• Home
  • About Us
  • ಕರ್ನಾಟಕ
Tuesday, July 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಸ್ವಾಮಿ ವಿವೇಕಾನಂದರ ಬಗ್ಗೆ ಮನುವಾದಿಗಳಿರುವ ದ್ವೇಷ ಬಹಿರಂಗ

ಡಾ | ಜೆ.ಎಸ್ ಪಾಟೀಲ by ಡಾ | ಜೆ.ಎಸ್ ಪಾಟೀಲ
July 14, 2023
in ಅಂಕಣ, ಅಭಿಮತ
0
ಸ್ವಾಮಿ ವಿವೇಕಾನಂದರ ಬಗ್ಗೆ ಮನುವಾದಿಗಳಿರುವ ದ್ವೇಷ ಬಹಿರಂಗ
Share on WhatsAppShare on FacebookShare on Telegram

~ಡಾ. ಜೆ ಎಸ್ ಪಾಟೀಲ.

ADVERTISEMENT

ಸ್ವಾಮಿ ವಿವೇಕಾನಂದರನ್ನು ಜೀವಂತ ಇರುವಾಗ ಸಾಕಷ್ಟು ಕಾಡಿದ್ದ ಮನುವಾದಿಗಳು ಅವರ ಅನುಪಸ್ಥಿತಿಯಲ್ಲೂ ಅವರ ಮೇಲಿನ ದ್ವೇಷವನ್ನು ಆಗಾಗ ಪ್ರದರ್ಶಿಸುತ್ತಾರೆ. ಅದೆ ವಿವೇಕಾನಂದರನ್ನು ಹಿಂದುತ್ವದ ಐಕಾನ್ ಮಾಡಿಕೊಂಡು ಮತ ಬೇಟೆಯಾಡುವ ಮನುವಾದಿಗಳು ಒಳಗೆ ಅವರ ಬಗ್ಗೆ ಹೊಂದಿರುವ ಮತ್ಸರವನ್ನು ಮುಚ್ಚಿಡಲು ಸಾಧ್ಯವಾಗುತ್ತಿಲ್ಲ. ಸ್ವಾಮಿ ವಿವೇಕಾನಂದರ ಕುರಿತು ಅನುಚಿತ ಹಾಗು ಅವಹೇಳನಕಾರಿ ಹೇಳಿಕೆ ನೀಡಿದ್ದ ಇಸ್ಕಾನ್ ಸಂಸ್ಥೆಯ ಸನ್ಯಾಸಿಯೊಬ್ಬನನ್ನು ಆ ಸಂಸ್ಥೆ ಒಂದು ತಿಂಗಳ ಕಾಲ ನಿಷೇಧಿಸುವ ನಾಟಕವಾಡಿದೆ.
ಸ್ವಾಮಿ ವಿವೇಕಾನಂದ ಮತ್ತು ರಾಮಕೃಷ್ಣ ಪರಮಹಂಸರ ಬಗ್ಗೆ ಅನುಚಿತವಾದ ಹಾಗು ಅವಹೇಳನಕಾರಿಯಾಗಿ ತಮ್ಮ ಪ್ರವಚನದಲ್ಲಿ ಮಾತನಾಡಿದ್ದ ಸನ್ಯಾಸಿ ಅಮೋಘ್ ಲೀಲಾ ದಾಸ್ ನನ್ನು ಇಸ್ಕಾನ್ ತಾತ್ಕಾಲಿಕವಾಗಿ ನಿಷೇಧಿಸಿದೆ.

ಈ ಅಮೋಘ ಲೀಲಾ ದಾಸ್ ತನ್ನ ಅಮೋಘ ಪ್ರವಚನದಲ್ಲಿ ವಿವೇಕಾಂದರು ಹಾಗು ಅವರ ಗುರು ರಾಮಕೃಷ್ಣ ಪರಮಹಂಸರು ಮೀನು ಸೇವಿಸುತ್ತಿದ್ದುದ್ದನ್ನು ಪ್ರಶ್ನಿಸಿದ್ದ. ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಮಂಗಳವಾರ ತಮ್ಮ ಸಂಸ್ಥೆಗೆ ಸೇರಿರುವ ಸನ್ಯಾಸಿಗಳಲ್ಲೊಬ್ಬರಾದ ಅಮೋಘ ಲೀಲಾ ದಾಸ್ ನನ್ನು ಸ್ವಾಮಿ ವಿವೇಕಾನಂದ ಮತ್ತು ರಾಮಕೃಷ್ಣ ಪರಮಹಂಸರ ಬಗ್ಗೆ ಅನುಚಿತ ಹಾಗು ಅವಮಾನಕರವಾಗಿ ಮಾತನಾಡಿದ್ದಕ್ಕಾಗಿ ನಿಷೇಧಿಸುವ ಹೇಳಿಕೆಯನ್ನು ನೀಡಿ ಕೈತೊಳೆದುಕೊಂಡಿದೆ. ಅಮೋಘ್ ಲೀಲಾ ದಾಸ್ ಆಧ್ಯಾತ್ಮಿಕ ಪ್ರೇರಕ ಭಾಷಣಕಾರನೆಂದು ಹೇಳಲಾಗುತ್ತಿದ್ದು, ಆ ಕುರಿತ ಆತನ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಬಹಳ ಜನಪ್ರಿಯವಾಗಿವೆ ಎನ್ನಲಾಗುತ್ತದೆ.

ಅಮೋಘ ಲೀಲಾ ದಾಸ್ ತನ್ನ ಪ್ರವಚನವೊಂದರಲ್ಲಿ ಸ್ವಾಮಿ ವಿವೇಕಾನಂದರು ಮೀನು ಸೇವಿಸುತ್ತಿದ್ದದ್ದು ಪ್ರಶ್ನಿಸಿದ್ದ. ಸದ್ಗುಣವಂತರು ಎಂದಿಗೂ ಯಾವ ಪ್ರಾಣಿಗಳನ್ನು ಕೂಡ ಘಾಸಿಗೊಳಿಸಿ ಅವುಗಳ ಮಾಂಸವನ್ನು ಸೇವಿಸುವುದಿಲ್ಲ ಎಂದು ಅಸಂಬದ್ಧವಾಗಿ ಮಾತನಾಡಿದ್ದ. “ಸದ್ಗುಣಿಯಾದವನು ಎಂದಾದರೂ ಮೀನು ತಿನ್ನುತ್ತಾನಾ? ಮೀನಿಗೂ ನೋವಾಗುತ್ತದೆ, ಅಲ್ಲವೇ? ಎಂದು ಈ ಅಮೋಘ ಲೀಲಾ ದಾಸ್ ತನ್ನ ಪ್ರವಚನದಲ್ಲಿ ಜನರನ್ನು ಉದ್ದೇಶಿಸಿ ಎಡಬಿಡಂಗಿಯಂತೆ ಒದರಿದ್ದನಂತೆ. ಅದೇ ರೀತಿಯಲ್ಲಿ ಆತ ಸ್ವಾಮಿ ವಿವೇಕಾನಂದರ ಗುರುಗಳಾದ ರಾಮಕೃಷ್ಣ ಪರಮಹಂಸರನ್ನು ಸಹ ತರಾಟೆಗೆ ತೆಗೆದುಕೊಂಡಿದ್ದನಂತೆ. ಈತನ ಈ ಅಸಂಬದ್ಧ ಮಾತುಗಳು ಸಾಮಾಜಿಕ ಮಾಧ್ಯಮದಲ್ಲಿ ವಿವಾದವನ್ನು ಹುಟ್ಟುಹಾಕಿದ್ದವು.

ಸಾರ್ವಜನಿಕರು ಜಾಲತಾಣಗಳಲ್ಲಿ ಇಸ್ಕಾನ್ ಈ ಸನ್ಯಾಸಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರಂತೆ. ಅದಕ್ಕೆ ಮಣಿದ ಇಸ್ಕಾನ್, ಅಮೋಘ್ ಲೀಲಾ ದಾಸ್ ಅವರ ಅನುಚಿತ ಮತ್ತು ಸ್ವೀಕಾರಾರ್ಹವಲ್ಲದ ಮಾತುಗಳಿವು. ಈ ಇಬ್ಬರು ವ್ಯಕ್ತಿಗಳ ಶ್ರೇಷ್ಠ ಬೋಧನೆಗಳ ಬಗ್ಗೆ ಅಮೋಘ ಲೀಲಾ ದಾಸ ಅವರು ತಿಳುವಳಿಕೆಯ ಕೊರತೆಯಿಂದ ಮಾತನಾಡಿದ್ದಾರೆ. ಇದರಿಂದ ನಮ್ಮ ಸಂಸ್ಥೆಗೆ ನೋವಾಗಿದ್ದು ˌ ಅದಕ್ಕಾಗಿ ಅವರನ್ನು ಇಸ್ಕಾನ್‌ನಿಂದ ಒಂದು ತಿಂಗಳ ಅವಧಿಗೆ ನಿಷೇಧಿಸಲಾಗುವುದು ಎಂದು ಹೇಳಿಕೆ ನೀಡಿದೆ. ಇದರ ನಡುವೆ ಈ ಅಮೋಘ ಲೀಲಾ ದಾಸ್ ತಮ್ಮ ಈ ಅಸಂಬದ್ಧ ಹೇಳಿಕೆಗಳಿಗಾಗಿ ಕ್ಷಮೆಯಾಚಿಸಿದ್ದು ಗೋವರ್ಧನ ಬೆಟ್ಟಗಳಲ್ಲಿ ಅದಕ್ಕಾಗಿ ಒಂದು ತಿಂಗಳ ಕಾಲ ಪ್ರಾಯಶ್ಚಿತ್ ಮಾಡಿಕೊಳ್ಳುವುದಾಗಿ ಹೇಳಿರುವ ಕುರಿತು ಇಸ್ಕಾನ್ ಉಲ್ಲೇಖಿಸಿದೆ.

