ಮೈಸೂರು :ಏ.18: ವರುಣ ರಾಜಕಾರಣಕ್ಕೆ ಮರಿ ಟಗರು ಎಂಟ್ರಿ ಕೊಟ್ಟಿದ್ದಾನೆ. ತಾತ ಸಿದ್ದರಾಮಯ್ಯ ಪರ ಪ್ರಚಾರದ ಅಖಾಡಕ್ಕೆ ಮೊಮ್ಮಗ ಧವನ್ ರಾಕೇಶ್ ಇಳಿದಿದ್ದಾರೆ.
ಮೈಸೂರಿನ ಏರ್ಪೋರ್ಟ್ನಲ್ಲಿ ತಾತನೊಂದಿಗೆ ಕಾಣಿಸಿಕೊಂಡ ಧವನ್ ರಾಕೇಶ್, ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ಜೋಶ್ನಲ್ಲಿ ಹೇಳಿಕೆ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ, ಮೊಮ್ಮಗ ರಾಜಕೀಯ ಆಸಕ್ತಿ ತೋರಿಸೋದು ಸಹಜವಾಗಿಯೇ ಖುಷಿ ಆಗುತ್ತೆ. ಇಡೀ ಚಾಮುಂಡೇಶ್ವರಿ, ವರುಣ ಕ್ಷೇತ್ರವನ್ನು ಅವರಪ್ಪ ರಾಕೇಶ್ ನಿರ್ವಹಿಸುತ್ತಿದ್ದ.
ರಾಕೇಶ್ ಇಡೀ ಜಿಲ್ಲೆ ನೋಡಿಕೊಳ್ಳುತ್ತಿದ್ದ. ಅಪ್ಪನ ರಕ್ತ ಅಲ್ವ? ಮೊಮ್ಮಗನೂ ರಾಜಕೀಯದ ಆಸಕ್ತಿ ಬಂದಿದೆ. ಅವನಾಗಿಯೇ ಇಷ್ಟಪಟ್ಟು ನನ್ನೊಂದಿಗೆ ಮೈಸೂರಿಗೆ ಬಂದಿದ್ದಾನೆ. ವರುಣ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗು ಅಂತ ನಾನು ಹೇಳಲ್ಲ. ನಮ್ಮ ಮನೆಯ ಯಾರನ್ನೂ ನಾನು ಪ್ರಚಾರಕ್ಕೆ ಕರೆಯಲ್ಲ. ಅವರಾಗಿಯೇ ಬಂದು ಮಾಡಿದರೆ ಮಾಡಲಿ. ಮೊಮ್ಮಗನ ರಾಜಕೀಯ ಎಂಟ್ರಿ ಬಗ್ಗೆ ಸುಳಿವು ಕೊಟ್ಟ ಸಿದ್ದರಾಮಯ್ಯ.