• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪತ್ರಿಕಾ ಸ್ವಾತಾಂತ್ರದ ಮೇಲೆ ಮೋದಿ ಆಡಳಿತದ ಭಯೋತ್ಪಾದನೆ : ಡಾ. ಜೆ ಎಸ್ ಪಾಟೀಲ ಅವರ ಬರಹ

ಡಾ | ಜೆ.ಎಸ್ ಪಾಟೀಲ by ಡಾ | ಜೆ.ಎಸ್ ಪಾಟೀಲ
October 28, 2023
in ದೇಶ
0
ಪತ್ರಿಕಾ ಸ್ವಾತಾಂತ್ರದ ಮೇಲೆ ಮೋದಿ ಆಡಳಿತದ ಭಯೋತ್ಪಾದನೆ : ಡಾ. ಜೆ ಎಸ್ ಪಾಟೀಲ ಅವರ ಬರಹ
Share on WhatsAppShare on FacebookShare on Telegram

ADVERTISEMENT

ಮೋದಿಯವರ ಹತ್ತು ವರ್ಷಗಳ ಸುದೀರ್ಘ ಹಾಗು ಪ್ರಶ್ನಾತೀತ ಆಡಳಿತವು ಯಶಸ್ವಿಯಾಗಿದ್ದೆ ಭಾರತೀಯ ಮಾಧ್ಯಮಗಳನ್ನು ಖರೀಧಿಸುವ ಮತ್ತು ನಿಯಂತ್ರಿಸುವ ಮೂಲಕ ಎಂದರೆ ತಪ್ಪಾಗಲಿಕ್ಕಿಲ್ಲ. ಇಡೀ ಮಾಧ್ಯಮ ವ್ಯವಸ್ಥೆಯು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಗ್ಯೂ ತಮ್ಮ ಆಡಳಿತದುದ್ದಕ್ಕೂ ಮೋದಿ ಮಹಾಷಯರು ಒಂದೇ ಒಂದು ಬಹಿರಂಗ ಪತ್ರಿಕಾಗೋಷ್ಟಿಯನ್ನು ಮಾಡುವ ಎದೆಗಾರಿಕೆ ಪ್ರದರ್ಶಿಸಲಿಲ್ಲ. ಇದು ಅವರಿಗೆ ಪ್ರಾಮಾಣಿಕ ಮಾಧ್ಯಮದ ಬಗೆಗಿರುವ ಭಯವನ್ನು ಸಾಂಕೇತಿಸುತ್ತದೆ. ಕಳೆದ ಹತ್ತು ವರ್ಷಗಳಿಂದ ಪ್ರಾಮಾಣಿಕ ಮಾಧ್ಯಮಗಳು ಹಾಗು ಪತ್ರಕರ್ತರ ಮೇಲಿನ ದಾಳಿಗಳು ಸರಕಾರಿ ಯಂತ್ರ ಪ್ರಾಮಾಣಿಕ ಮತ್ತು ಪಾರದರ್ಶಕವಾಗಿಲ್ಲ ಎನ್ನುವುದನ್ನು ಒತ್ತಿ ಹೇಳುತ್ತದೆ. ಇದೇ ಅಕ್ಟೋಬರ್ ತಿಂಗಳು ಮಾಧ್ಯಮ ಸಂಸ್ಥೆಯೊಂದರ ಮೇಲಿನ ಮೋದಿ ಸರಕಾರದ ದಾಳಿಯಲ್ಲಿ ಪತ್ರಕರ್ತರಿಗೆ ಸೇರಿರುವ ಎಲೆಕ್ಟ್ರಾನಿಕ್ ಸಾಧನಗಳನ್ನು ಸಕಾರಣ ನೀಡದೆ ಕಸಿದುಕೊಂಡಿರುವುದು ಮುಕ್ತ ಮಾಧ್ಯಮಕ್ಕೆ ಕೆಟ್ಟ ಕಾಲ ಹಾಗು ಒಟ್ಟಾರೆ ಜನತಂತ್ರಕ್ಕೆ ಅಪಾಯದ ಕಾಲ ಎನ್ನಬೇಕಿದೆ.

