• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕೇಂದ್ರದ ಮುಂದೆ ಕಾರ್ಮಿಕರ ಹಕ್ಕೊತ್ತಾಯ ಮಂಡಿಸಲು ಮಾಸಾ ನಿರ್ಧಾರ! ನಾಳೆ ಬೆಂಗಳೂರಲ್ಲಿ ಬೃಹತ್‌ ಸಮಾವೇಶ

ಪ್ರತಿಧ್ವನಿ by ಪ್ರತಿಧ್ವನಿ
December 18, 2021
in Uncategorized
0
ಕೇಂದ್ರದ ಮುಂದೆ ಕಾರ್ಮಿಕರ ಹಕ್ಕೊತ್ತಾಯ ಮಂಡಿಸಲು ಮಾಸಾ ನಿರ್ಧಾರ! ನಾಳೆ ಬೆಂಗಳೂರಲ್ಲಿ ಬೃಹತ್‌ ಸಮಾವೇಶ
Share on WhatsAppShare on FacebookShare on Telegram

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆ ವಿರುದ್ಧ ರೈತರು ಒಂದು ವರ್ಷ ಪ್ರತಿಭಟಿಸಿ, ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಅವರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿದರು. ಆ ಹಾದಿಯಲ್ಲೇ ಕಾರ್ಮಿಕ ಸಂಘಟನೆಗಳು ಸಹ ತಮ್ಮ ಹಕ್ಕೊತ್ತಾಯಗಳನ್ನು ಕೇಂದ್ರ ಸರ್ಕಾರ ತ್ವರಿತವಾಗಿ ಈಡೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ʻಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿʼ (MASA- Mazdoor Adhikar Sangharsha Abhiyan) ಉದ್ದೇಶಿಸಿದೆ. ಅದರ ರೂಪುರೇಷೆ ಮತ್ತು ಸಿದ್ದತೆಗಳಿಗಾಗಿ ಭಾನುವಾರ ನಗರದ ಸ್ವತಂತ್ರ ಉದ್ಯಾನವನದಲ್ಲಿ ಬೃಹತ್ ಸಮಾವೇಶವನ್ನು ನಡೆಸಲು ಕಾರ್ಮಿಕ ಸಂಘಟನೆಗಳು ಉದ್ದೇಶಿಸಿವೆ. ಬೆಳ್ಳಗ್ಗೆ 11:00ಕ್ಕೆ ಬೆಂಗಳೂರು ನಗರ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಶುರುವಾಗಲಿದ್ದು 12:00 ರ ಸುಮಾರಿಗೆ ಸಮಾವೇಶ ಸ್ಥಳವನ್ನು ತಲುಪಲಿದೆ.

ADVERTISEMENT

ಹಿಂದೆ ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟದ ಫಲವಾಗಿ ಜಾರಿಗೆ ಬಂದಿದ್ದ 44 ಕಾರ್ಮಿಕ ಕಾಯ್ದೆಗಳನ್ನು ಕಿತ್ತುಹಾಕಿ ಪ್ರಸ್ತುತ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ಹಿಂದೆ ಇದ್ದ ಸರ್ಕಾರ ಜಾರಿಗೆ ತಂದ ಕಾಯ್ದೆಗಳನ್ನು ಕಿತ್ತುಹಾಕಿ 4 ಕಾಯ್ದೆಗಳನ್ನು ಜಾರಿಗೆ ತಂದಿದೆ. ಸದ್ಯ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಈ 4 ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಕಾರ್ಮಿಕರಿಗಿದ್ದ ಸಾಂವಿಧಾನಿಕ ಹಕ್ಕುಗಳನ್ನೆಲ್ಲಾ ಕಸಿದುಕೊಳ್ಳುವ, ಕಾರ್ಮಿಕರ ನೌಕರಿ ಖಾಯಂ ಬಗ್ಗೆ ಪ್ರಶ್ನಿಸುವುದು ಪ್ರಗತಿ ವಿರೋಧಿಯೆಂದು, ಉದ್ಯೋಗಿ-ಉದ್ಯೋಗದಾತ-ಸರ್ಕಾರದ ನಡುವೆ ಇರುವ ತ್ರಿಪಕ್ಷೀಯ ಸಂಬಂಧವನ್ನು ದ್ವಿಪಕ್ಷೀಯವಾಗಿಸುವುದು ಮತ್ತು ದೇಶದ 50 ಕೋಟಿ ಕಾರ್ಮಿಕರು ಅದರಲ್ಲೂ, ಅಸಂಘಟಿತ ವಲಯದ ಕಾರ್ಮಿಕರ ಆದಾಯಕ್ಕೆ ಇದ್ದಂತಹ ಕನಿಷ್ಠ ಕಾನೂನು ಸಂರಕ್ಷಣೆಯನ್ನು ತೆಗೆದುಹಾಕುವ ದುರುದ್ದೇಶ. ಈ ಕಾರ್ಮಿಕ ಸಂಹಿತೆಗಳ ಹಿಂದೆ ಅಡಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿವೆ. ಆದ್ದರಿಂದ, ರೈತರ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ಹಿಂಪಡೆದಂತೆ ಈ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದೇಶವ್ಯಾಪಿ ಅಂದೋಲನವನ್ನು ನಡೆಸಲು ʻಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿʼ(MASA- Mazdoor Adhikar Sangharsha Abhiyan) ನಿರ್ಧರಿಸಿದೆ.

ಅದರ ಭಾಗವಾಗಿ ಭಾನುವಾರ ಡಿ.19 ರಂದು ನಗರದ ಫ್ರೀಡಂ ಪಾರ್ಕಿನಲ್ಲಿ ಕಾರ್ಮಿಕ ಸಂಘಟನೆಗಳ ಬೃಹತ್ ಸಮಾವೇಶ ನಡೆಯುತ್ತಿದೆ. ಸಮಾವೇಶ ಸಭೆಯಲ್ಲಿ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆದ ರೀತಿಯಲ್ಲಿ ಕಾರ್ಪೋರೇಟ್ ಪರವಾಗಿರುವ ಈ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು, ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ರೀತಿಯಲ್ಲೇ ಕಾರ್ಮಿಕರಿಗೆ 25,000 ಮಾಸಿಕ ವೇತನ ಕಡ್ಡಾಯ ಮಾಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ, ಕಾಯಂ ಕೆಲಸವಿದ್ದ ಕಡೆ ಗುತ್ತಿಗೆ ಪದ್ದತಿ ರದ್ದು ಮಾಡಬೇಕು, ಸಾರ್ವಜನಿಕ ಉದ್ದಿಮೆಗಳನ್ನು ಬಂದ್ ಮಾಡಿ, ಉದ್ಯೋಗ ನೀಡುವ ಉದ್ದಿಮೆಗಳನ್ನು ಹೆಚ್ಚು ಮಾಡಬೇಕು ಎಂದು ಸಂಘಟನೆಗಳ ವತಿಯಿಂದ ಕೇಂದ್ರ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಲು ಸಂಘಟನೆ ನಿರ್ಧರಿಸಿದೆ.

ಬಳ್ಳಾರಿ ಜಿಲ್ಲೆಯ ಗಣಿ ಕಾರ್ಮಿಕರಿಗೆ ಆರ್&ಆರ್ ಅಡಿಯಲ್ಲಿ ಪರಿಹಾರ ನೀಡಬೇಕು. ಯರಮರಸ ಥರ್ಮಲ್ ಪವರ್ ಪ್ಲಾಂಟ್ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಎಸ್ಆರ್ ದರದಲ್ಲಿ ವೇತನ ಹಾಗೂ ಶಾಸನಬದ್ಧ ಸೌಲಭ್ಯಗಳನ್ನು ನೀಡಬೇಕು. BWSSB, BBMP ಹಾಗೂ ರೇಸ್ಕೋರ್ಸ್ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸಮಾನ ವೇತನ, ಗ್ರಾಚ್ಯುಟಿ, ಆರೋಗ್ಯ ವಿಮೆ ಮತ್ತು ಕೆಲಸದ ಭದ್ರತೆಯನ್ನು ನೀಡಬೇಕು. ಅನ್ನಭಾಗ್ಯ ಯೋಜನೆ ಕಾರ್ಮಿಕರಿಗೆ ಗ್ರಾಚ್ಯುಟಿ ಹಾಗೂ ಆಹಾರ ಇಲಾಖೆಯಿಂದಲೇ ನೇರವಾಗಿ ಸಂಬಳ ಪಾವತಿ ಮಾಡುವುದು. ಎಲ್ಲಾ ಹಮಾಲಿ (Loading-Unloading) ಕಾರ್ಮಿಕರಿಗೆ ಮಹಾರಾಷ್ಟ್ರ ಮಾದರಿ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕು. ಪ್ರತಿ ರಾಜ್ಯದಲ್ಲಿ ವಲಸೆ ಕಾರ್ಮಿಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕು. ನೇಕಾರ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂಬ ಬೇಡಿಕೆಗಳು ಸಮಾವೇಶದ ಹಿಂದಿವೆ.

ಈ ಸಮಾವೇಶದಲ್ಲಿ TUCI, KSS, BWSSB-BBMP ಗುತ್ತಿಗೆ ಪೌರ ಕಾರ್ಮಿಕರ ಸಂಘ, ಬೆಂಗಳೂರು ರೇಸ್ ಕೋರ್ಸ್ ಕಾರ್ಮಿಕರ ಸಂಘ, ಕರ್ನಾಟಕ ರಾಜ್ಯ ಲೋಡಿಂಗ್ & ಅನ್ಲೋಡಿಂಗ್ ಕಾರ್ಮಿಕರ ಒಕ್ಕೂಟ, MWSN, ಮಂಡ್ಯ ರೈಲ್ವೆ ಗೂಡ್ಸ್ ಶೆಡ್ ಕಾರ್ಮಿಕರ ಸಂಘ, KSBCL ಲೋಡಿಂಗ್ ಕಾರ್ಮಿಕರ ಸಂಘ, ಕೂಲಿ ನೇಕಾರ ಕಾರ್ಮಿಕರ ಬಳಗ ಸಂಘಟನೆಗಳು ಸಮಾವೇಶದಲ್ಲಿ ಪಾಲ್ಗೊಳಲಿವೆ.

Pamphlet-A4-sizeDownload
Tags: BJPCongress PartyCovid 19ಕಾರ್ಮಿಕಾರ್ಮಿಕ ಹಕ್ಕುಗಳ ಹೋರಾಟ ಸಮೀತಜನಶಕ್ತಿನರೇಂದ್ರ ಮೋದಿಬಿಜೆಪಿಮಾಸಹಕ್ಕುಗಳು
Previous Post

ಕರೋನ ಕುರಿತು ಜನ ಜಾಗೃತಿಯೊಂದಿಗೆ ಜನಾಂದೋಲನ ಕೂಡ ಆಗಬೇಕು – ಡಾ.ರಾಜು / DR.Raju

Next Post

ಹುಡುಗಿಯರ ಮದುವೆ ವಯಸ್ಸು ಮತ್ತು ಹರಕು ಬಾಯಿಯ ರಾಜಕಾರಣಿಗಳು!

Related Posts

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು
Uncategorized

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

by ಪ್ರತಿಧ್ವನಿ
November 17, 2025
0

ಬೆಂಗಳೂರು: ಸಿಲಿಕಾನ್ ಸಿಟಿಯ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಮಹಿಳೆ ಸೈಬರ್ ವಂಚನೆ ಬಲೆಗೆ ಬಿದ್ದಿದ್ದು, ಬರೋಬ್ಬರಿ 31.83 ಕೋಟಿ ಹಣ ಕಳೆದುಕೊಂಡಿದ್ದಾರೆ. ಇದು ದೇಶದಲ್ಲಿ ಅತಿದೊಡ್ಡ ಸೈಬರ್...

Read moreDetails

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

November 9, 2025
DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

November 6, 2025
ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025
Next Post
ಹುಡುಗಿಯರ ಮದುವೆ ವಯಸ್ಸು ಮತ್ತು ಹರಕು ಬಾಯಿಯ ರಾಜಕಾರಣಿಗಳು!

ಹುಡುಗಿಯರ ಮದುವೆ ವಯಸ್ಸು ಮತ್ತು ಹರಕು ಬಾಯಿಯ ರಾಜಕಾರಣಿಗಳು!

Please login to join discussion

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada