ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಕಣ ದಿನದಿಂದ ರಂಗೇರುತ್ತಿದ್ದು ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಇನ್ನು ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯಸಭೆ ವಿಪಕ್ಷ ನಾಯಕ ಮಾಜಿ ಕಮೆದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಈ ಮೊದಲು ಅಧ್ಯಕ್ಷೀಯ ಸ್ಥಾನದ ಚುನಾವಣೆಗೆ ೀ ಮೊದಲು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್ ಹೆಸರು ಕೇಳಿ ಬಂದಿದ್ದವು. ಆದರೆ, ಈ ಇಬ್ಬರು ನಾಯಕರು ಕಡೇ ಕ್ಷಣದಲ್ಲಿ ಹಿಂದೆ ಸರಿದ ಕಾರಣ ಈಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.