• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಮಡಿಕೇರಿ ಭಾಗಮಂಡಲ ಜಲಾವೃತ.. ಸಂಪರ್ಕ ಕಡಿತ

ಪ್ರತಿಧ್ವನಿ by ಪ್ರತಿಧ್ವನಿ
May 16, 2024
in ಇತರೆ / Others, ಇದೀಗ, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿಯ ಭಾಗಮಂಡಲ ಜಲಾವೃತ; ಸಂಪರ್ಕ ಕಡಿತ.. ​

ADVERTISEMENT

ಮೇಲಿನ ಹೆಡ್​ಲೈನ್​ ನೋಡಿ ಶಾಕ್​ ಆಗಬೇಡಿ, ಕೊಡಗಿನಲ್ಲಿ ಧಾರಾಕಾರ ಮಳೆಯಾಯ್ತಾ ಅಂದುಕೊಳ್ಳಬೇಡಿ. ಆದರೆ ಪ್ರತಿವರ್ಷ ಈ ರೀತಿಯ ಹೆಡ್​ಲೈನ್​ ಕೆಲದಿನಗಳ ಕಾಲ ಕಾಯಂ. ಮಳೆಗಾಲ ಶುರುವಾದ ಬಳಿಕ ಭಾರೀ ಮಳೆಯ ಪರಿಣಾಮ ಕಾವೇರಿ ಭೋರ್ಗರೆದು ಹರಿಯುತ್ತಾಳೆ. ಅದರಲ್ಲೂ ಕಾವೇರಿಯ ಉಗಮಸ್ಥಾನ ಭಾಗಮಂಡಲದಲ್ಲಿ ಜಲಾವೃತವಾಗುವ ಪರಿಣಾಮ ವಾಹನ ಸಂಚಾರ ಮಾಡುವುದೂ ದುಸ್ತರ ಎನ್ನುವಂತಾಗುತ್ತದೆ. ಆದರೆ ಇನ್ಮುಂದೆ ಭಾಗಮಂಡಲ ಜಲಾವೃತ, ವಾಹನ ಸಂಚಾರ ನಿಷಿದ್ಧ ಎನ್ನುವ ಮಾತು ಕೇಳಿಬರುವುದಿಲ್ಲ. ಆದರೆ ಭಾಗಮಂಡಲದಲ್ಲಿ ತುಂಬಿ ಹರಿಯುವ ನದಿಯನ್ನು ಕಣ್ತುಂಬಿಕೊಳ್ಳುವ ಅವಕಾಶವೊಂದು ತೆರೆದುಕೊಂಡಿದೆ.

ಹಾಲಿ ಇಂಧನ ಸಚಿವರಾಗಿ ಕೆಲಸ ಮಾಡುತ್ತಿರುವ ಕೆ.ಜೆ ಜಾರ್ಜ್​, 2018ರಲ್ಲೂ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಅಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ಜೆ ಜಾರ್ಜ್ ಅವರ ದೂರದೃಷ್ಟಿ ಯೋಜನೆ ಇಂದು ಸಾಕಾರಗೊಂಡಿದೆ. ಭಾಗಮಂಡಲದಲ್ಲಿ 880 ಮೀಟರ್ ಉದ್ದದ ಮೇಲ್ಸೇತುವೆ ಯೋಜನೆಗೆ ಒಪ್ಪಿಗೆ ಪಡೆದಿದ್ದರು. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಕೊಡಗಿನ ಜನರ ಸಂಕಷ್ಟಕ್ಕೆ ತೆರೆಬೀಳುವ ವಿಶ್ವಾಸ ಮೂಡಿಸಿದೆ.

ಭಾಗಮಂಡಲದ ಪ್ರವಾಹ ಪೀಡಿತ ಪ್ರದೇಶದಲ್ಲಿ ಅತ್ಯಂತ ಅಗತ್ಯವಾಗಿದ್ದ ಈ ಸೇತುವೆಯನ್ನು ನಿರ್ಮಿಸುವಲ್ಲಿ ಜಾರ್ಜ್​ ಅವರ ಪ್ರಯತ್ನದ ಫಲ ಇಂದು ಮೇಲ್ಸೇತುವೆ ಕಾಮಗಾರಿ ಮುಕ್ತಾಯವಾಗಿದೆ. ಮಳೆಗಾಲದಲ್ಲಿ ಸದಾ ಒಂದಕ್ಕೊಂದು ಪ್ರದೇಶಗಳ ಸಂಪರ್ಕ ಕಡಿದುಕೊಳ್ಳುವ ಅಪಾಯ ಪ್ರತಿವರ್ಷವೂ ಎದ್ದು ಕಾಣುತ್ತಿತ್ತು. ಆದರೆ ಇದೀಗ ಮೇಲ್ಸೇತುವೆ ಉದ್ಘಾಟನೆಗೆ ಸಜ್ಜಾಗಿ ನಿಂತಿದ್ದಾರೆ. ನೂರಾರು ವರ್ಷಗಳಿಂದ ಮಳೆಗಾಲದಲ್ಲಿ ಜೀವ ಕೈಲಿಡಿದು ಸಂಚಾರ ಮಾಡುತ್ತಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

2018ರಲ್ಲಿ ಕೊಡಗು ಉಸ್ತುವಾರಿ ಸಚಿವರಾಗಿದ್ದ ಸಚಿವ ಕೆ.ಜೆ ಜಾರ್ಜ್, ಭಾಗಮಂಡಲ ಸಮಸ್ಯೆ ಬಗ್ಗೆ ಅರಿತುಕೊಂಡಿದ್ದರು. ಭಾಗಮಂಡಲ, ಚೇರಂಗಾಲ, ಕೋರಂಗಾಲ, ತಲಕಾವೇರಿ ಮತ್ತು ಅಯ್ಯಂಗೇರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳನ್ನು ಸಂಪರ್ಕಿಸಲು ಈ ಸೇತುವೆಯ ಅಗತ್ಯವನ್ನು ಸಂಪುಟದಲ್ಲಿ ಪ್ರಸ್ತಾಪಿಸಿದರು. ಮಳೆಗಾಲದಲ್ಲಿ ಈ ಪ್ರದೇಶದ ಜೀವನಾಡಿ ಕಾವೇರಿ ನದಿಯ ಆರ್ಭಟದಲ್ಲಿ ಈ ಪ್ರದೇಶಗಳ ಸಂಪರ್ಕ ಕಡಿತ ಆಗುವ ಬಗ್ಗೆ ಸರ್ಕಾರದ ಗಮನ ಸೆಳೆದು ಯೋಜನೆ ತಂದಿದ್ದರು. ಇದೀಗ ಸಚಿವ ಜಾರ್ಜ್ ಕಾರ್ಯ ಜನಮನ್ನಣೆ ಪಡೆಯುತ್ತಿದೆ.

ರಾಜಕೀಯ ನಾಯಕರು ಎನಿಸಿಕೊಂಡವರು ಜೀವನದಲ್ಲಿ ಸಾಕಷ್ಟು ರಾಜಕಾರಣ ಮಾಡುತ್ತಾರೆ. ಜೊತೆಗೆ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಮಾಡುತ್ತಾರೆ. ಆದರೆ ಅದರಲ್ಲಿ ಕೆಲವೊಂದು ಯೋಜನೆಗಳು ಭಾವನಾತ್ಮಕ ಸ್ಥಾನ ಪಡೆದುಕೊಳ್ಳುತ್ತವೆ. ತಮ್ಮ ಜೀವನದಲ್ಲಿ ಸಾರ್ಥಕತೆಯ ಮೈಲಿಗಲ್ಲು ಸ್ಥಾಪಿಸುತ್ತವೆ. ಅದೇ ರೀತಿ ಸಚಿವ ಕೆ.ಜೆ ಜಾರ್ಜ್ ಭಾಗಮಂಡಲ ಯೋಜನೆ ಮೂಲಕ​ ಸಾರ್ಥಕತೆ ಪಡೆದುಕೊಂಡಂತಿದೆ. ಆದರೂ ಶತಮಾನಗಳ ಸಮಸ್ಯೆಗೆ ಮುಕ್ತಿ ಕೊಟ್ಟಿರುವುದು ಆ ಭಾಗದ ಜನರ ನೆಮ್ಮದಿಗೆ ಕಾರಣವಾಗಿದೆ

Previous Post

ಬರ್ತ್ ಡೇ ಆಚರಿಸಿಕೊಳ್ಳಲ್ಲ.. ದೂರದಿಂದಲೇ ನಿಮ್ಮ ಹಾರೈಕೆ ಇರಲಿ : ಮಾಜಿ ಪಿಎಂ ದೇವೇಗೌಡ ಪತ್ರಿಕಾ ಪ್ರಕಟಣೆ

Next Post

ಮತ್ತೊಂದು ಪ್ರಕರಣದಲ್ಲಿ ಮತ್ತೆ ಜಾಮೀನು ಪಡೆದ ರೇವಣ್ಣ ! ಸದ್ಯಕ್ಕೆ ಸೇಫ್ ಆದ್ರಾ ಮಾಜಿ ಸಚಿವ ?!

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
Next Post
ಅಪಹರಣದ ಕೇಸ್ ನಲ್ಲಿ ಜೈಲುಪಾಲಾಗಿರುವ ಶಾಸಕ ಅಧಿಕಾರಿಗಳಿಗೆ ಹೇಳಿದ್ದೇನು?

ಮತ್ತೊಂದು ಪ್ರಕರಣದಲ್ಲಿ ಮತ್ತೆ ಜಾಮೀನು ಪಡೆದ ರೇವಣ್ಣ ! ಸದ್ಯಕ್ಕೆ ಸೇಫ್ ಆದ್ರಾ ಮಾಜಿ ಸಚಿವ ?!

Please login to join discussion

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada