• Home
  • About Us
  • ಕರ್ನಾಟಕ
Thursday, July 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 24, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್
0
CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಕೆಪಿಸಿಎಲ್ ಸಂಸ್ಥಾಪನಾ ದಿನಾಚರಣೆ ಉದ್ಘಾಟನೆ
ಎಲ್ಲ ಮೂಲಗಳಿಂದ ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ ಮುಂಚೂಣಿ

ADVERTISEMENT

ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಜತೆಗೆ ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ದ 56ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯವು ಸ್ವಾವಲಂಬನೆ ಸಾಧಿಸಿದೆ. ಮುಂದಿನ ದಿನಗಳಲ್ಲಿ ಯಾವ ಸಂದರ್ಭದಲ್ಲೂ ವಿದ್ಯುತ್ ಕೊರತೆ ಆಗಬಾರದು. ಆ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು,” ಎಂದರು.

“ಜಲ, ಉಷ್ಣ, ಸೌರ, ಪವನ, ಅನಿಲ ಮಾತ್ರವಲ್ಲ ತ್ಯಾಜ್ಯದಿಂದಲೂ ವಿದ್ಯುತ್ ಉತ್ಪಾದಿಸುವ ಮೂಲಕ ಕೆಪಿಸಿಎಲ್ ಅತ್ಯುತ್ತಮ ಸಾಧನೆ ಮಾಡಿದೆ. ಆ ಮೂಲಕ ಅತಿ ಹೆಚ್ಚು ಮೂಲಗಳಿಂದ ವಿದ್ಯುತ್ ಉತ್ಪಾದಿಸುವ ರಾಜ್ಯವಾಗಿ ಕರ್ನಾಟಕವನ್ನು ದೇಶದಲ್ಲೇ ಮುಂಚೂಣಿಯಲ್ಲಿ ನಿಲ್ಲಿಸಿದೆ,” ಎಂದು ಹೇಳಿದರು.

“ನಾನು ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವಾಗ ನಮ್ಮ ಊರಿನಲ್ಲಿ ವಿದ್ಯುತ್ ಇರಲಿಲ್ಲ. 7-8ನೇ ತರಗತಿಯಲ್ಲಿರುವಾಗ ನಮ್ಮ ಊರಿಗೆ ವಿದ್ಯುತ್ ಬಂತು. ಆದರೆ, ಇಂದು ವಿದ್ಯುತ್ ಸಂಪರ್ಕ ಇಲ್ಲದ ಗ್ರಾಮವೇ ಇಲ್ಲ. ಈ ರೀತಿ ರಾಜ್ಯದ ಮೂಲೆ ಮೂಲೆಗಳಿಗಳಿಗೆ, ಕೈಗಾರಿಕೆಗಳಿಗೆ ಸೇರಿದಂತೆ ಎಲ್ಲಾ ಕಡೆ ವಿದ್ಯುತ್ ಸರಬರಾಜಾಗುವಲ್ಲಿ ಕೆಪಿಸಿಎಲ್ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ.ಹೀಗಾಗಿ ರಾಜ್ಯದ ಪ್ರಗತಿಯಲ್ಲೂ ಕೆಪಿಸಿಎಲ್ ನ ಕೊಡುಗೆ ಮಹತ್ವದ್ದು,” ಎಂದು ಶ್ಲಾಘಿಸಿದರು.

ಕೆಪಿಸಿಎಲ್ (KPCL)ನಲ್ಲಿ ಹುದ್ದೆಗಳ ಭರ್ತಿ
“ಕೆಪಿಸಿಎಲ್ ನಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇದರಿಂದ ಕೆಲಸಕ್ಕೆ ಸಮಸ್ಯೆಯಾಗುತ್ತಿದೆ ಎಂಬ ಮನವಿಗಳು ಬಂದಿವೆ. ಖಾಲಿ ಹುದ್ದೆಗಳ ಕುರಿತು ಇಂಧನ ಇಲಾಖೆ ಸಚಿವರು ಮತ್ತು ಕೆಪಿಸಿಎಲ್ ವ್ಯವಸ್ಥಾಪಕನಿರ್ದೇಶಕರೊಂದಿಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲೇ ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು,” ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಆದ್ಯತೆ
ಇಂಧನ ಸಚಿವ ಕೆ.ಜೆ.ಜಾರ್ಜ್ (Minister KJ George) ಮಾತನಾಡಿ, “ರಾಜ್ಯದಲ್ಲಿ ಸಾಕಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿದ್ದರೂ ಸಂಗ್ರಹಣಾ ವ್ಯವಸ್ಥೆ ಇಲ್ಲ. ಹೀಗಾಗಿ ಶರಾವತಿಯಲ್ಲಿ 2000 ಮೆಗಾವ್ಯಾಟ್ ಹಾಗೂ ವಾರಾಹಿಯಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಆ ಮೂಲಕ ವಿದ್ಯುತ್ ಸಂಗ್ರಹಿಸಿ ಹೆಚ್ಚು ಬೇಡಿಕೆ ಸಂದರ್ಭದಲ್ಲಿ ಪೂರೈಸಲಾಗುವುದು. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ರಾಜ್ಯ ಮತ್ತು ಕೇಂದ್ರ ವನ್ಯಜೀವಿ ಮಂಡಳಿಗಳಿಂದ ಈಗಾಗಲೇ ಅನುಮತಿ ಸಿಕ್ಕಿದೆ,” ಎಂದು ತಿಳಿಸಿದರು.

ಸಂಸ್ಥಾಪನಾ ದಿನದ ಅಂಗವಾಗಿ ಕೆಪಿಸಿಎಲ್ ನಲ್ಲಿ 25 ವರ್ಷ ಸುದೀರ್ಘಸೇವೆ ಸಲ್ಲಿಸಿದವರನ್ನು ಅಭಿನಂದಿಸಲಾಯಿತು. ನಿಗಮದ ನಿವೃತ್ತ ಸಿಬ್ಬಂದಿಯನ್ನು ಗೌರವಿಸಲಾಯಿತು. ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ನಿಗಮದ ಸಿಬ್ಬಂದಿಯ ಮಕ್ಕಳಿಗೆ ಚಿನ್ನದ ನಾಣ್ಯ ನೀಡಿ ಪುರಸ್ಕರಿಸಲಾಯಿತು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿರುವ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್(Naseer Ahmed), ಶಾಸರಾದ ಬಸವನಗೌಡ ದದ್ದಲ್(Basavanagowda Daddal), ಪ್ರಸಾದ್ ಅಬ್ಬಯ್ಯ(Prasad Abbaiah), ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಹಾಗೂ ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತ(Gowrav Gupta), ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಮನೋಹರ್(Manohara), ಕೆಪಿಸಿಎಲ್ ಹಣಕಾಸು ನಿರ್ದೇಶಕ ಆರ್.ನಾಗರಾಜ(R Nagaraj), ತಾಂತ್ರಿಕ ನಿರ್ದೇಶಕ ಎಸ್.ಕೃಷ್ಣಮೂರ್ತಿ(Krishnamurthy), ಮುಖ್ಯ ಜಾಗೃತ ಅಧಿಕಾರಿ ಟಿ.ಪಿ.ಶಿವಕುಮಾರ್(TP Shivakumar) ಮತ್ತಿತರರು ಇದ್ದರು.


“ವಿದ್ಯುತ್ ಉತ್ಪಾದನೆಯಲ್ಲಿ ಕೆಪಿಸಿಎಲ್ 2024-25ನೇ ಸಾಲಿನಲ್ಲಿ 37,009 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. ಪ್ರಸ್ತುತ ರಾಜ್ಯದ ಬೇಡಿಕೆಯ ಶೇ. 40ರಷ್ಟು ವಿದ್ಯುತ್ ಉತ್ಪಾದಿಸುವ ನಿಗಮದ ಉತ್ಪಾದನೆಯನ್ನು ಶೇ. 50ಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ”.

  • ಗೌರವ್ ಗುಪ್ತ(Gowrav Gupta), ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕರು
Tags: CM Siddaramaiahformer cm siddaramaiahgeorge gifted siddaramaiahkj george meets siddaramaiahkj george siddaramaiahkjgeorgesiddaramaiahsiddaramaiah and kj georgesiddaramaiah and kj gerogesiddaramaiah angry on kj georgesiddaramaiah brothersiddaramaiah budgetSiddaramaiah CMsiddaramaiah cm newssiddaramaiah newssiddaramaiah speechsiddaramaiah takes kj george to tasksiddaramaiah with zameer ahmed khan k j georgewill george leave it to siddaramaiah..?
Previous Post

Mallikarjun Kharge: ಮೋದಿ ಸರ್ಕಾರದಲ್ಲಿ ಬಡವರ ಸುಲಿಗೆಯೇ ಆಡಳಿತ ಮಂತ್ರ..!!

Next Post

CM Siddaramaiah: KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ: ಸಿ.ಎಂ

Related Posts

Top Story

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 23, 2025
0

ಸಮಾಜದ ವಿದ್ಯಾರ್ಥಿಗಳು ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಬೇಕುಪ್ರತಿಭಾ ಪುರಸ್ಕಾರ, ಸಮಾಜದ ಹಿರಿಯರಿಗೆ ಗೌರವ ಹಾಗೂ ಜನ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ನಮ್ಮ ವೀರಶೈವ ಲಿಂಗಾಯತ...

Read moreDetails

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

July 23, 2025

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

July 23, 2025

CM Siddaramaiah: KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ: ಸಿ.ಎಂ

July 23, 2025

Mallikarjun Kharge: ಮೋದಿ ಸರ್ಕಾರದಲ್ಲಿ ಬಡವರ ಸುಲಿಗೆಯೇ ಆಡಳಿತ ಮಂತ್ರ..!!

July 23, 2025
Next Post

CM Siddaramaiah: KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ: ಸಿ.ಎಂ

Recent News

Top Story

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 23, 2025
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

by ಪ್ರತಿಧ್ವನಿ
July 23, 2025
Top Story

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

by ಪ್ರತಿಧ್ವನಿ
July 23, 2025
Top Story

CM Siddaramaiah: KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ: ಸಿ.ಎಂ

by ಪ್ರತಿಧ್ವನಿ
July 23, 2025
CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ
Top Story

CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
July 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 23, 2025

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

July 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada