ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅಥವಾ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದರೇ ಅದಕ್ಕೆ ವಿಶೇಷತೆ ಇರುತ್ತೆ ಅನಬಹುದು. ಆದರೆ ನಾನು ಯಡಿಯೂರಪ್ಪ ಅವರನ್ನು ಭೇಟಿಯಾದರೇ ಅದರಲ್ಲೇನಿದೆ ಅಂಥ ವಿಶೇಷ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿಸಿದರು.
ಈ ಕುರಿತು ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯಾಕೆ ಇಷ್ಟೊಂದು ಮಹತ್ವ ಕೊಡುತ್ತಿರಿ? ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಥವಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರನ್ನ ಅಥವಾ ಬೇರೆ ಪಕ್ಷದ ನಾಯಕರನ್ನು ಭೇಟಿಯಾದರೇ ವಿಶೇಷ ಅದರಲ್ಲಿ ವಿಶೇಷತೆ ಇರುತ್ತದೆ. ಆದರೆ ನಾನು ನಮ್ಮ ಪಕ್ಷದ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ್ರೆ ಅದಕ್ಕೆ ಯಾಕೆ ವಿಶೇಷ ಅರ್ಥ ಕಲ್ಪಿಸುತ್ತೀರಿ? ಎಂದು ಪ್ರಶ್ನಿಸಿದರು.
ನಮ್ಮಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಹೀಗಾಗಿ ಈ ಬಗ್ಗೆ ಚರ್ಚೆಯೇ ಅಪ್ರಸ್ತುತವಾಗಿದೆ ಎಂದರು.