ಲೋಕಸಭಾ(Loka Saba) ಚುನಾವಣೆ ಬೆನ್ನಲ್ಲೇ ʻಸಕ್ಕರೆ ನಾಡುʼ ಮಂಡ್ಯದಲ್ಲಿ ಕಾಂಗ್ರೆಸ್(Congress) ನಾಯಕರು ಚುನಾವಣೆಯ ರಣಕಹಳೆ ಮೊಳಗಿಸಿದ್ದು, ಮಂಡ್ಯ(Mandya) ಜಿಲ್ಲೆಯ ಮಳವಳ್ಳಿಯಲ್ಲಿ ಭಾನುವಾರ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಮೂಲಕ ʻಲೋಕಸಮರʼಕ್ಕೆ ಕೈ ನಾಯಕರು ಮೊದಲ ಹೆಜ್ಜೆ ಇರಿಸಿದ್ದಾರೆ.
![](https://pratidhvani.com/wp-content/uploads/2024/02/WhatsApp-Image-2024-02-18-at-13.59.43-1024x633.webp)
ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ಮೈದಾನದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ(Siddaramaiah) ವಿದ್ಯುಕ್ತ ಚಾಲನೆ ನೀಡಿದರು. ಬಳಿಕ 482 ಕೋಟಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ ದೊರೆಯಿತು, ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಸಾರ್ವಜನಿಕರ ಹರ್ಷೋದ್ಘಾರದ ಮೂಲಕ ಸ್ವಾಗತಿಸಿದರು. ವೇದಿಕೆ ಸಮಾರಂಭಕ್ಕೂ ಮುನ್ನ ಸಿಎಂ ಅಶ್ವಮೇಧ ಬಸ್ಗಳಿಗೆ ಚಾಲನೆ ನೀಡಿದರು.
![](https://pratidhvani.com/wp-content/uploads/2024/02/WhatsApp-Image-2024-02-18-at-14.00.15-1024x604.webp)
ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವ ಸತೀಶ್ ಜಾರಕಿಹೋಳಿ, ಭೈರತಿ ಸುರೇಶ್, ಶಾಸಕರಾದ ನರೇಂದ್ರ ಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಉದಯ್ ಕುಮಾರ್, ಗಣಿಗ ರವಿಕುಮಾರ್ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖಂಡರ ಜೊತೆಗೆ ಸಾವಿರಾರು ಸಂಖ್ಯೆಯಲ್ಲಿ ಗ್ಯಾರಂಟಿ ಫಲಾನುಭವಿಗಳು ಆಗಮಿಸಿದ್ದರು.
#Congress #Siddaramaiah #Mandya #CMofKarnataka #INCKarnataka