• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜನ್ಮದಿನ ವಿಶೇಷ | ಗಾಂಧೀಜಿ ತತ್ವವನ್ನೇ ಜೀವನದುದ್ದಕ್ಕೂ ಅನುಕರಿಸಿದ ಮಹಾನ್ ನಾಯಕ ಮಾರ್ಟಿನ್ ಲೂಥರ್ ಕಿಂಗ್

Any Mind by Any Mind
January 15, 2022
in ದೇಶ, ವಿದೇಶ
0
ಜನ್ಮದಿನ ವಿಶೇಷ | ಗಾಂಧೀಜಿ ತತ್ವವನ್ನೇ ಜೀವನದುದ್ದಕ್ಕೂ ಅನುಕರಿಸಿದ ಮಹಾನ್ ನಾಯಕ ಮಾರ್ಟಿನ್ ಲೂಥರ್ ಕಿಂಗ್
Share on WhatsAppShare on FacebookShare on Telegram

“ಒಂದು ದಿನ ನನ್ನ ನಾಲ್ಕು ಪುಟ್ಟ ಮಕ್ಕಳು, ಚರ್ಮದ ಬಣ್ಣಕ್ಕೆ ಬದಲಾಗಿ ವ್ಯಕ್ತಿತ್ವದ ಮೇಲೆ ಚಾರಿತ್ರ್ಯ ಅಳೆಯುವಂತಹ ರಾಷ್ಟ್ರದಲ್ಲಿ ಬದುಕುತ್ತಾರೆ ಎಂಬ ಕನಸಿದೆ. ಜಾರ್ಜಿಯಾದ ಕೆಂಪು ಪರ್ವತಗಳ ಮೇಲೆ, ಗುಲಾಮರ ಹಾಗೂ ಮಾಲೀಕರ ಮಕ್ಕಳ ಸಹೋದರತೆಯ ಮೇಜಿನ ಮೇಲೆ ಒಟ್ಟೊಟ್ಟಿಗೆ ಕುಳಿತು ಮಾತನಾಡುತ್ತಾರೆ ಎಂಬ ಕನಸು ನನ್ನಲ್ಲಿದೆ.”

ADVERTISEMENT

ಈ ಮೇಲಿನ ದೂರದೃಷ್ಟಿ ಚಿಂತನೆಯ ಮಾತುಗಳನ್ನು ಹೇಳಿದವರು ಮತ್ತಾರು ಅಲ್ಲ ವರ್ಣಭೇದ ನೀತಿ ವಿರುದ್ಧ ಧ್ವನಿಯೆತ್ತಿದ ಮಾರ್ಟಿನ್ ಲೂಥರ್ ಕಿಂಗ್.

ಇಂದು ಮಾರ್ಟಿನ್ ಲೂಥರ್ ಕಿಂಗ್ ಅವರ ಜನ್ಮದಿನ. ಜನವರಿ 15, 1929 ರಲ್ಲಿ ಜನಿಸಿದ ಕಿಂಗ್ ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಅಮೆರಿಕದ ಕರಿಯರ ಪಾಲಿಗೆ ಭರವಸೆಯ ನಾಯಕನಾಗಿ, ಕ್ರಾಂತಿಯ ಚೇತನವಾಗಿ ಆಗಮಿಸಿದ ಕಿಂಗ್ ವರ್ಣಭೇದ ನೀತಿ ವಿರುದ್ಧ ಧ್ವನಿಯೆತ್ತಿ ಯಶಸ್ವಿಯಾದರು.

ಬಿಳಿಯರ ಕಿರುಕುಳಕ್ಕೆ, ಅಸ್ಪ್ರಶ್ಯತೆಗೆ ಒಳಗಾಗಿರುವ ಕರಿಯರನ್ನು ಅಪ್ಪಿಕೊಂಡು ಕರಿಯ ಜನಾಂಗದವರ ಪರ ಹೋರಾಟಕ್ಕೆ ಸಜ್ಜಾಗಿ ಕರಿಯರ ನಾಯಕನಾಗಿ ಕಿಂಗ್ ಹೊರಹೊಮ್ಮಿದ. ಬಿಳಿಯರು ಹಿಂಸಾತ್ಮಕ ಚಟುವಟಿಕೆಗಳು ನಡೆಸಿ ಎಷ್ಟೇ ಕಿರುಕುಳ ನೀಡಿದರೂ ಲೂಥರ್ ಕಿಂಗ್ ಹಿಂಸಾತ್ಮಕ ಮಾರ್ಗ ಹಿಡಿಯಲಿಲ್ಲ. ಅದಕ್ಕೆ ಬಲವಾದ ಕಾರಣ ಒಂದಿತ್ತು. ಅದೇನೆಂದರೆ ಭಾರತದ ಅಹಿಂಸಾತ್ಮಕ ಹೋರಾಟಗಾರ ಮಹಾತ್ಮ ಗಾಂಧೀಜಿಯವರು ಮಾರ್ಟಿನ್ ಲೂಥರ್ ಕಿಂಗ್ ಗೆ ಪ್ರೇರಣೆ. ಗಾಂಧೀಜಿಯವರ ತತ್ವವನ್ನೇ ಜೀವನದುದ್ದಕ್ಕೂ ಕಿಂಗ್ ಅನುಕರಣೆ ಮಾಡಿದರು.

ಅಮೆರಿಕಾದಿಂದ ಭಾರತಕ್ಕೂ ಆಗಮಿಸಿದ ಕಿಂಗ್ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ್ದರು. ಎಲ್ಲಾ ಕ್ಷೇತ್ರಗಳಲ್ಲೂ ಬಿಳಿಯರಿಗೆ ಮಾತ್ರ ಅವಕಾಶಗಳಿದ್ದವು, ಆದರೆ ಕರಿಯರು ಮಾತ್ರ ಯಾವುದೇ ಸೌಲಭ್ಯ, ಹಕ್ಕುಗಳು ದಕ್ಕಿಸಿಕೊಳ್ಳಲು ಸಾಧ್ಯವಾಗದೇ ವಂಚಿತರಾಗಿ ಬದುಕುತ್ತಿದ್ದರು. ಕರಿಯರಿಗೆ ಮತ್ತು ಬಿಳಿಯರಿಗೆ ಪ್ರತ್ಯೇಕತೆ ಮಾಡುವ ಮೂಲಕ ಅಸಮಾನ ವ್ಯವಸ್ಥೆ ಜಾರಿಯಲ್ಲಿತ್ತು. ಇಂತಹ ಅನೇಕ ಸಂಕಷ್ಟ, ಅವಮಾನಗಳನ್ನು ಎದುರಿಸಿದ ಲೂಥರ್ ಕಿಂಗ್ ಮುಂದೆ ದೊಡ್ಡ ಮಟ್ಟದಲ್ಲಿ ಅಹಿಂಸಾತ್ಮಕ ಪ್ರತಿಭಟನೆಗೆ ಸಜ್ಜಾದರು. ಲಕ್ಷ – ಲಕ್ಷ ಕರಿಯ ಜನಾಂಗದವರನ್ನು ಒಂದೆಡೆ ಸೇರಿಸಿದ ಕಿಂಗ್ ವೇದಿಕೆ ಮೇಲೆ ಆಗಮಿಸಿ ತನ್ನ ಭಾವುಕತೆಯಿಂದ ಹೇಳಿದ “ನನಗೆ ಒಂದು ಇಂದು ಕನಸಿದೆ’ ಎನ್ನುವ ಪ್ರಸಿದ್ಧ ಭಾಷಣವು ಜನಾಂಗೀಯ ಕೇಂದ್ರಿತ ನಿಂದನೆ, ಕರಿಯರ ಕಿರುಕುಳ ಮತ್ತು ಶೋಷಣೆಯ ಸಾಮಾಜಿಕ ಅನುಭವಗಳನ್ನು ಪ್ರತಿಬಿಂಬಿಸುತ್ತದೆ.

ಕೊನೆಗೂ ಕಿಂಗ್ ಹೋರಾಟದ ಫಲವಾಗಿ 1964 ರಲ್ಲಿ ಅಮೆರಿಕ ಅಧ್ಯಕ್ಷ ನಾಗರೀಕ ಹಕ್ಕುಗಳ ಕಾಯಿದೆ ಜಾರಿಗೊಂಡು, ಒಪ್ಪಂದಕ್ಕೆ ಸಹಿ ಹಾಕಿದರು. ನೂರಾರು ವರ್ಷಗಳ ಕಾಲ ಬಿಳಿಯರ ಅಟ್ಟಹಾಸ, ಹಿಂಸೆ, ದೌರ್ಜನ್ಯಕ್ಕೆ ಒಳಗಾಗಿದ್ದ ಲಕ್ಷಾಂತರ ಕರಿಯರು ಮಾರ್ಟಿನ್ ಲೂಥರ್ ಕಿಂಗ್ ಎಂಬ ಚೈತನ್ಯ ಶಕ್ತಿಯಿಂದ ನಿಟ್ಟುಸಿರು ಬಿಡುವಂತಾಗಿತ್ತು.

ಸಾಮಾಜಿಕ ಕ್ರಾಂತಿಗೆ ಹೆಸರಾದ ಮಾರ್ಟಿನ್ ಲೂಥರ್ ಕಿಂಗ್ ಗೆ ‘ನೊಬೆಲ್ ಶಾಂತಿ’ ಪ್ರಶಸ್ತಿ ಕೂಡ ಒಲಿದಿತ್ತು. ‘ಅಮೆರಿಕದ ಗಾಂಧಿ’ ಎಂದೇ ಪ್ರಖ್ಯಾತಿ ಪಡೆದಿರುವ ಕಿಂಗ್ ಅಹಿಂಸಾತ್ಮಕ ತತ್ವಗಳಿಂದಲೇ ಗೆಲುವು ಸಾಧಿಸಿದ ಜನಮನ ನೇತಾರ. ಆದರೆ ಕೊನೆಗೆ ಎಪ್ರಿಲ್ 4, 1968 ರಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿ ಅಂದು ಅಮೆರಿಕಾ ಚರಿತ್ರೆಯಲ್ಲಿ ದುರಂತದ ಸಾವಿಗೆ ಶರಣಾದರು.

ಮಾರ್ಟಿನ್ ಕಿಂಗ್ ದೈಹಿಕವಾಗಿ ಮರೆಯಾದರೂ ಲಕ್ಷಾಂತರ ಹೃದಯಗಳಲ್ಲಿ ಇಂದಿಗೂ ನೆಲೆಸಿದ್ದಾರೆ. ಮಾರ್ಟಿನ್ ಒಬ್ಬ ಛಲಗಾರ, ಹೋರಾಟಗಾರ ಅಷ್ಟೇ ಅಲ್ಲದೇ ಸಾಮಾಜಿಕ ಸುಧಾರಣೆಗಾಗಿ ಪ್ರಾಣತ್ಯಾಗ ಮಾಡಿದ ಅದಮ್ಯ ಚೇತನ ಕೂಡ ಹೌದು. ಇಂಥ ಕ್ರಾಂತಿಕಾರಿ ನಾಯಕರ ಆದರ್ಶಗಳು ನಮ್ಮಂತಹ ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿದಾಯಕವಾಗಬೇಕಾಗಿದೆ.

ಅಸಮಾನತೆ, ಅಸ್ಪೃಶ್ಯತೆ, ಅಶಾಂತಿ, ಹಿಂಸಾಚಾರ ತಾಂಡವವಾಡುತ್ತಿರುವ ದುರಿತ ಕಾಲದಲ್ಲಿ ‘ಮಾರ್ಟಿನ್ ಲೂಥರ್ ಕಿಂಗ್’ ಎನ್ನುವ ಕ್ರಾಂತಿಯ ಚಿಲುಮೆಗಳು ಮತ್ತೆ ಮತ್ತೆ ಹುಟ್ಟು ಪಡೆದು ಪುಟಿದೇಳಬೇಕು ಎಂದೆನಿಸುತ್ತದೆ.

Tags: Martin Luther King was a great leader who imitated Gandhiji throughout his life
Previous Post

ಗೋರಖ್ಪುರದಿಂದ ಯೋಗಿ ಸ್ಪರ್ಧೆ ಖಚಿತ; ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Next Post

ಸಮುದ್ರದೊಳಗೆ ಜ್ವಾಲಾಮುಖಿ ಸ್ಪೋಟ; ಕ್ಷಣಾರ್ಧದಲ್ಲೇ ಅಪ್ಪಳಿಸಿದ ಸುನಾಮಿ

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

January 16, 2026
Next Post
ಸಮುದ್ರದೊಳಗೆ ಜ್ವಾಲಾಮುಖಿ ಸ್ಪೋಟ; ಕ್ಷಣಾರ್ಧದಲ್ಲೇ ಅಪ್ಪಳಿಸಿದ ಸುನಾಮಿ

ಸಮುದ್ರದೊಳಗೆ ಜ್ವಾಲಾಮುಖಿ ಸ್ಪೋಟ; ಕ್ಷಣಾರ್ಧದಲ್ಲೇ ಅಪ್ಪಳಿಸಿದ ಸುನಾಮಿ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada