
ವಯನಾಡ್ (ಕೇರಳ): ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ (Meppadi in Waynad Kerala Dist) ಬಳಿ ಮಂಗಳವಾರ ಮುಂಜಾನೆ ವಿವಿಧ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (KSDMA) ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ (NDRF)ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದ್ದು, ಹೆಚ್ಚುವರಿ ಎನ್ಡಿಆರ್ಎಫ್ ತಂಡ ವಯನಾಡ್ಗೆ ತೆರಳುತ್ತಿದೆ. ಕೆಎಸ್ಡಿಎಂಎ ಫೇಸ್ಬುಕ್ ಪೋಸ್ಟ್ನ ಪ್ರಕಾರ, ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್ಗೆ ತೆರಳಲು ಸೂಚನೆ ನೀಡಲಾಗಿದೆ.
ಸಂತ್ರಸ್ತ ಪ್ರದೇಶಗಳ ಸ್ಥಳೀಯರು ಹೇಳುವಂತೆ ಹಲವರು ಸಿಕ್ಕಿಬಿದ್ದಿರುವ ಆತಂಕವಿದೆ. ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.

ಕೇರಳದಲ್ಲಿ 2018 ಮತ್ತು 2019 ರ ಭೂ ಕುಸಿತ ಸಂದರ್ಭದಲ್ಲಿ ಭಾರೀ ಪ್ರಮಾಣದ ಆಸ್ತಿ ಮತ್ತು ಪ್ರಾಣ ಕಾನಿ ಆಗಿತ್ತು. ಮಳೆಯ ರಭಸ ಹೆಚ್ಚಾಗಿರುವ ಬೆನ್ನಲ್ಲೇ ಭೂ ಕುಸಿತವೂ ಸಂಭವಿಸಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ.