ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರದ ಕುತೂಹಲಕ್ಕೆ ತೆರೆಬಿದ್ದಿದೆ.ಭಾರಿ ಕುತೂಹಲಕ್ಕೆ ಕಾರಣವಾಗಿರುವ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ತಮ್ಮ ಬೆಂಬಲವನ್ನ ಘೋಷಿಸಿದ್ದಾರೆ.ಮಂಡ್ಯದ ಕಾಳಿಕಾಂಬ ದೇಗುಲದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿ ಸಂಸದೆ ಸುಮಲತಾ ಅಂಬರೀಶ್ ಅವರು ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ
ಘೋಷಣೆ ಮಾಡಿದ್ದಾರೆ.ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ. ಬೆಂಬಲಿಗರ ಜೊತೆ ಇರುತ್ತೇನೆ. ಮೈತ್ರಿ ಅಭ್ಯರ್ಥಿಗೆ ಬೆಂಬಲಿಸುವುದಾಗಿ ತಿಳಿಸಿದ್ದಾರೆ.ಈ ಬಾರಿಯ ಚುನಾವಣೆಯೂ ಒಂದು ದೊಡ್ಡ ಸವಾಲು. 2019ರಲ್ಲಿ ಅದೊಂದು ಬೇರೆ ತರಹ ಇತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಮತ್ತೊಂದು ಸವಾಲು ಎದುರಾಗಿದೆ. ನನಗೆ ಬೇರೆ ಕ್ಷೇತ್ರದ ಆಫರ್ ನೀಡಿದ್ರು. ಮೈಸೂರು ಕ್ಷೇತ್ರದಿಂದ ನಿಲ್ತೀರಾ ಅಂದ್ರು. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದೆ ಅಧಿಕಾರಕ್ಕೆ ಅಂಟಿಕೊಂಡು ಕೂರುವ ಆಸೆ ನನಗಿಲ್ಲ. ಬದಲಾದ ಪರಿಸ್ಥಿತಿ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಎಲ್ಲರಂತೆ ಆಗಿದ್ರೆ ಎಲ್ಲೋ ಒಂದು ಕಡೆ ಸ್ಪರ್ಧಿಸುತ್ತಿದ್ದೆ,ನಾನು ಯಾವತ್ತೂ ಮಂಡ್ಯವನ್ನು ಬಿಟ್ಟು ಹೋಗಲು ಇಷ್ಟವಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದರು. ಈ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದ ಕಣದಿಂದ ಸುಮಲತಾ ಅಂಬರೀಶ್ ಹಿಂದೆ ಸರಿದಿದ್ದಾರೆ. ಸುಮಲತಾ ನಿರ್ಧಾರದಿಂದ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಗೆ ರಿಲೀಫ್ ಸಿಕ್ಕಂತಾಗಿದೆ.
![](https://pratidhvani.com/wp-content/uploads/2024/04/kumaraswamy-to-contest-lok-sabha-polls-1703396220-1024x576.jpg)