• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾ. 7 ರಂದು ಫಲಾನುಭವಿಗಳ ಉತ್ಸವ ಸಮ್ಮೇಳನಕ್ಕೆ ಸಿಎಂ ಅವರಿಂದ ಚಾಲನೆ: ಎಸ್.ಟಿ.ಸೋಮಶೇಖರ್

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in Top Story, ಇದೀಗ
0
ಮಾ. 7 ರಂದು ಫಲಾನುಭವಿಗಳ ಉತ್ಸವ ಸಮ್ಮೇಳನಕ್ಕೆ ಸಿಎಂ ಅವರಿಂದ ಚಾಲನೆ: ಎಸ್.ಟಿ.ಸೋಮಶೇಖರ್
Share on WhatsAppShare on FacebookShare on Telegram

ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡಿರುವ ಫಲಾನುಭವಿಗಳ ಉತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಮಾ. 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಫಲಾನುಭವಿಗಳ ಉತ್ಸವ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಮುಖ್ಯ ಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವರು. ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಜನ ಪ್ರತಿನಿಧಿಗಳು ಸಹಕರಿಸಬೇಕು. ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 27 ಸಾವಿರ ಫಲಾನುಭವಿಗಳು, ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ 10 ಸಾವಿರ ಫಲಾನುಭವಿಗಳು, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 5 ಸಾವಿರ ಫಲಾನುಭವಿಗಳು, ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ 4 ಸಾವಿರ ಫಲಾನುಭವಿಗಳು, ಶೂನ್ಯ ಬಡ್ಡಿ ದರದಲ್ಲಿ ಸಾಲ ಪಡೆದಿರುವ 3 ಸಾವಿರ ರೈತ ಫಲಾನುಭವಿಗಳನ್ನು ಸಹಕಾರ ಇಲಾಖೆಯ ವತಿಯಿಂದ ಕರೆತರಲಾಗುವುದು. ಒಟ್ಟಾರೆಯಾಗಿ 53 ಸಾವಿರ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು. ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಲ್ ನಾಗೇಂದ್ರ ಅವರು ಮಾತನಾಡಿ ಸ್ಲಂ ಬೋರ್ಡ್ ವತಿಯಿಂದ 277 ಮನೆಗಳನ್ನು ಫಲಾನುಭವಿಗಳಿಗೆ ನಿರ್ಮಿಸಿದ್ದು, ಫಲಾನುಭವಿಗಳ ಸಮ್ಮೇಳನದಲ್ಲಿ ಮುಖ್ಯ ಮಂತ್ರಿಗಳಿoದ ಹಕ್ಕು ಪತ್ರಗಳನ್ನು ವಿತರಣೆ ಮಾಡಿಸಲಾಗುವುದು. ಕೋವಿಡ್‌ನಿಂದ ಮರಣ ಹೊಂದಿದ ಕುಟುಂಬದವರಿಗೆ ನೀಡಬೇಕಿದ್ದ 1 ಲಕ್ಷ ಪರಿಹಾರಧನ ಕೆಲವರಿಗೆ ತಲುಪಿಲ್ಲ ಈ ಕುರಿತು ಪರಿಶೀಲಿಸಿ ಶೀಘ್ರವಾಗಿ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಶಕರಾದ ಸಾ ರಾ ಮಹೇಶ್ ಅವರು ಮಾತನಾಡಿ ಅತಿವೃಷ್ಠಿ ಸಂಧರ್ಭದಲ್ಲಿ ಕೆ ಆರ್ ನಗರ ತಾಲೂಕಿನ ಚೌಕಹಳ್ಳಿ ಗ್ರಾಮದ ನಾಗಮ್ಮ ತಿ/o ಗೌರೀಶ್ ಎಂಬುವರು ಮನೆ ಬಿದ್ದು ಹೋಗಿತ್ತು. ಇವರಿಗೆ 50 ಸಾವಿರ ಪರಿಹಾರ ನೀಡಿದ್ದು, ಬಾಕಿ 50 ಸಾವಿರ ಪರಿಹಾರ ಇದುವರೆಗೂ ದೊರೆತಿಲ್ಲ ಈ ಬಗ್ಗೆ ಪರಿಶೀಲಸಿ ಕೂಡಲೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿಗಳಾದ ಡಾ ಕೆ ವಿ ರಾಜೇಂದ್ರರವರು ಮಾತನಾಡಿ ಫಲಾನುಭವಿಗಳ ಉತ್ಸಹ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳನ್ನು ಕರೆತಂದು ಆಯೋಜಿಸಲಾಗುವುದು. ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಫಲಾನುಭವಿಗಳಿಗೆ ನೀಡಲಾಗುವುದು. ಸೌಲಭ್ಯಗಳನ್ನು ಪಡೆದಿರುವ ಕೆಲವು ಫಲಾನುಭವಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದರು.

ಪ್ರತಿ ಇಲಾಖೆಯವರು ಫಲಾನುಭವಿಗಳನ್ನು ಕರೆತರಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಗ್ರಾಮ ಪಂಚಾಯಿತಿಯ ಫಲಾನುಭವಿಗಳನ್ನು ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆ ಮಾಡಲಾಗುವುದು. ತಾಲ್ಲೂಕು ಮಟ್ಟದಲ್ಲಿ ಶಿಷ್ಟಾಚಾರ ಅನ್ವಯ ಶಾಸಕರು, ವಿಧಾನ ಪರಿಷತ್ ಸದಸ್ಯರನ್ನು ಆಹ್ವಾನಿಸಿ ಸಭೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಎಂದು ತಿಳಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ, ಮಹಾನಗರ ಪಾಲಿಕೆಯ ಮಹಾಪೌರರದ ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: ಎಸ್.ಟಿ.ಸೋಮಶೇಖರ್ಡಾ ಕೆ ವಿ ರಾಜೇಂದ್ರಬಿಜೆಪಿಸಾ ರಾ ಮಹೇಶ್
Previous Post

ತಮಗೆ ರಾಜಕೀಯ ಜೀವದಾನ ನೀಡಿದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಕಡೆಗಣಿಸಿದವರು ನರೇಂದ್ರ ಮೋದಿ ಅವರಲ್ಲವೇ? : ಸಿದ್ದರಾಮಯ್ಯ

Next Post

ಬೀದರ್’ನ ಗುರುದ್ವಾರಕ್ಕೆ ಭೇಟಿ ನೀಡಿದ ಅಮಿತ್ ಶಾ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಬೀದರ್’ನ ಗುರುದ್ವಾರಕ್ಕೆ ಭೇಟಿ ನೀಡಿದ ಅಮಿತ್ ಶಾ

ಬೀದರ್’ನ ಗುರುದ್ವಾರಕ್ಕೆ ಭೇಟಿ ನೀಡಿದ ಅಮಿತ್ ಶಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada