• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಮಾಜದ ಸಾಮರಸ್ಯ ಕೆಡಿಸುವ ಹಂತಕ್ಕೆ ಬಂದು ನಿಂತ ಎಂ ಬಿ ಪಾಟೀಲ್ ಹಾಗೂ ಗೋವಿಂದ್ ಕಾರಜೋಳ ವಾಕ್ಸಮರ !

ರಾಕೇಶ್ ಬಿಜಾಪುರ್ by ರಾಕೇಶ್ ಬಿಜಾಪುರ್
January 22, 2022
in ಕರ್ನಾಟಕ, ರಾಜಕೀಯ, ವಿಡಿಯೋ
0
Share on WhatsAppShare on FacebookShare on Telegram

ಮೇಕೆದಾಟು ಯೋಜನೆಯ ವಿಚಾರವಾಗಿ ರಾಜ್ಯದಲ್ಲಿ ಆಡಳಿತ ಹಾಗೂ ಪ್ರತಿಪಕ್ಷದ ನಡುವೆ ವಾಕ್ ಸಮರ, ಕಾನೂನು ಸಮರ, ಆರೋಪ ಪ್ರತ್ಯಾರೋಪ ಎಲ್ಲವೂ ನಡೆಯಿತು. ಬಳಿಕ ಅದಕ್ಕೆ ತಾತ್ಕಾಲಿಕ ವಿರಾಮವೂ ಬಿದ್ದಿತು. ಆದರೆ ಈ ಯೋಜನೆಯ ಬಗ್ಗೆ ಮಾಜಿ ಜಲ ಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹಾಗೂ ಹಾಲಿ ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ನಡುವೆ ನಡೆಯುತ್ತಿದ್ದ ವಾಕ್ ಇದೀಗ ಸಮುದಾಯಗಳ ನಡುವಿನ ವಾಕ್ ಸಮರಕ್ಕೆ ಬಂದು ನಿಂತಿದೆ. ಸಮಾನತೆ ಬೋಧಿಸಿದ ಬಸವಣ್ಣನ ನಾಡಿನಲ್ಲಿ ಇಬ್ಬರ ನಡುವೆ ಜಾತಿ ಜಾತಿಗಳ ಮಾತಿನ ಭರಾಟೆ ನಡೆದಿದ್ದು, ಇದು ಸಮಾಜದ ಸಾಮರಸ್ಯವನ್ನು ಕೆಡಿಸುವ ಹಂತಕ್ಕೆ ತಲುಪಿದೆ.

ADVERTISEMENT

ಕಳೆದ ವಾರ ಮಾಜಿ ಸಚಿವ ಎಂಬಿ ಪಾಟೀಲ್ ಮೇಕೆದಾಟು ಯೋಜನೆ ವಿಚಾರವಾಗಿ ಮಾತನಾಡುವ ಭರದಲ್ಲಿ ಸಚಿವ ಗೋವಿಂದ್ ಕಾರಜೋಳ ವಿರುದ್ಧ ಅಸಂಬದ್ಧ ಪದ ಬಳಕೆ ಮಾಡಿದ್ದಾರೆ ಎಂದು ಇಬ್ಬರು ನಾಯಕರು ಆರೋಪ ಪ್ರತ್ಯಾರೋಪ ಮಾಡುತ್ತಾ ಸುಮ್ಮನಾಗಿದ್ದರು. ಆದರೆ ದಿನ ಕಳೆದಂತೆ ಇಬ್ಬರು ನಾಯಕರ ಬೆಂಬಲಿಗರು ಆರೋಪ, ಪ್ರತ್ಯಾರೋಪ ಮುಂದುವರೆಸಿ ಇದೀಗ ದಲಿತ ಹಾಗೂ ಲಿಂಗಾಯತ ಸಮುದಾಯದ ನಡುವೆ ಕಂದಕ ಉಂಟು ಮಾಡುವ ಮಟ್ಟಕ್ಕೆ ತಂದಿಟ್ಟಿದ್ದಾರೆ. ಎಂಬಿ ಪಾಟೀಲ್ ಅವರು ಗೋವಿಂದ ಕಾರಜೋಳ ಅವರ ವಿರುದ್ಧ ಅಸಂಬದ್ಧ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಕಾರಜೋಳ್ ಬೆಂಬಲಿಗರು ಹಾಗೂ ಅವರ ಸಮುದಾಯದ ಮುಖಂಡರು ಪ್ರತಿಭಟನೆಯ ಹಾದಿ ಹಿಡಿದರು. ವಿಜಯಪುರದಲ್ಲಿರುವ ಎಂಬಿ ಪಾಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಎಂಬಿ ಪಾಟೀಲ್ ಬೆಂಬಲಿಗರು ಕಾರಜೋಳ ಹಾಗು ಅವರ ಬೆಂಬಲಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತ್ಯುತ್ತರ ನೀಡಿದ್ದರು. ಇಷ್ಟಕ್ಕೆ ಎಲ್ಲ ಮುಗಿದು ಹೋಯಿತು ಎನ್ನುವಾಗಲೇ ಎಂಬಿ ಪಾಟೀಲ್ ವಿರುದ್ಧ ವಿಜಯಪುರ ಜಿಲ್ಲೆಯ ಬಬಲೇಶ್ವರ, ತಿಕೋಟಾ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ದೂರು ನೀಡಿದ್ದಾರೆ. ಗೋವಿಂದ ಕಾರಜೋಳ ಬೆಂಬಲಿಗರು ದೂರು ನೀಡಿದ್ದೇ ತಡ, ಎಂಬಿ ಪಾಟೀಲ್ ಪರವಾಗಿ ಲಿಂಗಾಯತ ಸಮುದಾಯ ಸೇರಿದಂತೆ ವಿವಿಧ ಸಮುದಾಯದ ನಾಯಕರು ಬೆನ್ನಿಗೆ ನಿಂತಿದ್ದಾರೆ.

ವಿಜಯಪುರದ ಕಿತ್ತೂರು ರಾಣಿ ಚೆನ್ನಮ್ಮ ಸಭಾ ಭವನದಲ್ಲಿ ಬೃಹತ್ ಸಭೆ ಮಾಡಿ, ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪ ಸಹಜ. ಆದರೆ ಅದಕ್ಕೆ ಜಾತಿ ಬಣ್ಣ ಹಚ್ವಬಾರದಿತ್ತು ಎಂದು ಎಂಬಿ ಪಾಟೀಲ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇಡೀ ಪ್ರಕರಣ ಇದೀಗ ಎರಡು ಜಾತಿಗಳ ನಡುವೆ ಕಂದಕ ನಿರ್ಮಾಣ ಮಾಡುವ ಮಟ್ಟಕ್ಕೆ ಬೆಳೆದಿದೆ.

ಯಾರಿಗೆ ನಷ್ಟ ಯಾರಿಗೆ ಲಾಭ

ಮಾಜಿ ಜಲ ಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಹಾಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ನಡುವಿನ ಗಲಾಟೆ ವಿಜಯಪುರ ಭಾಗಲಕೋಟೆ ಜಿಲ್ಲೆಯ ರಾಜಕಾರಣ ಮೇಲೆ ಪರಿಣಾಮ ಬೀರಲಿದೆ. ಇಬ್ಬರು ನಾಯಕರು ಜಿಲ್ಲೆಯಲ್ಲಿ ತಮ್ಮದೆಯಾದ ಪ್ರಭಾವ ಹೊಂದಿದ್ದಾರೆ. ಇಬ್ಬರೂ ಕೂಡಾ ಪ್ರಬಲ ಸಮುದಾಯ ನಾಯಕರಾಗಿದ್ದಾರೆ. ಹೀಗಾಗಿ ಮೇಕೆದಾಟು ಯೋಜನೆಯ ವಿಚಾರವಾಗಿ ಆರಂಭವಾದ ಗಲಾಟೆ ಯಾರಿಗೆ ಲಾಭ ತರಲಿದೆ, ಯಾರಿಗೆ ಹಾನಿ ಮಾಡಲಿದೆ ಎಂಬ ಲೆಕ್ಕಾಚಾರ ಜೋರಾಗಿದೆ. ಆದರೆ ವಾಸ್ತವವಾಗಿ ಇದು ಇಬ್ಬರಿಗೂ ಹಾನಿ ಮಾಡಲಿದೆ ಅನ್ನೋದು ಅಷ್ಟೇ ಸತ್ಯ.

ಯಾವುದೇ ರಾಜಕಾರಣಿ ಜನರಿಂದ ಮತಗಳನ್ನ ಪಡೆಯುವ ಕಾರಣ ಯಾವುದೇ ಸಮುದಾಯದ ವಿರೋಧ ಕಟ್ಟಿಕೊಳ್ಳಲು ಮುಂದಾಗಲ್ಲ. ಎಲ್ಲ ಸಮಾಜದ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡು ರಾಜಕಾರಣ ಮಾಡುತ್ತಾರೆ. ಎಂಬಿ ಪಾಟೀಲ್ ಹಾಗೂ ಗೋವಿಂದ್ ಕಾರಜೋಳ ಕೂಡಾ ಇದೇ ರೀತಿ ಎಲ್ಲ ಸಮುದಾಯದ ಜೊತೆ ಉತ್ತಮ ಒಡನಾಟ ಹೊಂದಿದ್ದಾರೆ. ಆದರೆ ಮೇಕೆದಾಟು ವಿಚಾರವಾಗಿ ನಡೆದ ಆರೋಪ ಪ್ರತ್ಯಾರೋಪ ಇಬ್ಬರು ನಾಯಕರು ಒಂದೊಂದು ಸಮಾಜದ ವಿರೋಧ ಕಟ್ಟಿಕೊಳ್ಳುವಂತೆ ಮಾಡುತ್ತಿದೆ. ಎಂಬಿ ಪಾಟೀಲ್ ವಿರುದ್ಧ ಗೋವಿಂದ್ ಕಾರಜೋಳ ಅವರ ಸಮುದಾಯ (ದಲಿತ ಎಡಗೈ) ಆಕ್ರೋಶ ವ್ಯಕ್ತಪಡಿಸಿದರೆ, ಎಂ ಬಿ ಪಾಟೀಲ್ ಅವರ ಬೆಂಬಲಿಕ್ಕೆ ನಿಂತಿರುವ ಲಿಂಗಾಯತ ಸಮಾಜ ಗೋವಿಂದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಹೀಗಾಗಿ ಇದು ಇಬ್ಬರು ನಾಯಕರಿಗೆ ನಷ್ಟ ಉಂಟು ಮಾಡಲಿದ್ದು, ಚುನಾವಣೆಗೆ ಒಂದು ವರ್ಷ ಬಾಕಿಯಿರುವಾಗ ಇಂತಹ ಘಟನೆಗಳು ರಾಜಕಾರಣಿಗಳಿಗೆ ಎಚ್ಚರಿಕೆಯ ಗಂಟೆಯಾಗಿವೆ.

Tags: BJPCongress PartyMB Patil and Govind Karajola have come to a standstill in societyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆಟೋವನ್ನೇ ಆ್ಯಂಬುಲೆನ್ಸ್ ಆಗಿ ಮಾಡಿಕೊಂಡ ಅಬ್ದುಲ್ ಸೌದಾಗರ್!

Next Post

ಕೋವಿಡ್‌ ರೋಗಲಕ್ಷಣವಿರುವವರಿಗೆ ಮಾತ್ರ ತಪಾಸಣೆ: ಸಚಿವ ಡಾ.ಕೆ.ಸುಧಾಕರ್‌

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಕೋವಿಡ್‌ ರೋಗಲಕ್ಷಣವಿರುವವರಿಗೆ ಮಾತ್ರ ತಪಾಸಣೆ: ಸಚಿವ ಡಾ.ಕೆ.ಸುಧಾಕರ್‌

ಕೋವಿಡ್‌ ರೋಗಲಕ್ಷಣವಿರುವವರಿಗೆ ಮಾತ್ರ ತಪಾಸಣೆ: ಸಚಿವ ಡಾ.ಕೆ.ಸುಧಾಕರ್‌

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada