• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೋದಿಯನ್ನು ಇಂದಿರಾ ಗಾಂಧಿಗೆ ಹೋಲಿಸಿದ ದೀದಿ

ಪ್ರತಿಧ್ವನಿ by ಪ್ರತಿಧ್ವನಿ
December 2, 2021
in ದೇಶ, ರಾಜಕೀಯ
0
ಮೋದಿಯನ್ನು ಇಂದಿರಾ ಗಾಂಧಿಗೆ ಹೋಲಿಸಿದ ದೀದಿ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ನಡುವಿನ ಹೋಲಿಕೆಯನ್ನು ತೆರೆದಿಟ್ಟಿದ್ದಾರೆ. ಜನರು ಹೇಗೆ ಇಂದಿರಾ ಗಾಂಧಿಯನ್ನು ಕ್ಷಮಿಸಿರಲಿಲ್ಲವೋ, ಅದೇ ರೀತಿ ಪ್ರಧಾನಿ ಮೋದಿಯನ್ನೂ ಕ್ಷಮಿಸುವುದಿಲ್ಲ ಎಂದು ಹೇಳಿ ಕಾಂಗ್ರೆಸ್ ಹಾಗೂ ಬಿಜೆಪಿಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಮುಂಬೈನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮಮತಾ ಬ್ಯಾನರ್ಜಿ, ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ನಂತರ ಪ್ರಧಾನಿ ಮೋದಿ ಕ್ಷಮೆ ಕೇಳಿದ್ದರು. ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ ಬಳಿಕ 1977ರಲ್ಲಿ ಇಂದಿರಾ ಗಾಂಧಿಯವರೂ ಬಹಿರಂಗ ಕ್ಷಮೆ ಕೇಳಿದ್ದರು. ಆದರೆ, ಜನ ಅವರನ್ನು ಕ್ಷಮಿಸಿರಲಿಲ್ಲ. ಇಂದಿರಾ ಗಾಂಧಿ ತುಂಬಾ ಶಕ್ತಿಶಾಲಿ ನಾಯಕಿಯಾಗಿದ್ದರೂ, ಜನರ ಮನಸ್ಸಿನಲ್ಲಿ ಉಳಿದುಕೊಂಡಿದ್ದು ತುರ್ತು ಪರಿಸ್ಥಿತಿಯ ಕರಾಳ ನೆನಪು ಮಾತ್ರ. ಅದೇ ರೀತಿ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದು ನಂತರ ಅದನ್ನು ವಾಪಸ್ ಪಡೆಯುವ ವೇಳೆ ಪ್ರಧಾನಿ ಮೋದಿ ಕ್ಷಮೆ ಕೇಳಿದ್ದರೂ, ದೇಶದ ಜನ ಅವರನ್ನು ಕ್ಷಮಿಸುವುದಿಲ್ಲ, ಎಂದು ಬ್ಯಾನರ್ಜಿ ಹೇಳಿದ್ದಾರೆ.

ಈಗಾಗಲೇ ಮುಂಬರುವ ಲೋಕಸಭಾ ಚುನಾವಣೆಯ ವೇಳೆ ಸಂಪೂರ್ಣ ದೇಶದಲ್ಲಿ ತೃಣಮೂಲ ಕಾಂಗ್ರೆಸ್ ಅನ್ನು ಅಸ್ಥಿತ್ವಕ್ಕೆ ತರುವ ಬೃಹತ್ ಯೋಜನೆಯನ್ನು ದೀದಿ ಹಮ್ಮಿಕೊಂಡಿದ್ದಾರೆ. ಇದೇ ಕಾರಣಕ್ಕಾಗಿ ದೇಶಾದ್ಯಂತ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಮುಂಬೈನಲ್ಲಿ ಸಭೆ ನಡೆಸಿದ್ದಾರೆ

.

ಈ ವೇಳೆ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿರುವ ಸಿಎಂ ಮಮತಾ,

“ಯಾವುದೇ ಚರ್ಚೆಯಿಲ್ಲದೇ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲಾಗಿದೆ. ಇದಕ್ಕೆ ಕಾರಣ ಎಲ್ಲರಿಗೂ ಸ್ಪಷ್ಟವಾಗಿ ತಿಳಿದಿದೆ. ಉತ್ತರ ಪ್ರದೇಶ ಚುನಾವಣೆಗಾಗಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲಾಗಿದೆ. ಬಿಜೆಪಿಯಲ್ಲಿ ಭಯ ಸೃಷ್ಟಿಯಾಗಿದೆ. ಅವರು ಸುರಕ್ಷಿತವಾಗಿದ್ದಾರೆ ಎಂದು ಆಲೋಚಿಸುತ್ತಿಲ್ಲ. ದೇಶವನ್ನು ಬದುಕಿಸಬೇಕಾಗಿದೆ. ಚಿಂತಿಸಬೇಡಿ, ಎಲ್ಲವು ಸರಿಯಾಗುತ್ತೆ,” ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಕಾಂಗ್ರೆಸ್ ನಿಷ್ಕ್ರೀಯತೆಯನ್ನು ದೂಷಿಸಿರುವ ಮಮತಾ ಬ್ಯಾನರ್ಜಿ, ಯುಪಿಎ ಮೈತ್ರಿಕೂಟ ಬಿಜೆಪಿಯ ಫ್ಯಾಸಿಸಂ ವಿರುದ್ದ ಹೋರಾಡದೇ ಇದ್ದದ್ದು ಬಿಜೆಪಿಗೆ ವರದಾನವಾಯಿತು, ಎಂದಿದ್ದಾರೆ.

“ಯಾವ ಯುಪಿಎ? ಈಗ ಯುಪಿಎ ಎಂಬುದು ಅಸ್ಥಿತ್ವದಲ್ಲಿ ಇಲ್ಲ. ಯುಪಿಎ ಮತ್ತು ಎನ್ ಡಿ ಎ ಹೊರತಾಗಿ ಒಂದು ದೃಢವಾದ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬೇಕಾದ ಅಗತ್ಯತೆಯಿದೆ,” ಎಂದು ಅವರು ಹೇಳಿದ್ದಾರೆ.

ಯುಪಿಎ ಮೈತ್ರಿಕೂಟದ ಪ್ರಮುಖ ಭಾಗವಾಗಿದ್ದ ಶರದ್ ಪವಾರ್ ಅವರನ್ನು ಭೇಟಿಯಾದ ಬಳಿಕ ಮಮತಾ ಬ್ಯಾನರ್ಜಿ ಈ ಮಾತುಗಳನ್ನಾಡಿರುವುದು ತೃತೀಯ ರಂಗ ರಚನೆಯ ಮುನ್ಸೂಚನೆ ಲಭಿಸಿದಂತಿದೆ.

Tags: BJPCongress PartyCovid 19ದೀದಿನರೇಂದ್ರ ಮೋದಿಬಿಜೆಪಿ
Previous Post

ಕರ್ನಾಟಕದಲ್ಲಿ ಎರಡು ಒಮಿಕ್ರಾನ್ ಸೋಂಕು ದೃಢ

Next Post

ಸಿಎಂ ಬದಲಾವಣೆ ಬಿಜೆಪಿ ನಕ್ಷತ್ರದಲ್ಲಿಯೇ ಇದೆ : ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಸಿಎಂ ಬದಲಾವಣೆ ಬಿಜೆಪಿ ನಕ್ಷತ್ರದಲ್ಲಿಯೇ ಇದೆ : ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

ಸಿಎಂ ಬದಲಾವಣೆ ಬಿಜೆಪಿ ನಕ್ಷತ್ರದಲ್ಲಿಯೇ ಇದೆ : ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada