• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶರಣರು, ಸಂತರ ಮಾರ್ಗದರ್ಶನದಲ್ಲಿ ಮಾನವೀಯ ಮೌಲ್ಯಗಳು ಪುನರುದ್ಧಾರವಾಗಲಿ

ಪ್ರತಿಧ್ವನಿ by ಪ್ರತಿಧ್ವನಿ
January 14, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಶ್ರೀ ಗುರು ಸಿದ್ಧರಾಮೇಶ್ವರರ 852ನೇ ಜಯಂತಿ ಕಾರ್ಯಕ್ರಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಆಶಯ

ADVERTISEMENT

ಶರಣರ ನಡೆ ನುಡಿ ಸದಾ ಅನುಕರಣೀಯ

ಬೆಂಗಳೂರು: ಸಮಾಜದಲ್ಲಿ ಮಾನವೀಯ ಮೌಲ್ಯಗಳು ನಶಿಸುತ್ತಿದ್ದು ಸಂತರು ಮತ್ತು ಶರಣರ ಮಾರ್ಗದರ್ಶನದಲ್ಲಿ ಅವೆಲ್ಲವೂ ಪುನರುದ್ಧಾರ ಆಗಬೇಕಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಶ್ರೀ ಗುರು ಸಿದ್ಧರಾಮೇಶ್ವರರ 852ನೇ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ. ಅವೆಲ್ಲವನ್ನೂ ಮಾಧ್ಯಮಗಳಲ್ಲಿ ಕಂಡರೆ ಕಳವಳವಾಗುತ್ತಿದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಸಂತರು, ಶರಣರೇ ದಾರಿ ತೋರಬೇಕು ಎಂದರು.

ವಿಶ್ವದ ಮುಂದುವರೆದ ರಾಷ್ಟ್ರಗಳಿಗೆ ಸರಿಸಮನಾಗಿ ನಮ್ಮ ದೇಶ ಮುಂದುವರಿಯುತ್ತಿದೆ. ದೇಶದಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಪಡೆದಿದ್ದೇವೆ. ಹಳ್ಳಿಗಳಿಗೆ ರಸ್ತೆ, ವಿದ್ಯುತ್ ಎಲ್ಲವೂ ಬಂದಿದೆ. ಇಂಥ ಯಾವ ಅನುಕೂಲಗಳು ಇಲ್ಲದೇ ಇದ್ದಾಗ ಅನ್ಯೋನ್ಯವಾಗಿ, ನೆಮ್ಮದಿಯಾಗಿ ಇದ್ದೆವು. ಎಲ್ಲವೂ ಬಂದ ಮೇಲೆ ಇದ್ದ ಎಲ್ಲವನ್ನೂ ಕಳೆದುಕೊಳ್ಳುತ್ತಿದ್ದೇವೆ. ಇದು ಬಹಳ ದುಃಖಕರ ಎಂದು ಸಚಿವರು ಹೇಳಿದರು.

ಉತ್ತರ ಕರ್ನಾಟಕದಲ್ಲಿ ನಾಲ್ಕು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗನೇ ತಂದೆಯನ್ನು ಕೊಳ್ಳುವಂತ ಪರಿಸ್ಥಿತಿ. ಆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರೆ ಅವರ ಪರಿಸ್ಥಿತಿ ಎಲ್ಲಿಗೆ ಬಂದಿರಬಹುದು? ಸಮಾಜದ ಒಳಿತಿಗಾಗಿ ಅಕ್ಕಮಹಾದೇವಿ, ಬಸವಣ್ಣನವರ ಹೇಳಿದ ಜೀವನದ ಆದರ್ಶಗಳನ್ನು ನಾವೆಲ್ಲಾ ಮುಂದುವರೆಸಿಕೊಂಡು ಹೋಗಬೇಕಿದೆ ಎಂದು ಸಚಿವರು ಪ್ರತಿಪಾದಿಸಿದರು.

12ನೇ ಶತಮಾನದಲ್ಲಿ ಶರಣರು ಕಾಯಕದ ಸಂದೇಶ ಕೊಟ್ಟಿದ್ದಾರೆ. ಸಮಾಜದ ಒಗ್ಗೂಡುವಿಕೆಯನ್ನು ಸರಿಪಡಿಸುವ ಬಗ್ಗೆ ಬಸವಣ್ಣನವರ ಆದರ್ಶಗಳ ಬಗ್ಗೆ ಶರಣರು ಹೇಳಿರುವ ಸಂದೇಶ ಇಂದಿಗೂ ಎಂದೆಂದಿಗೂ ಪ್ರಸ್ತುತ ಎಂದು ಸಚಿವರು ಒತ್ತಿ ಹೇಳಿದರು.

ನಾವ್ಯಾರು ನಡೆ ನುಡಿಗಳಲ್ಲಿ ಪರಿಶುದ್ಧವಾಗಿದ್ದೇವೆ ಎನ್ನುವ ಬಗ್ಗೆ ಆಲೋಚನೆ ಮಾಡಬೇಕು. ಶರಣರ ನುಡಿಯಲ್ಲಿ ನಾವು ಸ್ವಲ್ಪವಾದರೂ ಅಳವಡಿಸಿಕೊಂಡರೆ ಶರಣರಿಗೆ ಗೌರವ ಕೊಟ್ಟಂತಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕೆರಗೋಡು-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುಪರದೇಶಿಕೇಂದ್ರ ಸ್ವಾಮಿಗಳು, ಸಾಣೇಹಳ್ಳಿಯ ಶ್ರೀ ತರಳಬಾಳು ಶಾಖಾಮಠದ ಪರಮಪೂಜ್ಯ ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಕುಪ್ಪೂರು – ತಮ್ಮಡಿಹಳ್ಳಿಯ ವಿರಕ್ತಮಠದ ಅಧ್ಯಕ್ಷರಾದ ಪರಮಪೂಜ್ಯ ಡಾ. ಶ್ರೀ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವ ಈಶ್ವರ ಖಂಡ್ರೆ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಶಾಸಕ ಜ್ಯೋತಿ ಗಣೇಶ್, ಮಾಜಿ ಶಾಸಕ ಲಿಂಗೇಶ್ ಸೇರಿದಂತೆ ಅನೇಕ ಗಣ್ಯರು ಹಾಗೂ ನೊಳಂಬ ಲಿಂಗಾಯಿತ ಸಂಘದ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Tags: BJPBY VijayendraCongress PartyEshwar KhandreGovind KarjolaJyothi GaneshK GopalayyaLingeshಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಜಯ ಸಂಕೇಶ್ವರ್ ರ VRL ಸಂಸ್ಥೆಯಿಂದ ಮತ್ತೊಂದು ಮಹತ್ವದ ಹೆಜ್ಜೆ – ವಿಮಾನಯಾನ ಕ್ಷೇತ್ರಕ್ಕೆ ಕಾಲಿಟ್ಟ VRL 

Next Post

ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post

ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada