ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಪಾರ್ಥ ಮುಖರ್ಜಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡರೂ ಆಗಿರುವ ಪಾರ್ಥ ಮುಖರ್ಜಿ ಅವರನ್ನು ಅಕ್ರಮಣ ಹಣ ವರ್ಗಾವಣೆ ಆರೋಪದಲ್ಲಿ ಸುಮಾರು 26 ಗಂಟೆ ವಿಚಾರಣೆ ನಂತರ ಇಡಿ ಬಂದಿಸಿದೆ.
ಸಚಿವ ಪಾರ್ಥ ಮುಖರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ನಿವಾಸದಲ್ಲಿ 20 ಕೋಟಿ ರೂ. ನಗದು ಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಜೂನ್ 29ರಂದು ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ, ಶಾಲಾ ಸಿಬ್ಬಂದಿ ನೇಮಕಾತಿಗಳಲ್ಲಿ ಅಕ್ರಮ ನಡೆದಿದೆ ಎಂಬ ದೂರಿನಲ್ಲಿ ೨ ಎಫ್ ಐಆರ್ ದಾಖಲಿಸಿಕೊಂಡು ಇಡಿ ತನಿಖೆ ಆರಂಭಿಸಿತ್ತು.