ಇತ್ತೀಚಿನ ನ್ಯೂಸ್‌ಕ್ಲಿಕ್ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಆ ಮಾಧ್ಯಮ ಪೋರ್ಟಲ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಭಯೋತ್ಪಾದನೆಯ ಆರೋಪದಲ್ಲಿ ಬಂಧಿಸಿರುವುದು ಮಾಧ್ಯಮ ಸ್ವತಂತ್ರ ಮೇಲೆ ಮೋದಿ ಸರ್ಕಾರದ ಭವಪೂರಿತ ದಾಳಿಯು ಅವರ ಸರ್ವಾಧಿಕಾರಿ ಮನೋಭಾವವನ್ನು ಎತ್ತಿಹಿಡಿಯುತ್ತದೆ. ಇದೇ ಅಕ್ಟೋಬರ್ ೩ ರ ಮುಂಜಾನೆ ಪತ್ರಕರ್ತರ ಮನೆಗಳ ಮೇಲಿನ ನಾಟಕೀಯ ದಾಳಿಗಳು ಮತ್ತು ಅವರ ಬಂಧನಗಳು ಮೋದಿ ಆಡಳಿತದ ಸತ್ಯವಿರೋಧಿ ನಿಲುವನ್ನು ಬಹಿರಂಗಗೊಳಿಸಿದೆ. ದಾಳಿಯಲ್ಲಿ ಪತ್ರಕರ್ತರ ಹತ್ತಾರು ಎಲೆಕ್ಟ್ರಾನಿಕ್ ಸಾಧನಗಳುˌ ಲ್ಯಾಪ್‌ಟಾಪ್‌ಗಳು ಮತ್ತು ಟೆಲಿಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ದಾಳಿಯು ಮೋದಿ ಆಡಳಿತಕ್ಕೆ ಎಷ್ಟೊಂದು ಭಯ ಹುಟ್ಟಿಸಿತ್ತೆಂದರೆ ದಾಳಿಗೆ ಗುರಿಯಾದವರಲ್ಲಿ ಈ ಸುದ್ದಿ ಪೋರ್ಟಲ್ಗೆ ಸಾಂದರ್ಭಿಕ ಕೊಡುಗೆದಾರುˌ ಕ್ಷಣಿಕ ಸಂಪರ್ಕವನ್ನು ಹೊಂದಿರುವ ಕೆಲವು ಬರಹಗಾರರು ಸೇರಿದ್ದಾರೆ.

ನ್ಯೂಸ್‌ಕ್ಲಿಕ್‌ನೊಂದಿಗೆ ಸಂಪರ್ಕವಿರುವ ಲೇಖಕರು, ಪತ್ರಕರ್ತರು, ವಿಡಂಬನಕಾರರು, ಇತಿಹಾಸಕಾರರು ಮತ್ತು ವಿಜ್ಞಾನಿಗಳೆಲ್ಲರಿಗೆ ಭವಯನ್ನು ಹುಟ್ಟಿಸಲು ಈ ದಾಳಿಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ದಾಳಿಯ ಸಮಯದಲ್ಲಿ ವಶಪಡಿಸಿಕೊಳ್ಳಲಾದ ಸಾಧನˌ ಸಲಕರಣೆಗಳಿಗೆ ಸರಿಯಾದ ಸೀಜರ್ ಮೆಮೊಗಳು ಅಥವಾ ಹ್ಯಾಶ್ ಮೌಲ್ಯಗಳನ್ನು ಕೂಡ ನೀಡಲಾಗಿಲ್ಲ ಎನ್ನುವು ಸಂಗತಿಯು ಮೋದಿ ಸರಕಾರದ ಅಧಿಕಾರದ ಕ್ರೂರ ಪ್ರಯೋಗ ಎನ್ನಬೇಕಿದೆ. ಈ ದಾಳಿಯು ಮೋದಿ ಸರಕಾರದ ಸರ್ವಾಧಿಕಾರ ಮತ್ತು ಮಾಧ್ಯಮಗಳ ಮೇಲಿನ ಬಿಗಿ ನಿಯಂತ್ರಣದ ಪ್ರದರ್ಶನವಾಗಿತ್ತು. ಅಂತಿಮವಾಗಿ ಈ ಸುದ್ದಿ ಪೋರ್ಟಲ್‌ನ ಕಚೇರಿಗೆ ಬೀಗ ಹಾಕಲಾಯಿತು. ಈ ಪ್ರಕರಣದಲ್ಲಿ ದೆಹಲಿ ಪೊಲೀಸರ ವಿಶೇಷ ಘಟಕವು ಒಟ್ಟು ೪೬ ಜನರನ್ನು ವಿಚಾರಣೆಗೊಳಪಡಿಸಿದೆ. ಮೋದಿ ಆಡಳಿತವು ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದ ಅವಧಿಯಾಗಿದೆ.

