ತಮಿಳುನಾಡಿನ ಕರೂರಿನಲ್ಲಿ ನಡೆದ ನಟ ವಿಜಯ್ ದಳಪತಿ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತಕ್ಕೆ ಮಕ್ಕಳು ಮತ್ತು ವಯಸ್ಕರು ಸೇರಿ 33 ಮಂದಿ ಬಲಿಯಾಗಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ..

ಮೃತ ವಯಸ್ಕರು, ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (TVK) ಬೆಂಬಲಿಗರಾಗಿದ್ದರು. ರ್ಯಾಲಿಗಾಗಿ ಕನಿಷ್ಠ ಆರು ಗಂಟೆಗಳ ಕಾಲ ಕಾದಿದ್ದರು. ಸ್ಥಳಕ್ಕೆ ರ್ಯಾಲಿ ತಡವಾಗಿ ಬಂದಿದ್ದರಿಂದ ಹೆಚ್ಚಿನ ಜನಸಂದಣಿಯಾಗಿ ಕಾಲ್ತುಳಿತ ಸಂಭವಿಸಿದೆ.

ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಕರೂರಿಗೆ ಧಾವಿಸಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೂರ್ ವಿ. ಸೆಂಥಿಲ್ ಬಾಲಾಜಿ ಅವರಿಗೆ ಆದೇಶಿಸಿದ್ದಾರೆ..
