• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಖಾಸಗಿ ಫೈನಾನ್ಸ್‌ಗಳಲ್ಲಿ ಮಾಡಿದ್ದ ಸಾಲಕ್ಕೆ ಸರಿಯಾಗಿ ಬಡ್ಡಿ ಕಟ್ಟಲು ಕಷ್ಟವಾಗುತ್ತಿತ್ತು. ಸಾಲ ಮರುಪಾವತಿ ಮಾಡದಿದ್ದರೆ ಖಾಸಗಿ ಫೈನಾನ್ಸ್ ಕಂಪನಿಗಳ ಕಿರುಕುಳದ ಭಯ : ಡೆತ್‌ ನೋಟ್‌ನಲ್ಲಿ ಉಲ್ಲೇಖ..!

ಪ್ರತಿಧ್ವನಿ by ಪ್ರತಿಧ್ವನಿ
June 9, 2026
in Top Story, ಇದೀಗ, ಕರ್ನಾಟಕ
0
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?
Share on WhatsAppShare on FacebookShare on Telegram

ಮಂಡ್ಯ :  ಜಿಲ್ಲೆಯಲ್ಲೊಂದು ಮನಕಲಕುವ ಘಟನೆಯೊಂದು ನಡೆದಿದ್ದು, ಇಲ್ಲಿನ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ADVERTISEMENT
HD Kumaraswamy on CM DK : ಡಿಕೆ ಶಿವಕುಮಾರ್ ಮಾತಿಗೆ ಕುಮಾರಸ್ವಾಮಿ ವ್ಯಂಗ್ಯ..! #dkshivakumar #pratidhvani

ಮೃತರನ್ನು ಪ್ರಭಾಕರ್ ಎನ್ನುವವರ ಪತ್ನಿ ಜ್ಯೋತಿ ಹಾಗೂ ನವವಿವಾಹಿತ ಪುತ್ರ ಸಂತೋಷ್ ಎಂದು ಪತ್ತೆ ಹಚ್ಚಲಾಗಿದೆ. ಜ್ಯೋತಿ ಮತ್ತು ಸಂತೋಷ್ ಕಳೆದ ರಾತ್ರಿ ಮನೆಯಲ್ಲೇ ಅಸುನೀಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇಂದು ಬೆಳಗ್ಗೆ ಪ್ರಭಾಕರ್ ತಮ್ಮದೇ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡಿದ್ದಾರೆ.

ಪ್ರಭಾಕರ್ ಪತ್ನಿ ಜ್ಯೋತಿ ಅವರನ್ನು ಪಂಚೆಯಿಂದ ಉಸಿರುಗಟ್ಟಿಸಿ ಜೀವ ತೆಗೆಯಲಾಗಿದೆ. ಈ ವೇಳೆ ಅಲ್ಲಿಗೆ ಬಂದ ಪುತ್ರ ಸಂತೋಷ್‌ನನ್ನೂ ಉಸಿರುಗಟ್ಟಿಸಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮೃತ ಸಂತೋಷ್‌ಗೆ ನವ ವಿವಾಹಿತನಾಗಿದ್ದ ಕಳೆದ ತಿಂಗಳ ಹಿಂದಷ್ಟೇ ಮದುವೆಯಾಗಿತ್ತು.

ಇನ್ನೂ ಘಟನೆ ನಡೆದ ವೇಳೆ ಸೊಸೆ ಗಾಢ ನಿದ್ರೆಯಲ್ಲಿದ್ದ ಕಾರಣ ಮನಯಲ್ಲೇ ಇದ್ದರೂ ಈ ಘಟನೆ ಆಕೆಯ ಗಮನಕ್ಕೆ ಬಂದಿಲ್ಲ. ಬೆಳಿಗ್ಗೆ ಎದ್ದು ತಿಂಡಿ ತಯಾರಿಸಿದ ಬಳಿಕ ಅತ್ತೆಯನ್ನು ಎಬ್ಬಿಸಲು ಕೊಠಡಿಗೆ ಹೋಗಿದ್ದ ವೇಳೆ ಈ ಘಟನೆ ಗಮನಕ್ಕೆ ಬಂದಿದೆ. ಪ್ರಭಾಕರ್ ಆರ್ಥಿಕ ಸಂಕಷ್ಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿರವ ಬಗ್ಗೆ ತಾವು ಬರೆದ ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಪ್ರಮುಖವಾಗಿ ಬಟ್ಟೆಯ ಅಂಗಡಿಯಲ್ಲಿ ವ್ಯಾಪಾರ ಕಡಿಮೆಯಾಗಿದ್ದು, ಈ ಹಿನ್ನೆಲೆ ಸಾಲದ ಒತ್ತಡ ಹೆಚ್ಚಾಗಿತ್ತು. ಅದೇ ಕಾರಣಕ್ಕೆ ಮಗ ಮತ್ತು ಹೆಂಡತಿಯನ್ನು ಸಾಯಿಸಿರುವುದಾಗಿ ಪ್ರಭಾಕರ್ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂವರ ಸಾವಿಗೆ ನಿಖರ ಕಾರಣ ಏನು ಎಂಬುದು ಈವರೆಗೂ ನಿಖರವಾಗಿ ಪತ್ತೆಯಾಗಿಲ್ಲ. ಆದರೆ ಸಾಲದ ಒತ್ತಡ ಹಾಗೂ ವ್ಯಾಪಾರದಲ್ಲಿ ಉಂಟಾದ ತೀವ್ರ ನಷ್ಟದಿಂದ ಬೇಸತ್ತಿದ್ದರು ಎಂಬುವುದು ಪ್ರಾಥಮಿಕ ಹಂತದ ಮಾಹಿತಿಯಾಗಿದೆ. ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ತಮ್ಮ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ. ವ್ಯಾಪಾರ ಕಡಿಮೆಯಾದ ಕಾರಣ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಖಾಸಗಿ ಫೈನಾನ್ಸ್ ಸಂಸ್ಥೆಗಳ ಸಾಲದ ಒತ್ತಡ ಮತ್ತು ಕಿರುಕುಳದಿಂದ ಮಾನಸಿಕವಾಗಿ ಕುಗ್ಗಿದ್ದೆ ಎಂದು ಸಹ ಪ್ರಭಾಕರ್ ಡೆತ್‌ ನೋಟ್‌ನಲ್ಲಿ ಬರೆದಿದ್ದಾರೆ.

ಮುಖ್ಯವಾಗಿ ರಾಜ್ಯ ಸರ್ಕಾರದ ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ಯಿಂದಾಗಿ ಸ್ಥಳೀಯ ಗ್ರಾಹಕರು ಬೇರೆ ಪಟ್ಟಣಗಳಿಗೆ ತೆರಳುತ್ತಿರುವುದರಿಂದ ಇಲ್ಲಿನ ಬಟ್ಟೆ ವ್ಯಾಪಾರ ಸಂಪೂರ್ಣ ಕುಸಿದಿದೆ. ವ್ಯಾಪಾರ ಇಲ್ಲದ ಕಾರಣ ಖಾಸಗಿ ಫೈನಾನ್ಸ್‌ಗಳಲ್ಲಿ ಮಾಡಿದ್ದ ಸಾಲಕ್ಕೆ ಸರಿಯಾಗಿ ಬಡ್ಡಿ ಕಟ್ಟಲು ಕಷ್ಟವಾಗುತ್ತಿತ್ತು. ಸಾಲ ಮರುಪಾವತಿ ಮಾಡದಿದ್ದರೆ ಖಾಸಗಿ ಫೈನಾನ್ಸ್ ಕಂಪನಿಗಳ ಏಜೆಂಟರು ಮನೆ ಬಾಗಿಲಿಗೆ ಬಂದು ಕಿರುಕುಳ ನೀಡುವ ಭಯವಿತ್ತು. ಮಾನ, ಮರ್ಯಾದೆಗೆ ಹೆದರಿ ಈ ನಿರ್ಧಾರ ಕೈಗೊಂಡಿರುವುದಾಗಿ ಎಂದು ಪ್ರಭಾಕರ್‌ ಡೆತ್‌ ನೋಟ್‌ ಬರೆದಿಟ್ಟು ಬದುಕಿನ ಪಯಣವನ್ನೇ ಮುಗಿಸಿದ್ದಾರೆ.

Previous Post

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

Next Post

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

Related Posts

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ
Top Story

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

by ಪ್ರತಿಧ್ವನಿ
July 14, 2026
0

ವಿಪರ್ಯಾಸವೆಂದರೆ ನಮ್ಮ ದೇಶದಲ್ಲಿ ಯಾವುದೇ ಘಟನೆ ನಡೆದರೂ ಅದು ಕೊನೆಯದಾಗಿ ಪಡೆದುಕೊಳ್ಳುವುದು ರಾಜಕೀಯ ಸ್ವರೂಪವನ್ನು. ಅಭಿವೃದ್ಧಿಯಾಗಲಿ, ಹಗರಣವಾಗಲಿ, ದುರ್ಘಟನೆಯಾಗಲಿ ಏನೇ ನಡೆದರೂ ಕೂಡ ಕೊನೆಯಲ್ಲಿ ರಾಜಕೀಯ ಪಕ್ಷಗಳ...

Read moreDetails
ಡಿ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಒಟಿಟಿಗೆ ಬರ್ತಿದೆ ʼದಿ ಡೆವಿಲ್ʼ..ಯಾವಾಗ..?

ಡಿ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಒಟಿಟಿಗೆ ಬರ್ತಿದೆ ʼದಿ ಡೆವಿಲ್ʼ..ಯಾವಾಗ..?

July 14, 2026
₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

July 14, 2026
ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

July 14, 2026
Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

July 14, 2026
Next Post
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada