• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 4, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: ಸಿ.ಎಂ.ಸಿದ್ದರಾಮಯ್ಯ
Share on WhatsAppShare on FacebookShare on Telegram

ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರಲು: ಸಿಎಂ

ADVERTISEMENT

ಮಂಡ್ಯ (ಕೆ.ಆರ್.ಪೇಟೆ) ಡಿ4: ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

Lok Sabha: ಸ್ಪೀಕರ್ ವಿರುದ್ಧ ವೇಣುಗೋಪಾಲ್ ತೀವ್ರ ವಾಗ್ವಾದ..! #pratidhvani  #pmmodi #congress #parliament

ED ಯವರು ತಮ್ಮ ತನಿಖೆಯ ವಿವರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿರುವುದರ ಬಗ್ಗೆ ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಹಿಂದಿನ ಉದ್ದೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ED ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ED ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

ನಾನು ಹೇಳಿದ್ನಾ?

ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.

ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಷ ನಡೆಯುತ್ತಿದೆ ಎಂದರು.

ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.

Tags: CM Siddaramaiahcm siddaramaiah wife in muda scamhigh court verdict on siddaramaiah prosecutionkerala lokayuktalokayuktalokayukta files fir against cm siddaramaiahlokayukta issues notice to siddaramaiahlokayukta noticelokayukta notice to cmlokayukta notice to siddaramaiahLokayukta raidparvathi siddaramaiahsiddaramaiah in mysore lokayukta officesiddaramaiah muda scamsiddaramaiah scamsiddaramaiah writ petition in high court
Previous Post

ಮುಂದಿನ ತಿಂಗಳಲ್ಲಿ ಮೂರು ಯುಧ್ದ ನೌಕೆ ಮತ್ತು ಜಲಾಂತರ್ಗಾಮಿ ಕಾರ್ಯಾರಂಭ ; ನೌಕಾ ಪಡೆ

Next Post

ಪೋಸ್ಟರ್ ‌ಬಿಡುಗಡೆ ಮಾಡಿ‌ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post

ಪೋಸ್ಟರ್ ‌ಬಿಡುಗಡೆ ಮಾಡಿ‌ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada