ಸಕ್ಕರೆನಾಡು ಮಂಡ್ಯದಲ್ಲಿ ಶತಾಯ ಗತಾಯ ಈ ಬಾರಿ ಗೆದ್ದು ಬೀಗುವ ಹಂಬಲದಲ್ಲಿರುವ ಬಿಜೆಪಿ ಜೆಡಿಎಸ್ಗೆ ಸೆಡ್ಡು ಹೊಡೆಯುತ್ತಾ ಬಂದಿದೆ.
ಇನ್ನು ಜಿಲ್ಲೆಯಲ್ಲಿ ಧರ್ಮಯಾತ್ರೆ ಪಾಲಿಟಿಕ್ಸ್ ಜೋರಾಗಿದ್ದು ಜೆಡಿಎಸ್ಗೆ ಸೆಡ್ಡು ಹೊಡೆಯಲೆಂದು ಬಿಜೆಪಿ ನಾಯಕರು ಮತದಾರರಿಗೆ ತೀರ್ಥ ಕ್ಷೇತ್ರಗಳ ಪ್ರವಾಸ ಮಾಡಿಸುತ್ತಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಬಲ ಆಕಾಂಕ್ಷಿಯಾಗಿರುವ ಎಸ್.ಪಿ. ಸ್ವಾಮಿ ಕ್ಷೇತ್ರದ ಸುಮಾರು 500ಕ್ಕೂ ಹೆಚ್ಚು ಜನರಿಗೆ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಗಳ ದರ್ಶನ ಮಾಡಿಸಲು ಮುಂದಾಗಿದ್ದಾರೆ.
ಇನ್ನು ಮಂಗಳವಾರ ಧರ್ಮಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಚಿವ ಗೋಪಾಲಯ್ಯ ಮೋದಿ ನೇತೃತ್ವದಲ್ಲಿ ಗುಜರಾತ್ ನಲ್ಲಿ ಬಿಜೆಪಿ ಗೆದ್ದಿದೆ ಸ್ವಾಮಿ ಅವರಿಗೆ ಆಶೀರ್ವದಿಸಿ, ಅವರ ಕೈ ಹಿಡಿಯಿರಿ ಬಿಜೆಪಿ ಪಕ್ಷ ಗೆಲ್ಲಿಸಿ, ಕೆಲಸ ಮಾಡಲು ಅವರಿಗೆ ಅವಕಾಶ ಕೊಡಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಲ್ಲರ ಆಶೀರ್ವಾದ ನಮ್ಮ ಮೇಲೆ ಇರಲಿ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.