ಮಂಗಳೂರಿನ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಪದವಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದು, ಸರ್ಕಾರದ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಕೆಲ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಕಾಲೇಜಿಗೆ ಬರುವ ವಿದ್ಯಾರ್ಥಿನಿಯರು ತರಗತಿಯ ಒಳಗೂ ಹಿಜಾಬ್ ಧರಿಸುತ್ತಿರುವುದಾಗಿ ಆರೋಪಿಸಿದರು. ‘ವಿದ್ಯಾರ್ಥಿ ನಾಯಕ ವಿನ್ಯಾಸ್, ಹಿಜಾಬ್ ಪರ ಮಾತನಾಡುತ್ತಿದ್ದಾರೆ’ ಎಂದು ಆರೋಪಿಸಿದ ವಿದ್ಯಾರ್ಥಿಗಳು, ವಿನ್ಯಾಸ್ ರಾಜೀನಾಮೆಗೆ ಪ್ರತಿಭಟನಾ ನಿರತ ತರಗತಿ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಹಿಜಾಬ್ ನಿಯಮವನ್ನು ಕಾಲೇಜಿನಲ್ಲಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದರು.
‘ಮೇ 16ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ವಿವಿ ಘಟಕ ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಕಡ್ಡಾಯಗೊಳಿಸಬೇಕು ಮತ್ತು ವಿದ್ಯಾರ್ಥಿನಿಯರು ಶಿರವಸ್ತ್ರ ಧರಿಸುವಂತಿಲ್ಲ ಎಂದು ನಿರ್ಣಯವಾಗಿತ್ತು. ಈ ನಿರ್ಣಯವನ್ನು ಮೇ 17ರಿಂದಲೇ ಜಾರಿಗೆ ತರಲಾಗಿದ್ದು, ಸೂಚನಾ ಫಲಕದಲ್ಲಿ ಹಾಕಲಾಗಿದೆ. ತರಗತಿ ಧ್ವನಿವರ್ಧಕದ ಮೂಲಕ ಕೂಡ ವಿದ್ಯಾರ್ಥಿಗಳ ಗಮನಕ್ಕೆ ತರಲಾಗಿದೆ’ ಎಂದು ಕಾಲೇಜಿನ ಪ್ರಾಂಶುಪಾಲೆ ಅನಸೂಯಾ ರೈ ತಿಳಿಸಿದ್ದಾರೆ.
![](https://pratidhvani.com/wp-content/uploads/2022/05/thequint_2022-05_55116536-ba5f-4a6d-9dc4-7205bfd34e85_Untitled.jpg)
ಕಾಲೇಜಿಗೆ ಬರುವಾಗ ಅವರು ಹಿಜಾಬ್ ಹಾಕಿಕೊಳ್ಳುವುದು ತಕರಾರು ಏನಿಲ್ಲ ಆದರೆ ಕಾಲೇಜಿಗೆ ಬಂದ ನಂತರ ಅವರು ವಿಶ್ರಾಂತಿ ಕೊಟ್ಟಡಿಯಲ್ಲಿ ಅದನ್ನು ಕಳಚಿ ಸಮವಸ್ತ್ರದಲ್ಲಿ ಹಾಜರಾಗಬೇಕು ಈ ಸೂಚನೆಯನ್ನು ನೀಡಿದ್ದೇವೆ ಎಂದು ಆಡಳಿತ ಮಂಡಳಿ ತಿಳಿಸಿದೆ.