ಈ ಅಮೋಘ ಲೀಲಾ ದಾಸ್ ತಕ್ಷಣವೇ ಜಾರಿಗೆ ಬರುವಂತೆ ಸಾರ್ವಜನಿಕ ಜೀವನದಿಂದ ಸಂಪೂರ್ಣವಾಗಿ ಹೊರಗುಳಿಯಬೇಕು ಎಂದು ಕೂಡ ಇಸ್ಕಾನ್ ಕಟ್ಟಪ್ಪಣೆ ಹೊರಡಿಸುವ ನಾಟಕ ಮಾಡಿದಂತಿದೆ. ಮೇಲ್ನೋಟಕ್ಕೆ ಇದೊಂದು ಅಚಾತುರ್ಯದ ಹೇಳಿಕೆಯಂತೆ ಕಂಡರೂ ಕೂಡ ಆಳದಲ್ಲಿ ಮನುವಾದಿಗಳಿಗೆ ವಿವೇಕಾನಂದರ ಬಗೆಗಿರುವ ಅಪಾರವಾದ ದ್ವೇಷವನ್ನು ಇದು ಬಹಿರಂಗಪಡಿಸಿದೆ. ವಿವೇಕಾನಂದರು ಚಿಕ್ಯಾಗೊ ಸರ್ವಧರ್ಮ ಸಮ್ಮೇಳನಕ್ಕೆ ಹೋಗುವಾಗಲೂ ಅವರಿಗೆ ಪ್ರಾಯೋಕತ್ವದ ಪತ್ರ ಸಿಗದಂತೆ ನೋಡಿಕೊಂಡಿದ್ದು ಹಾಗು ಅವರು ಅಲ್ಲಿ ಜನಪ್ರೀಯ ಭಾಷಣ ಮಾಡಿ ವಾಪಸ್ಸು ಭಾರತಕ್ಕೆ ಬಂದಾಗ ಅವರನ್ನು ಸ್ವಾಗತಿಸಲು ನಿರಾಕರಿಸಿದ್ದ ಮನುವಾದಿಗಳ ನಡೆಯನ್ನು ನಾವು ಇಲ್ಲಿ ಸ್ಮರಿಸಬಹುದಾಗಿದೆ.

~ಡಾ. ಜೆ ಎಸ್ ಪಾಟೀಲ.

Tags: BahujanaBJPisconManuvadi'sRSSSwamy vivekananda
Previous Post

ಸರ್ವಜನಾಂಗದ ಶಾಂತಿಯ ತೋಟ ಸೃಷ್ಟಿಸಿ ರಾಜ್ಯ ಕಟ್ಟುತ್ತೇವೆ : ಸಿಎಂ

Next Post

ಟಿ.ಬಿ ಜಯಚಂದ್ರ ಪರ ಧ್ವನಿ ಎತ್ತಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Related Posts

Top Story

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

by ಪ್ರತಿಧ್ವನಿ
July 1, 2025
0

ನಾಯಕತ್ವ ಬದಲಾವಣೆಯ ನಿರ್ಧಾರವು ಪಕ್ಷದ ಹೈಕಮಾಂಡ್‌ ಕೈಯಲ್ಲಿ ಇರುತ್ತದೆ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಭೇಟಿ ನೀಡಿದ ನಂತರ ಈ ಊಹಾಪೋಹ ಬಲಗೊಂಡಿದೆ. ಡಿ.ಕೆ.ಶಿವಕುಮಾರ್...

Read moreDetails

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

July 1, 2025

ಲೋಕಾಯುಕ್ತರು ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ವಜಾಗೊಳಿಸಿ: ರವಿಕೃಷ್ಣಾ ರೆಡ್ಡಿ.

June 30, 2025

DK Shivakumar: ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್

June 30, 2025

Golder Star Ganesh: ವಿಶೇಷ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದ ಗೋಲ್ಡನ್ ಸ್ಟಾರ್ .

June 30, 2025
Next Post
ವಿದ್ಯುತ್​ ದರ ಹೆಚ್ಚಳ ವಿಚಾರ : ಕಾಂಗ್ರೆಸ್​ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಟಿ.ಬಿ ಜಯಚಂದ್ರ ಪರ ಧ್ವನಿ ಎತ್ತಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada