ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಶಾಲಾ ಬಾಲಕಿ ಸಾವಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದೆ.
ವಿಚಾರಣೆ ನಡೆಸಿದ ನ್ಯಾ. ಎನ್. ಸತೀಶ್ ಕುಮಾರ್ ಸೂಕ್ತ ತನಿಖೆಯ ನಂತರ ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಕಲ್ಲಕುರಿಚಿಯ ಖಾಸಗಿ ಶಾಲೆಯಲ್ಲಿ 12ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಸಾವಿಗೆ ಸಂಬಂಧಿಸಿದಂತೆ ಭಾನುವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.
ಪೊಲೀಸರು ಇಂತಹ ಘಟನೆಗಳನ್ನು ನಿಯಂತರಿಸಬೇಕು ಹಾಗೂ ಗಲಭೆಕೋರರ ವಿರುದ್ದ ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.