ಮಂಡ್ಯದಲ್ಲಿ ಸೋಲಿನ ಬಳಿಕ ದಳಪತಿಗಳಿಗೆ ಮತ್ತೊಂದು ಶಾಕ್ ಎದುರಾಗಲಿದೆ ಎಂಬ ಮಾತುಗಳು ಈಗ ಜೆಡಿಎಸ್ ವಲಯದಲ್ಲಿ ಕೇಳಿ ಬಂದಿದೆ. ಹೌದು ಮಾಜಿ ಸಚಿವ ಸಿಎಸ್ ಪುಟ್ಟರಾಜುಗೆ ಕಾಂಗ್ರೆಸ್ ಗಾಳ ಹಾಕಿದೆ ಎಂಬ ಮಾತುಗಳು ಈಗ ಹಳೆ ಮೈಸೂರು ಪ್ರಾಂತ್ಯದ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಸದ್ಯದ ಮಟ್ಟಿಗೆ ತೆರೆಮರೆಯಲ್ಲಿ ಪಕ್ಷ ಸೇರ್ಪಡೆ ಕುರಿತ ಮಾತುಕತೆ ನಡೆಯುತ್ತಿದೆ ಎನ್ನಲಾಗುತ್ತಿದೆ
![](https://pratidhvani.com/wp-content/uploads/2023/08/1000256937.png)
ಎಂಪಿ ಟಿಕೆಟ್ ಭರವಸೆ ನೀಡಿ ಕಾಂಗ್ರೆಸ್ಗೆ ಸೆಳೆಯಲು ಕೈ ನಾಯಕರು ಪ್ಲಾನ್ ರೂಪಿಸಿದ್ದಾರೆ ಎಂದು ಕೃಷಿ ಚಲುವರಾಯಸ್ವಾಮಿ ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟಿದ್ದಾರೆ. ಮಂಡ್ಯದ ಜೆಡಿಎಸ್ ಮಾಜಿ ಶಾಸಕರು ಕಾಂಗ್ರೆಸ್ಗೆ ಬರ್ತಾರೆ. ಯಾರು ಅನ್ನೋದನ್ನ ಮುಂದೆ ಹೇಳ್ತೀವಿ ಎಂದು ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದು ಈ ವಿಚಾರ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
![](https://pratidhvani.com/wp-content/uploads/2023/08/1000256950-1024x576.jpg)
ಲೋಕಸಭೆಗೆ ಪುಟ್ಟರಾಜು ಅಭ್ಯರ್ಥಿ ಮಾಡಿ ಮಂಡ್ಯ ಎಂಪಿ ಸ್ಥಾನ ಗೆಲ್ಲಲು ಕಾಂಗ್ರೆಸ್ ಪ್ಲಾನ್ ರೂಪಿಸಿಕೊಂಡಿದ್ದು, ವಿಧಾನಸಭೆ ಚುನಾವಣೆ ವೇಳೆಯೆ ನಡೆದಿದ್ದ ಪುಟ್ಟರಾಜು ಸೆಳೆಯುವ ತಂತ್ರ ವಿಫವಾಗಿದ್ದರಿಂದ, ಈಗ ಮತ್ತೆ ಲೋಕಸಭೆ ಟಿಕೆಟ್ ಭರವಸೆ ನೀಡಿ ಸೆಳೆಯಲು ಯತ್ನಿಸಲಾಗಿದೆ, ಸದ್ಯ ಜೆಡಿಎಸ್ನಿಂದ ಅಂತರ ಕಾಯ್ದುಕೊಂಡಿರುವ ಸಿಎಸ್ ಪುಟ್ಟರಾಜು, ಈ ಹಿಂದೆ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ವಿರುದ್ಧ ಜೆಡಿಎಸ್ ನಡೆಸಿದ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿಗೂ ಗೈರಾಗಿದ್ದರು ಈ ಎಲ್ಲಾ ಬೆಳವಣಿಗೆಯನ್ನ ಗಮನಿಸಿದರೆ ಮುಂದಿನ ದಿನಗಳಲ್ಲಿ ಸಿ.ಎಸ್ ಪುಟ್ಟರಾಜು ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎನ್ನಲಾಗುತ್ತಿದೆ.