• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾರಾಷ್ಟ್ರ | ಕೊಲ್ಹಾಪುರದ ಮಸೀದಿಯೊಂದರ ಮೇಲೆ ದಾಳಿ ನಡೆಸಿ ಕೇಸರಿ ಧ್ವಜ ಹಾರಿಸಿದ ಗುಂಪು

ಪ್ರತಿಧ್ವನಿ by ಪ್ರತಿಧ್ವನಿ
July 16, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕೊಲ್ಹಾಪು: ಉದ್ರಿಕ್ತ ಗುಂಪೊಂದರ ಸದಸ್ಯರು ಮಸೀದಿಯೊಂದರ ಮೇಲೆ ದಾಳಿ ನಡೆಸಿ, ಅದರ ಮೇಲೆ ಕೇಸರಿ ಧ್ವಜ ಹಾರಿಸಿರುವ ಘಟನೆ ರವಿವಾರ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ನಡೆದಿದೆ ಎಂದು clarionindia.net ವರದಿ ಮಾಡಿದೆ.ವಿಶಾಲ್‌ಗಢ ಕೋಟೆಯ ಬಳಿ ಅತಿಕ್ರಮಣವಾಗಿದೆ ಎಂದು ಆರೋಪಿಸಿ ಮಾಜಿ ರಾಜ್ಯಸಭಾ ಸದಸ್ಯ ಸಂಭಾಜಿರಾಜೇ ಛತ್ರಪತಿ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಈ ಗುಂಪು ಪಾಲ್ಗೊಂಡಿತ್ತು.ವಿಶಾಲ್‌ಗಢದಿಂದ ಕೆಲ ಕಿಲೋಮೀಟರ್ ದೂರದಲ್ಲಿರುವ ಗಜಪುರ್ ಗ್ರಾಮದಲ್ಲಿನ ಮಸೀದಿಯ ಮೇಲೆ ದಾಳಿ ನಡೆಸಿದ ಈ ಗುಂಪು, ಮುಸ್ಲಿಂ ಸಮುದಾಯದ ಮೇಲೆ ಹಲ್ಲೆಯನ್ನೂ ನಡೆಸಿತು ಎಂದು ವರದಿಯಾಗಿದೆ.ಈ ದಾಳಿಯಲ್ಲಿ ಸುಮಾರು 40 ಮಂದಿ ಮುಸ್ಲಿಮರು ಗಾಯಗೊಂಡಿದ್ದು, ಮಕ್ಕಳನ್ನೂ ದಾಳಿಕೋರ ಗುಂಪು ಬಿಟ್ಟಿಲ್ಲ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸ್ಥಳೀಯ ಎಐಎಂಐಎಂ ನಾಯಕ ಇಮ್ರಾನ್ ಸನದಿ ಆರೋಪಿಸಿದ್ದಾರೆ.”ಅಲ್ಲಿನ ಪರಿಸ್ಥಿತಿ ತುಂಬಾ ಕೆಟ್ಟದಾಗಿತ್ತು. ಇದೀಗ ಪರಿಸ್ಥಿತಿ ಸುಧಾರಿಸಿದೆ. ಮನೆಗಳನ್ನು ನೆಲಸಮಗೊಳಿಸಲಾಗಿದೆ ಹಾಗೂ ಅವಕ್ಕೆ ಭಾರಿ ಹಾನಿಯನ್ನುಂಟು ಮಾಡಲಾಗಿದೆ. ಈ ಘಟನೆಯಲ್ಲಿ ಯಾರಿಗೂ ಜೀವಹಾನಿಯಾಗದಿದ್ದರೂ, ಹಲವರು ಗಾಯಗೊಂಡಿದ್ದಾರೆ. ಅವರು ದೊಣ್ಣೆ ಹಾಗೂ ಖಡ್ಗಗಳನ್ನು ಹಿಡಿದು ದಾಳಿ ನಡೆಸಿದ್ದಾರೆ. ಕೆಲವು ಪೊಲೀಸರೂ ಖಡ್ಗಗಳಿಂದ ದಾಳಿ ನಡೆಸಿದ್ದಾರೆ” ಎಂದು ಅವರು ದೂರಿದ್ದಾರೆ.

ADVERTISEMENT

My heart sinks when I see the sad situation in India, where a holy place is being vandalized. None of these goons believe in Shri Ram. Their hate for Indian Muslims is disturbing.
The worst is that the law is mute, and people in power support it. pic.twitter.com/W4nMUAwVus

— Rakhi Tripathi (@rakhitripathi) July 15, 2024

ಮಸೀದಿಯೊಂದನ್ನು ಧ್ವಂಸಗೊಳಿಸಲಾಗಿದೆ ಹಾಗೂ ಅದಕ್ಕೆ ಬೆಂಕಿ ಹಚ್ಚಲಾಗಿದೆ. ಒಂದು ಬಗೆಯ ಅನಿಲ ಬಳಸಿ ಮನೆಗಳಿಗೂ ಬೆಂಕಿ ಹಚ್ಚಲಾಗಿದೆ” ಎಂದು ಇಮ್ರಾನ್ ಸನದಿ ಆಪಾದಿಸಿದ್ದಾರೆ.ಅವರ ಪ್ರಕಾರ, ಈ ಘಟನೆಯಲ್ಲಿ ಗಾಯಗೊಂಡಿರುವವರೆಲ್ಲ ಮುಸ್ಲಿಮರೇ ಆಗಿದ್ದಾರೆ. “ಅವರು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರನ್ನು ಅಮಾನುಷವಾಗಿ ಥಳಿಸಲಾಗಿದೆ. ಆರು ವರ್ಷದ ಮಗುವಿನ ಮೇಲೂ ಹಲ್ಲೆ ನಡೆಸಲಾಗಿದೆ” ಎಂದು ಅವರು ಹೇಳಿದ್ದಾರೆ.ಈ ಘಟನೆಯ ಕೆಲವು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಕೆಲವು ಜನರು ಮಸೀದಿಯ ಗೋಡೆಗಳನ್ನೇರಿ, ಮಸೀದಿಯ ಮೇಲೆ ಕೇಸರಿ ಧ್ವಜವನ್ನು ನೆಡುತ್ತಿರುವುದು ಹಾಗೂ ಕೊಡಲಿಯಿಂದ ಮಿನಾರುಗಳನ್ನು ಹೊಡೆದು ಹಾಕುತ್ತಿರುವುದು ಕಂಡು ಬಂದಿದೆ. ಮತ್ತೊಂದು ವಿಡಿಯೊದಲ್ಲಿ ಗುಂಪೊಂದು ‘ಜೈ ಶ್ರೀರಾಮ್’ ಘೋಷಣೆ( Jai Shri Ram’ slogan)ಕೂಗುತ್ತಾ ಮಸೀದಿಯೊಳಗಿನ ಎಲ್ಲವನ್ನೂ ಧ್ವಂಸಗೊಳಿಸುತ್ತಿರುವುದು ಸೆರೆಯಾಗಿದೆ.ದಾಳಿಯಲ್ಲಿ ಭಾಗಿಯಾಗಿದ್ದ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲು ಎಐಎಂಐಎಂ ನಿಯೋಗವೊಂದು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಲು ಮುಂದಾಗಿದೆ.ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಕೊಲ್ಹಾಪುರ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪಂಡಿತ್, “ಯಾವುದೇ ಅಹಿತಕರ ಘಟನೆಯಾಗದಂತೆ ತಡೆಯಲು ಸೂಕ್ತ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಕೆಲವು ದುಷ್ಕೃತ್ಯಗಳು ನಡೆದಿವೆ ಎಂಬ ಸಂಗತಿ ನಮ್ಮ ಗಮನಕ್ಕೆ ಬಂದಿದೆ. ಈ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಿ, ಅದರಂತೆ ನಾವು ಪ್ರಕರಣಗಳನ್ನು ದಾಖಲಿಸಲಿದ್ದೇವೆ” ಎಂದು ತಿಳಿಸಿದ್ದಾರೆ ಎಂದು The Times Of India ವರದಿ ಮಾಡಿದೆ.

Tags: Home Minister Amit ShahPolice department
Previous Post

ಪ್ರೊಬೇಷನರಿ ಐಏಎಸ್‌ ಅಧಿಕಾರಿ ಪೂಜಾ ಎಂಬಿಬಿಎಸ್‌ ಪದವಿಗೆ ಸಲ್ಲಿಸಿದ್ದು ಒಬಿಸಿ ಪ್ರಮಾಣ ಪತ್ರ

Next Post

ಕಾಶ್ಮೀರದಲ್ಲಿ ತುಕ್ಕು ಹಿಡಿದ ಮಾರ್ಟರ್‌ ಶೆಲ್‌ ಮತ್ತು ಗ್ರೆನೇಡ್‌ ಪತ್ತೆ

Related Posts

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ
Top Story

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

by ಪ್ರತಿಧ್ವನಿ
April 11, 2026
0

ಭೂಮಿಯ ಮೇಲೆ ಹೆಚ್ಚುತ್ತಿರುವ ಮಾನವ ಜನಸಂಖ್ಯೆ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬುದು ಇತ್ತೀಚಿನ ಅಧ್ಯಯನವೊಂದರಿಂದ ಬೆಳಕಿಗೆ ಬಂದಿದೆ. ಪ್ರತಿ ವ್ಯವಸ್ಥೆಗೆ ಒಂದು ಮಿತಿ ಇರುವಂತೆ,...

Read moreDetails
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
Next Post
ಕಾಶ್ಮೀರದಲ್ಲಿ ತುಕ್ಕು ಹಿಡಿದ ಮಾರ್ಟರ್‌ ಶೆಲ್‌ ಮತ್ತು ಗ್ರೆನೇಡ್‌ ಪತ್ತೆ

ಕಾಶ್ಮೀರದಲ್ಲಿ ತುಕ್ಕು ಹಿಡಿದ ಮಾರ್ಟರ್‌ ಶೆಲ್‌ ಮತ್ತು ಗ್ರೆನೇಡ್‌ ಪತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada