ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಾಹಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
ತ್ರಿಪುರಾದ ರಾಜಧಾನಿ ಅಗರ್ತಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಸತ್ಯದಿಯೋ ನರೇನ್ ಆರ್ಯಾ ನೂತನ ಮುಖ್ಯಮಂತ್ರಿಗೆ ಪ್ರಮಾಣ ವಚನ ಭೋದಿಸಿದ್ದರು.
ರಾಜ್ಯ ರಾಜಕೀಯದಲ್ಲಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲವ್ ಕುಮಾರ್ ದೇವ್ ರಾಜೀನಾಮೆ ನೀಡಿದ್ದರು.
2016ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಣಿಕ್ ಸಾಹಾರನ್ನು 2020ರಲ್ಲಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಘೋಷಿಸಿದ್ದರು ಮತ್ತು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.