ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ (Chinnaswamy stadium) ಸಂಭವಿಸಿದ ಕಾಲ್ತುಳಿತ (Stampede case) ದುರಂತ ರಾಜ್ಯ ಸರ್ಕಾರದ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಗಳಿದೆ. ಯಾಕಂದ್ರೆ ಜೂನ್ 12ಕ್ಕೆ ದೆಹಲಿಗೆತೆರಳಬೇಕಿದ್ದ ಸಿಎಂ ಸಿದ್ದರಾಮಯ್ಯ (Cm siddaramaiah) ಇಂದೇ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಹೌದು, ಕಾಲ್ತುಳಿತ ಪ್ರಕರಣದ ಎಪೆಕ್ಟ್ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ ಕೂಡಲೇ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮ್ಯಾಂಡ್ ಸಿದ್ದರಾಮಯ್ಯಗೆ ದಿಡೀರ್ ಬುಲಾವ್ ನೀಡಿದ್ದಾರೆ. ಈ ಹಿನ್ನಲೆ ಹೈಕಮಾಂಡ್ ಭೇಟಿ ಮಾಡಿ ಸಿದ್ದರಾಮಯ್ಯ ಮಹತ್ವದ ಮಾತುಕತೆ ನಡಸಲಿದ್ದಾರೆ.

ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಸುರ್ಜೇವಾಲ ಸಹ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾಲ್ತುಳಿತದ ವಿಚಾರವನ್ನು ತೆರೆಮರೆಗೆ ಸರಿಸಲು ಕಾಂಗ್ರೆಸ್ ಪ್ಲಾನ್ ಮಾಡ್ತಿದ್ಯಾ ಎಂಬ ಗುಮಾನಿ ಶುರುವಾಗಿದೆ. ಈ ಲೆಕ್ಕಾಚಾರದಲ್ಲಿ ಬರೋಬ್ಬರಿ 11 ಜನ ಸಚಿವರನ್ನ ಕೈಬಿಡಲು ಸಿಎಂ ಸಿದ್ದರಾಮಯ್ಯ ಮುಂದಾದ್ರಾ ಎಂಬ ರಾಜಕೀಯ ಚರ್ಚೆ ಗರಿಗೆದರಿದೆ.

ತಮ್ಮ ಸಂಪುಟದಿಂದ ಬರೋಬ್ಬರಿ 11 ಸಚಿವರಿಗೆ ಗೇಟ್ ಪಾಸ್ ನೀಡಲು ಸಿಎಂ ಮುಂದಾಗಿದ್ದಾರೆ. ಆ ಮೂಲಕ ರಾಜ್ಯದ ಗಮನವನ್ನು ಈ ಕಾಲ್ತುಳಿತ ಪ್ರಕರಣದಿಂದ ಬೇರೆಡೆಗೆ ಸೆಳೆಯಲು ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ.ಇಂದು ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿದ ಸಂದರ್ಭದಲ್ಲಿ ಈ ಬಗ್ಗೆಯೂ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.