• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರು ಏರ್‌ಪೋರ್ಟ್ ಬಾಂಬ್ ಪತ್ತೆ ಪ್ರಕರಣ : ಮನೆಯಲ್ಲಿಯೇ ಬಾಂಬ್ ತಯಾರಿಸಿದ್ದ ಆದಿತ್ಯ ರಾವ್

ಪ್ರತಿಧ್ವನಿ by ಪ್ರತಿಧ್ವನಿ
March 18, 2022
in ಕರ್ನಾಟಕ
0
ಮಂಗಳೂರು ಏರ್‌ಪೋರ್ಟ್ ಬಾಂಬ್ ಪತ್ತೆ ಪ್ರಕರಣ : ಮನೆಯಲ್ಲಿಯೇ ಬಾಂಬ್ ತಯಾರಿಸಿದ್ದ ಆದಿತ್ಯ ರಾವ್
Share on WhatsAppShare on FacebookShare on Telegram

ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಇರಿಸಿ ದುಷ್ಕೃತ್ಯ ಎಸಗಲು ಯತ್ನಿಸಿದ್ದ ಶಂಕಿತ ಉಗ್ರ ಆದಿತ್ಯ ರಾವ್ ಗೆ ನ್ಯಾಯಾಲಯವು 20 ವರ್ಷಗಳ ಸಜೆ ವಿಧಿಸಿದೆ. ಸುಮಾರು ಎರಡು ವರ್ಷಗಳ ನಿರಂತರ ವಿಚಾರಣೆಯ ಬಳಿಕ ಕೋರ್ಟ್ ತೀರ್ಪು ನೀಡಿದೆ. ಈ ವೇಳೆ, ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಅಮೇಜಾನ್ ಮೂಲಕ ತರಿಸಿಕೊಂಡಿರುವ ಸತ್ಯಾಂಶ ಬಯಲಾಗಿದೆ.

ADVERTISEMENT

ಸುಮಾರು 80 ಪುಟಗಳ ತೀರ್ಪಿನಲ್ಲಿ ತನಿಖಾ ದಳ ಕಂಡುಹಿಡಿದ ಅಂಶಗಳ ಕುರಿತು ಪ್ರಸ್ತಾಪಿಸಲಾಗಿದೆ. ಜನರ ಜೀವಕ್ಕೆ ಹಾಣಿ ಉಂಟು ಮಾಡುವ ಹಾಗೂ ಭಯ ಹುಟ್ಟಿಸುವ ಉದ್ದೇಶದಿಂದ ಆದಿತ್ಯ ರಾವ್ ಬಾಂಬ್ ಸ್ಫೋಟಿಸುವ ಸಂಚು ರೂಪಿಸಿದ್ದ. ಹಾಗಾಗಿ, ಬಾಂಬ್ ನಿರ್ಮಿಸುವ ವಿಧಾನವನ್ನು ತಿಳಿಯಲು ‘Just Dial’ ಸಂಸ್ಥೆಯೊಂದಿಗೆ ಸಂಪರ್ಕ ಬೆಳೆಸಿದ್ದ, ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಬಾಂಬ್ ತಯಾರಿ ಕುರಿತು ತಿಳಿಯಲು ಹಲವು ಸೈಬರ್ ಸೆಂಟರ್ಗಳಿಗೆ ರಾವ್ ಭೇಟಿ ನೀಡಿದ್ದ. ಹಲವು ಅಂತರ್ಜಾಲ ತಾಣಗಳಿಂದ ಮಾಹಿತಿ ಪಡೆದು ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಅಮೇಜಾನ್ ಮೂಲಕ ಸಂಪಾದಿಸಿದ್ದ. ಯಾವುದೇ ಪರವಾನಗಿ ಇಲ್ಲದೇ ಬಾಂಬ್ ತಯಾರಿಕಾ ವಸ್ತುಗಳನ್ನು ಸಂಗ್ರಹಿಸಿದ್ದ ಆದಿತ್ಯ ರಾವ್, ಅವುಗಳನ್ನು ಮಂಗಳೂರಿನ ಹೋಟೆಲ್ ಒಂದರ ಕಾರ್ಮಿಕರ ಮನೆಗಳಲ್ಲಿ ಬಚ್ಚಿಟ್ಟಿದ್ದ. ಇದರ ಬಳಿಕ, ಕಚ್ಚಾ ವಸ್ತುಗಳನ್ನು ಬಳಸಿ ಸ್ಫೋಟಕವನ್ನು ತಯಾರಿಸಿದ್ದ. ಬಳಿಕ, ಕಪ್ಪು ಬಣ್ಣದ ಬ್ಯಾಗ್ ನಲ್ಲಿ ಸ್ಫೋಟಕ ತುಂಬಿ ಜನನಿಬಿಡ ಸ್ಥಳವಾದ ಮಂಗಳೂರು ಏರ್‌ಪೋರ್ಟ್‌ನ ನಿರ್ಗಮನ ಗೇಟ್ ಬಳಿ ಇರಿಸಿದ್ದ ಎಂದು ತನಿಖಾದಳವು ವರದಿ ನೀಡಿದೆ.

