ಗಣೇಶೋತ್ಸವದ ಅಂಗವಾಗಿ ಆಗಸ್ಟ್ 31ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೋಮವಾರ ಈ ಆದೇಶ ಹೊರಡಿಸಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿದೆ.
ಇತ್ತೀಚೆಗೆ ನಡೆದ ಕೃಷ್ಣ ಜನ್ಮಾಷ್ಟಮಿ ದಿನವೂ ಮಾಂಸ ಮಾರಾಟ ಮತ್ತು ಪ್ರಾಣಿವಧೆ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿತ್ತು. ಇದೀಗ ಗಣೇಶ ಚತುರ್ಥಿ ದಿನವೂ ಈ ರೀತಿ ಆದೇಶ ಹೊರಡಿಸಿದೆ.