ಜಾಗತಿಕ ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕವು ಭಾರತವನ್ನು ೧೬೧ ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು ೨೦೧೫ ರಿಂದ ಇದರ ಪತನವು ಅಗಾಧ ಮತ್ತು ತೀಕ್ಷ್ಣವಾಗಿದೆ. ಮೋದಿ ಆಡಳಿತದಲ್ಲಿ ತಮ್ಮ ಸೈದ್ಧಾಂತಿಕ ವಿರೋಧಿಗಳ ಇಂಟರ್ನೆಟ್ ಸ್ಥಗಿತಗೊಳಿಸುವಲ್ಲಿ ದೇಶ ಜಾಗತಿಕ ಮಟ್ಟದಲ್ಲಿ ಕುಪ್ರಸಿದ್ದವಾಗಿದೆ. ಆದರೂ ಮೋದಿಯವರು ಭಾರತ ‘ಪ್ರಜಾಪ್ರಭುತ್ವದ ತಾಯಿ’ ಎನ್ನುತ್ತಾರೆ. ಡಿಜಿಟಲ್ ಮತ್ತು ಸ್ವತಂತ್ರ ಮಾಧ್ಯಮಗಳನ್ನು ಬಿಗಿಯಾಗಿ ನಿಯಂತ್ರಿಸುವ ಮೋದಿಯವರ ಪ್ರಯತ್ನ ನಿರಂತರವಾಗಿದೆ. ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿ ತಮ್ಮ ಆಡಳಿತದಲ್ಲಿನ ಅಪಾರದರ್ಶಕತೆಯನ್ನು ಪ್ರದರ್ಶಿಸುತ್ತಿರುವುದು ನಮ್ಮ ಪ್ರಜಾಪ್ರಭುತ್ವದ ಮೇಲೆ ಮಾರಣಾಂತಿಕ ಪರಿಣಾಮವನ್ನು ಬೀರಿದೆ. ಮೋದಿ ಆಡಳಿತದಲ್ಲಿ, ಸರ್ವೋಚ್ಛ ನ್ಯಾಯಾಲಯದ ಆತಂಕದ ಹೊರತಾಗಿಯೂ ಟಿವಿ ನ್ಯೂಸ್ ಚಾನೆಲ್‌ಗಳ
ದ್ವೇಷ ಭಾಷಣಗಳು ಸಾರ್ವಜನಿಕ ಕ್ಷೇತ್ರವನ್ನು ವಿಷಪೂರಿತಗೊಳಿಸಿ ಸಮಾಜದಲ್ಲಿ ಹಿಂಸೆಯನ್ನು ಸಕ್ರಿಯಗೊಳಿಸಿವೆ.

~ಡಾ. ಜೆ ಎಸ್ ಪಾಟೀಲ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಭಾರತ, ಇಂಡಿಯಾ ನಡುವೆ ಯಾವುದೇ ವ್ಯತ್ಯಾಸವಿಲ್ಲ : NCERT ವಿವಾದಕ್ಕೆ ತೆರೆ ಎಳೆದ ಕೇಂದ್ರ ಶಿಕ್ಷಣ ಸಚಿವ

Next Post

ಭಕ್ತರಿಗೆ ಎಂದಿನಂತೆ ದರ್ಶನ ನೀಡಲಿರುವ ಮಲೆ ಮಾದಪ್ಪ

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025
Next Post
ಭಕ್ತರಿಗೆ ಎಂದಿನಂತೆ ದರ್ಶನ ನೀಡಲಿರುವ ಮಲೆ ಮಾದಪ್ಪ

ಭಕ್ತರಿಗೆ ಎಂದಿನಂತೆ ದರ್ಶನ ನೀಡಲಿರುವ ಮಲೆ ಮಾದಪ್ಪ

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada