• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಣ್ಣೆತ್ತಿನ ಅಮಾವಾಸೆ ಉತ್ತರ ಕರ್ನಾಟಕದಲ್ಲಿ ಬಲು ಜೋರು

Any Mind by Any Mind
July 9, 2021
in ಕರ್ನಾಟಕ
0
ಮಣ್ಣೆತ್ತಿನ ಅಮಾವಾಸೆ ಉತ್ತರ ಕರ್ನಾಟಕದಲ್ಲಿ ಬಲು ಜೋರು
Share on WhatsAppShare on FacebookShare on Telegram

ಭಾರತ ಕೃಷಿ ಪ್ರಧಾನ ದೇಶ. ಇಲ್ಲಿ ನಾವು ಮಣ್ಣ ನ್ನು ದೇವರೆಂದೇ ಭಾವಿಸುತ್ತೇವೆ. ಕೃಷಿಕರಿಗೆ ಹೊಲದಲ್ಲಿ ಸಾಥ್ ನೀಡುವ ಎತ್ತುಗಳಿಗೂ ದೇವರ ಸ್ಥಾನವನ್ನೇ ನೀಡುತ್ತಾರೆ ನಮ್ಮ ಕೃಷಿಕರು. ಬಹುಶ: ಇದಕ್ಕೆ ಮಣ್ಣೆತ್ತಿನ ಅಮಾವಾಸ್ಯೆಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ. ರೈತರ ಮೊದಲ ಕೃಷಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಮಣ್ಣೆತ್ತಿನ ಅಮವಾಸೆ ಹಬ್ಬದಾಚರಣೆ ಜು. 9, 10ರಂದು ನಡೆಯಲಿದ್ದು. ಕೊರನಾ ಅನ್‌ ಲಾಕ್‌ ನಲ್ಲಿ ಮನೆಯಲ್ಲೇ ಇದ್ದುಕೊಂಡು ಆಚರಣೆ ಮಾಡಲ್ಪಡುವ ಕೃಷಿಕರ ಹಬ್ಬದ ಸಿದ್ಧತೆ ಭರದಿಂದ ನಡೆದಿದೆ.

ADVERTISEMENT

ಮಣ್ಣಿನಿಂದ ಮಾಡಿದ ಎತ್ತುಗಳ ಜೋಡಿಗೆ ಪೂಜೆ ಮಾಡುವುದು ಈ ಹಬ್ಬದ ವಿಶೇಷವಾಗಿದೆ. ರೈತರು ತಮ್ಮ ಆಪ್ತಮಿತ್ರ ಎತ್ತಿನ ಜೋಡಿಗೆ ವಿಶೇಷ ಪೂಜೆ ಮಾಡುವುದರ ಮೂಲಕ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸುತ್ತಾರೆ. ರೈತರ ಪಾಲಿಗೆ ಮಣ್ಣೆತ್ತಿನ ಅಮಾವಾಸೆ ಎಂದರೆ ಎಲ್ಲಿಲ್ಲದ ಹಿಗ್ಗು. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರು ಸೇರಿದಂತೆ ಎಲ್ಲ ವರ್ಗದ ಜನರು ಪಾಲ್ಗೊಂಡು ಸಂಭ್ರಮದಿಂದ ಆಚರಿಸುತ್ತಾರೆ.

ಊರಿನ ಸಮೀಪ ಇರುವ ಕೆರೆಗಳಿಂದ 2 ತಿಂಗಳು ಮುಂಚಿತವಾಗಿ ಜೇಡಿ ಮಣ್ಣನ್ನು ತಂದು ಅದನ್ನು ಹದಗೊಳಿಸುತ್ತಾರೆ. ಹಬ್ಬದ 5 ದಿನಗಳ ಮುಂಚಿತವಾಗಿ ಬಸವಣ್ಣನ ಮೂರ್ತಿಗಳನ್ನು ತಯಾರು ಮಾಡುತ್ತಾರೆ, ನಂತರ ಹಬ್ಬದ ಎರಡು ದಿನಗಳ ಕಾಲ ಬೆಳಿಗ್ಗೆಯಿಂದ ಸಂಜೆಯ ವರೆಗೆ ಸಣ್ಣ ಬಸವಣ್ಣನಿಗೆ ರೂ.50 ಹಾಗೂ ದೊಡ್ಡ ಬಸವಣ್ಣನಿಗೆ ರೂ. 100 ರಂತೆ ಮಾರಾಟ ಮಾಡುತ್ತಾರೆ. ಕೆಲ ಮಣ್ಣಿನ ಬಸವಣ್ಣನಿಗೆ ಬಣ್ಣಹಚ್ಚಿ ಅಲಂಕಾರವೂ ಮಾಡಲಾಗಿರುತ್ತದೆ. ಆಧುನಿಕ ಭರಾಟೆಯಲ್ಲಿ ಸಂಸ್ಕೃತಿ, ಸಾಂಪ್ರದಾಯ ಪಾಲನೆ ಮಾಡುತ್ತಿರುವ ಜನರ ಸಂಖ್ಯೆ ತುಂಬಾ ಕಡಿಮೆ ಆಗಿದೆ ಆದ್ದರಿಂದ ಲಾಭವೂ ಕಡಿಮೆ ಬರುತ್ತದೆ ಆದರೂ ತಲೆ ತಲಾಂತರದಿಂದ ಮಾಡಿಕೊಂಡು ಬರುತ್ತಿರವ ಈ ವೃತ್ತಿಯನ್ನು ಬಿಡಲು ಮನಸ್ಸು ಒಪ್ಪುವುದಿಲ್ಲ ಹಾಗಾಗಿ ಪ್ರತಿ ವರ್ಷ ತಪ್ಪದೇ ಮಣ್ಣಿ ಬಸವಣ್ಣನ್ನು ಕುಟುಂಬಸ್ಥರೆಲ್ಲರೂ ಸೇರಿ ತಯಾರು ಮಾಡುತ್ತೇವೆ. ಈ ವರ್ಷ ಒಂದು ಸಾವಿರ ಮೂರ್ತಿಗಳನ್ನು ಸಿದ್ದಪಡಿಸಿದ್ದೇವೆ. ಈಗಾಗಲೇ 300 ಮೂರ್ತಿಗಳನ್ನು ವಿವಿಧ ಹಳ್ಳಿಯ ಜನರು ತೆಗೆದುಕೊಂಡು ಹೋಗಿದ್ದಾರೆ ಎಂದು ಚನ್ನು ಕುಂಬಾರ, ಬಸವರಾಜ ಕುಂಬಾರ ತಿಳಿಸಿದರು.

ಮುಂಗಾರಿನಲ್ಲಿ ಬರುವ ಈ ಹಬ್ಬದ್ದಲ್ಲಿ ರೈತರು ಮಳೆ ಬೆಳೆಯು ಉತ್ತಮವಾಗಿ ಆಗಲಿ ಬೆಳೆ ಬರಲಿ ಎಂದು ಪ್ರಾರ್ಥಿಸಿಸುತ್ತಾರೆ, ಭೂಮಿಯ ಎಲ್ಲೆಡೆ ರೈತನ ಜೊತೆಗೆ ವಾಸಿಸುವ ಬಸವಣ್ಣ ರೈತನಿಗೆ ಶಕ್ತಿ ನೀಡಲಿ, ಉತ್ತಮವಾಗಿ ಕೃಷಿ ಕೆಲಸಗಳನ್ನು ಮಾಡಲಿ ಮತ್ತು ಸಂಪತ್ತನ್ನು ರಕ್ಷಿಸಲಿ ಎಂದು ಬೇಡಿಕೊಳ್ಳುತ್ತಾರೆ ಎಂದು ರೈತರಾದ ಶರಣಪ್ಪ ಧರ್ಮಾಯತ, ಆನಂದ ಕೊಟಗಿ, ಚಂದ್ರು ಹೊನವಾಡ ತಿಳಿಸಿದರು.

ಉತ್ತರ ಕರ್ನಾಟಕದಲ್ಲಿ ರೂಢಿಯಲ್ಲಿರುವ ಈ ಹಬ್ಬದ್ದಲ್ಲಿ ರೈತರು ವಿಶೇಷವಾಗಿ ಬಸವಣ್ಣನಿಗೆ ಪೂಜೆ ಮಾಡ್ತಾರೆ. ಮಣ್ಣಿನಿಂದ ತಯಾರಿಸಲ್ಪಟ್ಟ ಚಿಕ್ಕ ಮೂರ್ತಿಗಳನ್ನು ಮಾರುಕಟ್ಟೆಯಿಂದ ಖರೀದಿಸಿ ಪದ್ಧತಿಯಂತೆ ಮನೆಯಲ್ಲಿ ಪೂಜೆ ಮಾಡುತ್ತಾರೆ. ನಂತರ ಅದಕ್ಕೆ ಮಳೆ, ಬೆಳೆ, ಆಯಸ್ಸು, ಸಂಪತ್ತು, ಸುಖ-ಸಂತೋಷಕ್ಕಾಗಿ ವಿಶೇಷವಾಗಿ ಪ್ರಾರ್ಥಿಸುತ್ತಾರೆ. ಕೆಲವರು ಉಪವಾಸ ಮಾಡಿದ್ರೆ ಮತ್ತೆ ಕೆಲವರು ಸಹೋದರರು ತಮ್ಮ ಸಹೋದರಿಯರಿಗೆ ಉಡುಗೊರೆ ನೀಡಿ ಸಂತೋಷಪಡ್ತಾರೆ. ಈ ಹಬ್ಬವು ಎತ್ತು, ರೈತ, ಸಂಬಂಧಿಕರ ಬಂಧುತ್ವ ಹಾಗೂ ಮಧುರ ಬಾಂಧವ್ಯ ಬೆಸೆಯುವ ಹಬ್ಬವಾಗಿದೆ ಜಕ್ಕಲಿ ಗ್ರಾಮದ ಸಂಗಮೇಶ್ ಕಡಗದ ತಿಳಿಸಿದರು.

ಕೋವಿಡ್ ಸಂಕಷ್ಟದ ಮಧ್ಯೆಯೂ ಮಣ್ಣಿನ ಮೂರ್ತಿಗಳನ್ನು ಮಾಡಿ ಮಾರಿ ಅಲ್ಪ ಲಾಭದಲ್ಲಿ ತೃಪ್ತಿಪಟ್ಟುಕೊಂಡ ಹಲವು ಕುಂಬಾರರಿಗೆ ಮುಂದಿನ ಹಬ್ಬಗಳಲ್ಲಿ ಚೆನ್ನಾಗಿ ವ್ಯಾಪಾರವಾಗಿ ಎಲ್ಲರೂ ಸುಖವಾಗಿರಲಿ ಎಂಬುದು ನಮ್ಮ ಸದಾಶಯ.

Previous Post

ಕೆಸೆಟ್ ಪರೀಕ್ಷೆಗೆ ದಿನಾಂಕ ನಿಗದಿ: ಪರೀಕ್ಷೆ ಸಿದ್ದರಾಗಿ ಎಂದ ಮೈಸೂರು ವಿಶ್ವವಿದ್ಯಾನಿಯ!

Next Post

ಉಡುಪಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ; ʼಇದು ಸರ್ಕಾರಿ ಪ್ರಾಯೋಜಿತʼ – ಕಾಂಗ್ರೆಸ್ ಆರೋಪ

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಉಡುಪಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ; ʼಇದು ಸರ್ಕಾರಿ ಪ್ರಾಯೋಜಿತʼ – ಕಾಂಗ್ರೆಸ್ ಆರೋಪ

ಉಡುಪಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ; ʼಇದು ಸರ್ಕಾರಿ ಪ್ರಾಯೋಜಿತʼ – ಕಾಂಗ್ರೆಸ್ ಆರೋಪ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada