• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

“ಮಾರ್ಕ್ ಮೈ ವರ್ಡ್ಸ್” : ಕೃಷಿ ಕಾನೂನುಗಳ ಕುರಿತು ರಾಹುಲ್ ಗಾಂಧಿ ಭವಿಷ್ಯ ನಿಜವಾಗಿದೆ – ವಿಡಿಯೋ ವೈರಲ್‌

ಪ್ರತಿಧ್ವನಿ by ಪ್ರತಿಧ್ವನಿ
November 19, 2021
in ದೇಶ, ರಾಜಕೀಯ
0
“ಮಾರ್ಕ್ ಮೈ ವರ್ಡ್ಸ್” : ಕೃಷಿ ಕಾನೂನುಗಳ ಕುರಿತು ರಾಹುಲ್ ಗಾಂಧಿ ಭವಿಷ್ಯ ನಿಜವಾಗಿದೆ – ವಿಡಿಯೋ ವೈರಲ್‌
Share on WhatsAppShare on FacebookShare on Telegram

ಒಂದು ವರ್ಷಗಳ ಕಾಲ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ, ರೈತರ ಹೋರಾಟಕ್ಕೆ ಮಣಿದು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಘೋಷಿಸಿದ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಹಳೆಯ ವೀಡಿಯೊವನ್ನು ಮತ್ತೆ ಹಂಚಿಕೊಂಡಿದ್ದು ಈಗ ವೈರಲ್‌ ಆಗಿದೆ.

ADVERTISEMENT

ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂಬ ಅನಿರೀಕ್ಷಿತ ಘೋಷಣೆಯ ನಂತರ ಜನವರಿಯಲ್ಲಿ ರಾಹುಲ್‌ ಗಾಂಧಿ ಮಾತನಾಡಿದ ವಿಡಿಯೊವೊಂದನ್ನು ಮತ್ತೆ ಪೋಸ್ಟ್‌ ಮಾಡಿದ್ದಯ ಅದರಲ್ಲಿ, ಈ ಕಾನೂನುಗಳನ್ನು ಸರ್ಕಾರವು ಹಿಂತೆಗೆದುಕೊಳ್ಳುತ್ತದೆ. ನಾನು ಹೇಳುತ್ತಿರುವುದನ್ನು ಸರಿಯಾಗಿ ನೆನಪಿಡಿ.” ಎಂದು ಇತ್ತಿ ಹೇಳಿದ್ದರು ಈಗ ಅವರ ಭವಿಷ್ಯ ನಿಜವಾಗಿದೆ.

ವೀಡಿಯೊದಲ್ಲಿ, “ರೈತರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಮತ್ತು ನಾನು ರೈತರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಮತ್ತು ನಾನು ಅವರೊಂದಿಗೆ ನಿಲ್ಲುತ್ತೇನೆ. ನಾನು ಅವರ ಸಮಸ್ಯೆಯನ್ನು ಪಂಜಾಬ್‌ನ ಯಾತ್ರೆಯಲ್ಲಿ ಪ್ರಸ್ತಾಪಿಸಿದ್ದೇನೆ ಮತ್ತು ನಾವು ಆ ಕುರಿತು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ. ನನ್ನ ಮಾತುಗಳನ್ನು ಸರಿಯಾಗಿ ಕೇಳಿಸಿಕೊಳ್ಳಿ. ಈ ಕಾನೂನುಗಳನ್ನು ಸರ್ಕಾರವು ಹಿಂತೆಗೆದುಕೊಳ್ಳುತ್ತದೆ. ನಾನು ಹೇಳುತ್ತಿರುವುದನ್ನು ಸರಿಯಾಗಿ ನೆನಪಿಡಿ.” ಎಂದಿದ್ದಾರೆ.

ಇಂದು ಬೆಳಗ್ಗೆ ಹಳೆ ವಿಡಿಯೋವನ್ನು ಮತ್ತೆ ಶೇರ್ ಮಾಡಿ “ದೇಶದ ಅನ್ನದಾತರು ತಮ್ಮ ಸತ್ಯಾಗ್ರಹದಿಂದ ದುರಹಂಕಾರವನ್ನು ಸೋಲಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು. ಜೈ ಹಿಂದ್, ಜೈ ಹಿಂದ್ ಕಾ ಕಿಸಾನ್!” ಎಂದು ಟ್ವೀಟ್‌ ಮಾಡಿದ್ದಾರೆ.

देश के अन्नदाता ने सत्याग्रह से अहंकार का सर झुका दिया।
अन्याय के खिलाफ़ ये जीत मुबारक हो!

जय हिंद, जय हिंद का किसान!#FarmersProtest https://t.co/enrWm6f3Sq

— Rahul Gandhi (@RahulGandhi) November 19, 2021

ಮೂರೂ ಕೃಷಿ ಕಾಯ್ದೆ ಗಳ ಉದ್ದೇ ಶ ರೈತರನ್ನು ಸಬಲೀಕರಣಗೊಳಿಸುವುದೇ ಆಗಿತ್ತು . ಅದರಲ್ಲೂ ಸಣ್ಣ ರೈತರಿಗೆ ಅನುಕೂಲಮಾಡಿಕೊಡುವುದು ನಮ್ಮ ಉದ್ದೇ ಶವಾಗಿತ್ತು . ‘ನಮ್ಮ ಅವಿರತ ಪ್ರಯತ್ನ ದಹೊರತಾಗಿಯೂ ಒಂದು ವರ್ಗದ ರೈತರ ಮನವೊಲಿಸಲು ಸಾಧ್ಯ ವಾಗಲಿಲ್ಲ ’ಎಂದುಮೋದಿ ಹೇಳಿದ್ದಾರೆ.

‘ನಮ್ಮ ರೈತ ಮಿತ್ರ ರಿಗೆ ಕೃಷಿ ಕಾಯ್ದೆ ಗಳ ಅನುಕೂಲದ ಬಗ್ಗೆ ವಿವರಿಸುವಲ್ಲಿ ನಮ್ಮ ಪ್ರಯತ್ನ ಸಾಕಾಗಲಿಲ್ಲವೇನೋ ಅನಿಸುತ್ತಿದೆ’ಎಂದಿದ್ದಾರೆ.

‘ಮೂರೂ ಕೃಷಿ ಕಾಯ್ದೆ ಗಳನ್ನು ಹಿಂಪಡೆಯುವ ನಿರ್ಧಾರ ಘೋಷಣೆಗಾಗಿ ನಾನು ಬಂದಿದ್ದೇ ನೆ. ಈ ತಿಂಗಳಾಂತ್ಯ ಕ್ಕೆ ಆರಂಭವಾಗಲಿರುವ ಸಂಸತ್ತಿನ ಅಧಿವೇಶನದಲ್ಲಿ ಕಾಯ್ದೆ ಗಳನ್ನು ಹಿಂಪಡೆಯಲು ಬೇಕಾದ ಸಾಂವಿಧಾನಿಕ ಪ್ರ ಕ್ರಿಯೆಗಳನ್ನು ಪೂರ್ಣಗೊಳಿಸುತ್ತೇ ವೆ’ಎಂದು ತಿಳಿಸಿದರು.

ರೈತರಿಗೆ ನೆರವಾಗುವ ಉದ್ದೇಶದಿಂದ ಹಾಗೂ ರೈತರನ್ನು ಸ್ವಾವಲಂಬಿಗಳನ್ನಾಗಿಸಲು ಎಪಿಎಂಸಿ ಕಾಯ್ದೆಯನ್ನು ಮೋದಿ ಸರಕಾರ ಜಾರಿಗೊಳಿಸಲು ಚಿಂತನೆ ನಡೆಸಿತ್ತು. ಆದರೆ, ಒಂದು ವರ್ಗದ ರೈತರಿಂದ ಮೂಡಿ ಬಂದ ವಿರೋಧ ಹಾಗೂ ನಿರಂತರವಾಗಿ ದಿಲ್ಲಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ನಡೆದ ಪ್ರತಿಭಟನೆಗಳಿಂದ ಕೇಂದ್ರ ಸರಕಾರ ಇಂಥದ್ದೊಂದು ನಿರ್ಧಾರಕ್ಕೆ ಬಂದಿರಬಹುದೆಂದು ವಿಶ್ಲೇಷಸಲಾಗುತ್ತಿದೆ. ಅಲ್ಲದೆ ಬರುವ ಉತ್ತರ ಪ್ರದೇಶ ಹಾಗೂ ಪಂಜಾಬ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಇಂಥದ್ದೊಂದು ನಿರ್ಧಾರಕ್ಕೆ ಬಂದಿದೆ ಕೇಂದ್ರ ಸರಕಾರ. ಇಂದು ಪವಿತ್ರ ಗುರುಪೂರಬ್ ದಿನವಾಗಿದ್ದು, ಈ ದಿನವೇ ಗುರು ನಾನಕ್ ಅವರನ್ನು ನೆನಪಿಸಿಕೊಂಡು ಮೋದಿ ಪಂಜಾಬ್ನಲ್ಲಿ ಹೆಚ್ಚು ವಿರೋಧ ವ್ಯಕ್ತವಾಗುತ್ತಿರುವ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ರಾಯಚೂರು-ಕೊಪ್ಪಳ MLC ಚುನಾವಣೆ: ಲಿಂಗಾಯತ ರೆಡ್ಡಿಗಳದ್ದೇ ಆಟ, ಈ ಸಲವೂ ಕಾಂಗ್ರೆಸ್ ಬಾವುಟ!

Next Post

3 ದಿನಗಳ ಬೆಂಗಳೂರು ಟೆಕ್ ಸಮ್ಮಿಟ್ ಗೆ ತೆರೆ : ಆವಿಷ್ಕಾರ.. ಡಿಜಿಟಲ್..‌ ನವೋದ್ಯಮಕ್ಕೆ ರಾಜ್ಯದಲ್ಲಿ ಹೆಚ್ಚಿದ ಆಧ್ಯತೆ!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
3 ದಿನಗಳ ಬೆಂಗಳೂರು ಟೆಕ್ ಸಮ್ಮಿಟ್ ಗೆ ತೆರೆ : ಆವಿಷ್ಕಾರ.. ಡಿಜಿಟಲ್..‌ ನವೋದ್ಯಮಕ್ಕೆ ರಾಜ್ಯದಲ್ಲಿ ಹೆಚ್ಚಿದ ಆಧ್ಯತೆ!

3 ದಿನಗಳ ಬೆಂಗಳೂರು ಟೆಕ್ ಸಮ್ಮಿಟ್ ಗೆ ತೆರೆ : ಆವಿಷ್ಕಾರ.. ಡಿಜಿಟಲ್..‌ ನವೋದ್ಯಮಕ್ಕೆ ರಾಜ್ಯದಲ್ಲಿ ಹೆಚ್ಚಿದ ಆಧ್ಯತೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada