ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾನುವಾರ ಪ್ರಧಾನಿ ಮೋದಿಗೆ ಪತ್ರ ಬರೆದು ಗಣರಾಜ್ಯೋತ್ಸವ ಪರೇಡ್ಗೆ ಪಶ್ಚಿಮ ಬಂಗಾಳದ ಪ್ರಸ್ತಾವಿತ ಟ್ಯಾಬ್ಲೋವನ್ನು ತಿರಸ್ಕರಿಸಿದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.
“ಯಾವುದೇ ಕಾರಣಗಳು ಅಥವಾ ಸಮರ್ಥನೆಗಳನ್ನು ನೀಡದೆಯೇ ಟ್ಯಾಬ್ಲೋವನ್ನು ತಿರಸ್ಕರಿಸಲಾಗಿದೆ ಎಂಬುದು ನಮಗೆ ಇನ್ನಷ್ಟು ದಿಗ್ಭ್ರಮೆಗೊಳಿಸುವ ಸಂಗತಿಯಾಗಿದೆ” ಎಂದು ಪತ್ರದಲ್ಲಿ ಮಮತಾ ಬರೆದಿದ್ದಾರೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಅವರ 125 ನೇ ಜನ್ಮ ವಾರ್ಷಿಕೋತ್ಸವದಂದು ಅವರ ಭಾರತೀಯ ರಾಷ್ಟ್ರೀಯ ಸೇನೆಯನ್ನು ಸ್ಮರಿಸುವುದಕ್ಕಾಗಿ ಪ್ರಸ್ತಾವಿತ ಟ್ಯಾಬ್ಲೋ ಆದಾಗಿತ್ತು. ಟ್ಯಾಬ್ಲೋವು ವಿದ್ಯಾಸಾಗರ್, ರವೀಂದ್ರನಾಥ ಠಾಗೋರ್, ವಿವೇಕಾನಂದ, ಚಿತ್ತರಂಜನ್ ದಾಸ್, ಶ್ರೀ ಅರಬಿಂದೋ, ಮಾತಂಗಿನಿ ಹಜ್ರಾ, ಬಿರ್ಸಾ ಮುಂಡಾ, ನಜ್ರುಲ್ ಇಸ್ಲಾಂ ಅವರ ಭಾವಚಿತ್ರಗಳನ್ನು ಹೊಂದಿತ್ತು ಎಂದು ಮಮತಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
“ಪಶ್ಚಿಮ ಬಂಗಾಳದ ಎಲ್ಲಾ ಜನರು ಕೇಂದ್ರ ಸರ್ಕಾರದ ಈ ಧೋರಣೆಯಿಂದ ತೀವ್ರ ನೋವನ್ನು ಅನುಭವಿಸಿದ್ದಾರೆ. ಬಂಗಾಳವು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು ಮತ್ತು ವಿಭಜನೆಯ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಭಾರಿ ಬೆಲೆ ಪಾವತಿಸಿದೆ” ಎಂದು ಮಮತಾ ಹೇಳಿರುವರು.
ಕಳೆದ ಕೆಲವು ವರ್ಷಗಳಲ್ಲಿ ಇದು ನಾಲ್ಕನೇ ಬಾರಿಗೆ ಪಶ್ಚಿಮ ಬಂಗಾಳದ ಟ್ಯಾಬ್ಲೋ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ. 2015, 2017 ಮತ್ತು 2020 ರಲ್ಲಿ, ಪಶ್ಚಿಮ ಬಂಗಾಳದ ಟ್ಯಾಬ್ಲೋ ಪ್ರಸ್ತಾಪಗಳನ್ನು ತಿರಸ್ಕರಿಸಲಾಗಿದೆ.
ಹಾಗೆಯೇ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಟ್ಯಾಬ್ಲೋ ನಿರಾಕರಣೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. “2022 ರ ಗಣರಾಜ್ಯೋತ್ಸವದಂದು ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿ ಅವರ ಸಾಂಸ್ಕೃತಿಕ ಪರಂಪರೆ ಮತ್ತು ನೇತಾಜಿ ಅವರ ಜೀವನ ಮತ್ತು ಕೊಡುಗೆಗಳನ್ನು ಪ್ರದರ್ಶಿಸುವ ಟ್ಯಾಬ್ಲೋಗಾಗಿ ಪಶ್ಚಿಮ ಬಂಗಾಳದ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ತಿಳಿದು ನಮಗೆ ನಿರಾಶೆ ಮತ್ತು ಆಘಾತವಾಗಿದೆ. ಇದು ಜನರಿಗೆ ಮಾಡಿದ ಅವಮಾನವಾಗಿದೆ. ಪಶ್ಚಿಮ ಬಂಗಾಳ, ಅದರ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಮಹಾನ್ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್” ಎಂದು ಚೌಧರಿ ಬರೆದಿದ್ದಾರೆ.