2018ರಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಸೂಪರ್ವೈಸರ್ ಕೆಲಸಕ್ಕೆ ಆದಿತ್ಯ ರಾವ್ ಅರ್ಜಿ ಸಲ್ಲಿಸಿದ್ದ. ಅದಕ್ಕಾಗಿ ಸುಮಾರು ರೂ. 7,500 ಖರ್ಚು ಮಾಡಿದ್ದ. ಆ ಕೆಲಸ ಸಿಗದ ಕಾರಣ, ವಿಮಾನ ನಿಲ್ದಾಣದಲ್ಲಿ ಹಾಗೂ ರೈಲು ನಿಲ್ದಾಣದಲ್ಲಿ ಬಾಂಬ್ ಇರುವುದಾಗಿ ಸುಳ್ಳು ಬೆದರಿಕೆ ಕರೆ ಮಾಡಿ ಆತಂಕ ಸೃಷ್ಟಿಸಿದ್ದ.

ಈ ಕಾರಣಕ್ಕಾಗಿ ಅವನಿಗೆ ಒಂದು ವರ್ಷದ ಜೈಲು ಶಿಕ್ಷೆಯೂ ಆಗಿತ್ತು. ಇದರಿಂದಾಗಿ ಸರ್ಕಾರದ ವಿರುದ್ದ ದ್ವೇಷ ಭಾವನೆಯನ್ನು ಬೆಳೆಸಿಕೊಂಡಿದ್ದ ಆದಿತ್ಯ ರಾವ್, ಬಾಂಬ್ ಸ್ಫೋಟದಂತಹ ದುಷ್ಕೃತ್ಯಗಳನ್ನು ಮಾಡಲು ನಿರ್ಧರಿಸಿದ್ದ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಸ್ಫೋಟಕ ವಸ್ತುಗಳ ಕಾಯ್ದೆ (1908)ರ ಸೆಕ್ಷನ್ 4 ಹಾಗೂ ಯುಎಪಿಎ 1967ರ ಸೆಕ್ಷನ್ 16ರ ಅಡಿಯಲ್ಲಿ ಆದಿತ್ಯ ರಾವ್ ನನ್ನು ದೋಷಿ ಎಂದು ಪರಿಗಣಿಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ರೂ. ಹತ್ತು ಸಾವಿರ ದಂಡವನ್ನು ವಿಧಿಸಿ ತೀರ್ಪು ನೀಡಿದೆ. ಜನವರಿ 20, 2020ರಂದು ಆದಿತ್ಯ ರಾವ್ ಬಾಂಬ್ ಇರಿಸಿದ್ದ. ಭದ್ರತಾ ಅಧಿಕಾರಿಗಳು ಅಂದೇ ಬಾಂಬ್ ಪತ್ತೆ ಮಾಡಿ ಅದನ್ನು ನಿಷ್ಕ್ರೀಯಗೊಳಿಸಿದ್ದರು.

ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆದಿತ್ಯ ಕೊನೆಗೆ ಡಿಜಿಪಿ ಕಚೇರಿಯಲ್ಲಿ ಶರಣಾಗಿದ್ದ. ನ್ಯಾಯಾಲಯದಲ್ಲಿ ತಾನೇ ತಪ್ಪಿತಸ್ಥ ಎಂದು ಆದಿತ್ಯ ಒಪ್ಪಿಕೊಂಡಿದ್ದರೂ, CrPC ಸೆಕ್ಷನ್ 229ರ ಅಡಿಯಲ್ಲಿ ಅವನ ಮೇಲಿನ ಆರೋಪಗಳನ್ನು ಸಾಬೀತುಪಡಿಸಲು ಸರ್ಕಾರಿ ವಕೀಲರಿಗೆ ನ್ಯಾಯಾಲಯ ಆದೇಶ ನೀಡಿತ್ತು.

Tags: ಆದಿತ್ಯ ರಾವ್ಏರ್‌ಪೋರ್ಟ್ಏರ್‌ಪೋರ್ಟ್ ಬಾಂಬ್ಮಂಗಳೂರುಮಂಗಳೂರು ಜಿಲ್ಲೆಮಂಗಳೂರು ನಗರಮಂಗಳೂರು ನಗರ ಪೊಲೀಸ್ಮಂಗಳೂರು ಪೊಲೀಸ್ಮಂಗಳೂರು ಪೋಲಿಸರು
Previous Post

ಅಧಿಕಾರಕ್ಕೇರಿದ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹಕ್ಕೆ ಮಾಸ್ಟರ್ ಪ್ಲಾನ್ ಮಾಡಿದ ಪಂಜಾಬ್ ಎಎಪಿ : ಕೇಜ್ರಿವಾಲ್ ಹೇಳಿದ್ದೇನು?

Next Post

ಆರ್ಟಿಕಲ್ 370 ಮತ್ತು ಸರದಾರ್ ಪಟೇಲ್

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ಆರ್ಟಿಕಲ್ 370 ಮತ್ತು ಸರದಾರ್ ಪಟೇಲ್

ಆರ್ಟಿಕಲ್ 370 ಮತ್ತು ಸರದಾರ್ ಪಟೇಲ್

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada