatha narayanabengaluru stampedec n ashwathnarayanC. N. Ashwath NarayanCN Ashwath Narayancn ashwath narayan agecn ashwath narayan educationcn ashwath narayan familycn ashwath narayan interviewcn ashwath narayan ministercnashwath narayancnashwath narayan castecnashwath narayan wifeDCM Ashwath Narayandr ashwath narayandr c n ashwath narayanDR CN Ashwath Narayanganesha visarjan incident in maddurmaddur clash newsmaddur ganeshmaddur ganesh newsmaddur ganesh processionmaddur ganesha incidentmaddur ganesha incident todaymaddur ganesha newsmaddur ganesha procession stone peltingmaddur ganesha stone peltingmaddur ganesha visarjanamaddur newsmaddur stone peltingmaddur stone pelting incidentmaddurumadduru ganesha galatemadduru ganeshtsava'madduru newsmahakumbh stampedemandya maddur newsstampede
Previous Post

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ.

Next Post

CM Siddaramaiah, KJ George: ಬೆಂಗಳೂರು ಸಿಟಿ ರೌಂಡ್ಸ್..!!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
Next Post

CM Siddaramaiah, KJ George: ಬೆಂಗಳೂರು ಸಿಟಿ ರೌಂಡ್ಸ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada