• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮುಸ್ಲಿಮರ ಮತ ವಿಭಜಿಸದಂತೆ ಕರೆ ನೀಡಿದ ಮಮತಾಗೆ ಚುನಾವಣಾ ಆಯೋಗ ನೋಟೀಸ್!

by
April 8, 2021
in ದೇಶ
0
ಮುಸ್ಲಿಮರ ಮತ ವಿಭಜಿಸದಂತೆ ಕರೆ ನೀಡಿದ ಮಮತಾಗೆ ಚುನಾವಣಾ ಆಯೋಗ ನೋಟೀಸ್!
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದ ಮೂರನೇ ಹಂತದ ಚುನಾವಣೆಗೆ ಮುನ್ನ, ಏಪ್ರಿಲ್ 3 ರಂದು ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಟಿಎಂಸಿ ಅಭ್ಯರ್ಥಿಗಳ ಪ್ರಚಾರ ನಡೆಸುತ್ತಿರುವಾಗ “ಕೋಮು ಆಧಾರದ ಮೇಲೆ ಮತಯಾಚನೆ ಮಾಡಿರುವ ಕುರಿತಂತೆ ಚುನಾವಣಾ ಆಯೋಗವು ಬುಧವಾರ ಸಂಜೆ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ನೋಟಿಸ್ ನೀಡಿದೆ.

ADVERTISEMENT

ನೋಟಿಸ್ ಸ್ವೀಕರಿಸಿದ 48 ಗಂಟೆಗಳ ಒಳಗೆ ಮಮತಾ ಬ್ಯಾನರ್ಜಿ ತನ್ನ ಹೇಳಿಕೆಗಳನ್ನು ವಿವರಿಸಲು ಆಯೋಗವು ನಿರ್ದೇಶಿಸಿದೆ. ತಮ್ಮ ಹೇಳಿಕೆ ನೀಡಲು ವಿಫಲವಾದಲ್ಲಿ, ಯಾವುದೇ ಮುನ್ಸೂಚನೆ ಇಲ್ಲದೆ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗವು ಮಮತಾ ಅವರಿಗೆ ಎಚ್ಚರಿಕೆ ನೀಡಿದೆ.

ಮಮತಾ ಅವರ ಭಾಷಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿ ನಿಯೋಗವು ಚುನಾವಣಾ ಆಯೋಗಕ್ಕೆ ನೀಡಿದ ದೂರಿನ ಆಧಾರದ ಮೇಲೆ ಬ್ಯಾನರ್ಜಿ ಅವರಿಗೆ ನೋಟಿಸ್ ನೀಡಲಾಗಿದೆ.

ನಾನು ನನ್ನ ಅಲ್ಪಸಂಖ್ಯಾತ ಸಹೋದರ ಸಹೋದರಿಯರಿಗೆ ಕೈಮುಗಿದು ವಿನಂತಿಸುತ್ತಿದ್ದೇನೆ … ಬಿಜೆಪಿಯಿಂದ ಹಣವನ್ನು ತೆಗೆದುಕೊಂಡ ದೆವ್ವದ ಮಾತನ್ನು ಕೇಳಿ ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಬೇಡಿ. ಅವರು ಅನೇಕ ಕೋಮು ಹೇಳಿಕೆಗಳನ್ನು ಪ್ರಸರಿಸುತ್ತಿದ್ದಾರೆ. ಆ ಮೂಲಕ ಮುಸ್ಲಿಂ ಮತ್ತು ಹಿಂದೂಗಳ ನಡುವೆ ಘರ್ಷಣೆಯನ್ನು ಪ್ರಾರಂಭಿಸುತ್ತಾರೆ. ಸಿಪಿಎಂ ಮತ್ತು ಬಿಜೆಪಿಯ ಒಡನಾಡಿಗಳು ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಲು ಬಿಜೆಪಿ ನೀಡಿದ ಹಣದಿಂದ ಸುತ್ತುತ್ತಿದ್ದಾರೆ ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

ಭಾಷಣದ ಈ ಭಾಗವನ್ನು ಉಲ್ಲೇಖಿಸಿರುವ ಚುನಾವಣಾ ಆಯೋಗವು, ಕೋಮು ಆಧಾರದ ಮೇಲೆ ಹೇಗೆ ಮತಯಾಚನೆ ಮಾಡಿದ್ದೀರೆಂದು ಮಮತಾ ಅವರನ್ನು ಪ್ರಶ್ನಿಸಿದೆ.

ಇದಕ್ಕೂ ಮೊದಲೇ, ಚುನಾವಣಾ ಆಯೋಗವು, ಕೇಂದ್ರ ಸರ್ಕಾರದ ಅಣತಿಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗದ ಪಾರದರ್ಶಕತೆಯ ಕುರಿತಂತೆ ಈ ಹಿಂದೆ ಹಲವು ಬಾರಿ ಅನುಮಾನ ವ್ಯಕ್ತಪಡಿಸಿದ್ದರು.

Mamatadi issued notice by @ECISVEEP on @BJP’s complaint

What about TMC complaints of
1. Video evidence of BJP candidate distributing cash
2. Cash coupons distributed to attend BJP mtng & vote

Gentlemen – at least keep up the farce of impartiality!

— Mahua Moitra (@MahuaMoitra) April 7, 2021

ನಂದಿಗ್ರಾಮದಲ್ಲಿ ತನಗೆ ಹಲ್ಲೆ ಮಾಡಿದ್ದಾರೆಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರೆ, ಚುನಾವಣಾ ಆಯೋಗವು ಜನಸಂದಣಿ ಹೆಚ್ಚಿದ ಕಾರಣ ಉಂಟಾದ ಘರ್ಷಣೆಯಿಂದ ಮಮತಾ ಕಾಲಿಗೆ ಗಾಯವಾಗಿದೆ ಎಂದು ಬ್ಯಾನರ್ಜಿಯ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿತ್ತು.

ಚುನಾವಣಾ ಆಯೋಗ ನೋಟೀಸ್‌ ನೀಡಿದ ಕೆಲವೇ ಕ್ಷಣದಲ್ಲಿ ಪ್ರತಿಕ್ರಿಯಿಸಿದ ತೃಣಮೂಲ ಸಂಸದ ಮಾಹುವಾ ಮೊಯಿತ್ರಾ, “ಬಿಜೆಪಿಯ ದೂರುಗಳ ಬಗ್ಗೆ ಮಮತಾ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಗೊಳಿಸಿದ್ದಾರೆ. ಟಿಎಂಸಿ ದೂರುಗಳ ಬಗ್ಗೆ ಯಾಕೆ ಏನು ಕ್ರಮಗಳಿಲ್ಲ ಎಂದು ಪ್ರಶ್ನಿಸಿದ್ದಾರೆ. ಕನಿಷ್ಠ ಪಕ್ಷ ನಿಷ್ಪಕ್ಷಪಾತ ಮಾಡುವಂತೆ ನಾಟಕವನ್ನಾದರೂ ಮಾಡಿ ಎಂದು ಅವರು ಆಯೋಗವನ್ನು ಲೇವಡಿ ಮಾಡಿದ್ದಾರೆ.

Previous Post

ಸದ್ಯದ ಕಡುಕಷ್ಟದ ಪರಿಸ್ಥಿತಿಗೆ ಪಿಎಂ ಮತ್ತು ಸಿಎಂಗಳ ಸಭೆಯಲ್ಲಿ ಸಿಗುವುದೇ ಸೂಕ್ತ ಪರಿಹಾರ?

Next Post

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ತಯಾರಾಗಿದೆ: ಸಚಿವ ಸುರೇಶ್‌ ಕುಮಾರ್

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ತಯಾರಾಗಿದೆ: ಸಚಿವ ಸುರೇಶ್‌ ಕುಮಾರ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ತಯಾರಾಗಿದೆ: ಸಚಿವ ಸುರೇಶ್‌ ಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada