• Home
  • About Us
  • ಕರ್ನಾಟಕ
Sunday, November 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೊಡವರನ್ನು ಹಿಂದುಳಿದ ಪಟ್ಟಿಗೆ ಸೇರಿಸಲು ಒತ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
August 31, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಡಿಕೇರಿ, :ಯುನೈಟೆಡ್ ಕೊಡವ ಆರ್ಗನೈಜೇಶನ್ (ಯುಕೊ) ಸಂಘಟನೆಯ ನಿಯೋಗವು ಇಂದು ಮೈಸೂರಿನಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಟದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿಮಾಡಿ ಕೊಡವರನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸುವಂತೆ ಮನವಿ ಸಲ್ಲಿಸಿ ಚರ್ಚೆ ನಡೆಸಿತು.

ADVERTISEMENT

ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದಲ್ಲಿ ನಗರದ ಕಾಡ ಕಛೇರಿ ಆವರಣದಲ್ಲಿರುವ ಸಂಸದರ ಕಛೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದ ನಿಯೋಗವು, ಕೊಡವ ಜನಾಂಗವು ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಪ್ರವರ್ಗ ೩ ಎ ಅಡಿಯಲ್ಲಿ ವರ್ಗೀಕರಣ ಗೊಂಡು ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಗೆ ಭಾಜನರಾಗಿರುತ್ತಾರೆ. ಆದರೆ, ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೊಡವರನ್ನು ಕೈಬಿಡಲಾಗಿದ್ದು, ಇದರಿಂದಾಗಿ ಕೇಂದ್ರ ಸರ್ಕಾರದ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಯಲ್ಲಿ ಕೊಡವರಿಗೆ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ಕೊಡವರನ್ನು ಹಿಂದುಳಿದ ವರ್ಗಗಳ ಕೇಂದ್ರದ ಪಟ್ಟಿಗೆ ಸೇರ್ಪಡೆಗೊಳಿಸುವ ಕುರಿತಂತೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಯಿತು.

ಹಾಗೆಯೇ ಕೇಂದ್ರ ಸರ್ಕಾರವು ಯು.ಜಿ.ಸಿ ಸಹಯೋಗದಲ್ಲಿ, ಅಳಿವಿ ನಂಚಿನಲ್ಲಿರುವ ಭಾಷೆಗಳ ಅಭಿವೃದ್ಧಿ ನಿಟ್ಟಿನಲ್ಲಿ, ದಾಖಲೀಕರಣ, ಅಧ್ಯಯನ ಹಾಗೂ ಸಂರಕ್ಷಣೆಯ ಧ್ಯೇಯದೊಂದಿಗೆ ಪ್ರಾರಂಭಿಸಿರುವ ಎಸ್.ಪಿ.ಪಿ.ಪಿ.ಇ.ಎಲ್ ಹಾಗೂ ಅಸ್ಮಿತ ಎಂಬ ಎರಡು ಯೋಜನೆಗೆ ಯುನೆಸ್ಕೋ ವರದಿಯ ಆಧಾರದಲ್ಲಿ ಅಳಿವಿನಂಚಿನಲ್ಲಿರುವ ಕೊಡವ ಜನಾಂಗವು ಅರ್ಹತೆಯನ್ನು ಹೊಂದಿದ್ದು, ಈ ಯೋಜನೆಗೆ ಕೊಡವ ಭಾಷೆಯನ್ನು ಪರಿಗಣಿಸುವಂತೆಯೂ ಸಂಸದರೊAದಿಗೆ ಚರ್ಚಿಸಲಾಯಿತು.

ಮನವಿ ಸ್ವೀಕರಿಸಿ, ಪೂರಕವಾಗಿ ಸ್ಪಂದಿಸಿ ಮಾತನಾಡಿದ ಸಂಸದರು ಮನವಿಯಲ್ಲಿನ ಅಂಶಗಳನ್ನು ಪರಿಗಣಿಸಿ, ಪರಿಶೀಲಿಸಿ ಸೂಕ್ತವಾದ ಪ್ರಕ್ರಿಯೆಗಳ ಮೂಲಕ ಮನವಿಯಲ್ಲಿನ ಅಂಶಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿಯೂ ತಿಳಿಸಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಕೊಡಗು ಮೈಸೂರು ಕ್ಷೇತ್ರದ ಮಾಜಿ ಸಂಸದ ಹಾಗೂ ಹಾಲಿ ಎಂ.ಎಲ್.ಸಿ ಅಡಗೂರು ಎಚ್. ವಿಶ್ವನಾಥ್ ಮಾತನಾಡಿ, ಕೊಡವರ ಐತಿಹಾಸಿಕ ಹಿನೆÀ್ನಲೆ, ದೇಶಕ್ಕೆ ಕೊಡವರ ಕೊಡುಗೆ ಹಾಗೂ ಕೊಡವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಸಂಸದರಿಗೆ ಮನವರಿಕೆ ಮಾಡಿದರು.

ನಿಯೋಗದಲ್ಲಿ ಚೆಪ್ಪುಡಿರ ಸುಜು ಕರುಂಬಯ್ಯ, ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ನೆಲ್ಲಮಕ್ಕಡ ಜೆಫ್ರಿ ಮಾದಯ್ಯ, ಅಜ್ಜಿನಿಕಂಡ ಸೂರಜ್ ತಿಮ್ಮಯ್ಯ, ಮಚ್ಚಾಮಾಡ ಅರುಣ ಸೋಮಯ್ಯ, ರಮೇಶ್, ಬೊಳಿಯಂಗಡ ಬೋಪಣ್ಣ, ಪುದಿಯೊಕ್ಕಡ ದಿನೇಶ್, ತೀತಿಮಾಡ ಬೋಸ್ ಅಯ್ಯಪ್ಪ, ಪೊಂಜAಡ ಗಿರಿ, ಚಿರಿಯಪಂಡ ವಿಶು ಕಾಳಪ್ಪ, ಚೆಪ್ಪುಡಿರ ಪ್ರತಿಮಾ ಕರುಂಬಯ್ಯ, ಕಳ್ಳಿಚಂಡ ದೀನ ಉತ್ತಪ್ಪ, ಬೊಳ್ಳಚೆಟ್ಟಿರ ಮೈನಾ ಕಾಳಪ್ಪ, ಕೊಕ್ಕಲೆಮಾಡ ರತಿ ಕುಶಾಲಪ್ಪ, ಇದ್ದರು.

Tags: backward classes.Government of KarnatakaUnited Kodava Organization (UCO)
Previous Post

ಅಸ್ಸಾಂ ಮುಖ್ಯ ಮಂತ್ರಿಯನ್ನು ವಜಾ ಮಾಡುವಂತೆ ವಿರೋಧ ಪಕ್ಷಗಳಿಂದ ರಾಷ್ಟ್ರಪತಿಗೆ ಮನವಿ

Next Post

ಎರಡು ವಂದೇ ಭಾರತ್‌ ರೈಲುಗಳಲ್ಲಿ ಬುಕಿಂಗ್‌ ಲಭ್ಯ ; ರೈಲ್ವೇ ಇಲಾಖೆ

Related Posts

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
0

  https://youtu.be/Y21a0uwLDB8 ದೆಹಲಿ, ಅ.15: "ನನಗೆ ಏನೂ ತಿಳಿದಿಲ್ಲ. ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ...

Read moreDetails
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

November 15, 2025
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

November 15, 2025
‘ನಂದಿನಿ’ ಹೆಸರಲ್ಲಿ ಕಲಬೆರೆಕೆ ತುಪ್ಪ- ಬೃಹತ್ ಜಾಲ ಬಯಲು

‘ನಂದಿನಿ’ ಹೆಸರಲ್ಲಿ ಕಲಬೆರೆಕೆ ತುಪ್ಪ- ಬೃಹತ್ ಜಾಲ ಬಯಲು

November 15, 2025
Next Post

ಎರಡು ವಂದೇ ಭಾರತ್‌ ರೈಲುಗಳಲ್ಲಿ ಬುಕಿಂಗ್‌ ಲಭ್ಯ ; ರೈಲ್ವೇ ಇಲಾಖೆ

Recent News

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು
Top Story

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

by ಪ್ರತಿಧ್ವನಿ
November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು
Top Story

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

by ಪ್ರತಿಧ್ವನಿ
November 15, 2025
ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ
Top Story

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

by ಪ್ರತಿಧ್ವನಿ
November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌
Top Story

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

by ಪ್ರತಿಧ್ವನಿ
November 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

November 15, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada