ಮೇಲ್ಜಾತಿಯ ಯುವತಿಗೆ ಮೊಬೈಲ್ ಸಂದೇಶ ಕಳುಹಿಸಿದ ಒಂದೇ ಕಾರಣಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಎರಡು ದಿನ ಚಿತ್ರ ಹಿಂಸೆ ನೀಡಿದ್ದಲ್ಲದೆ, ಅರೆ ಬೆತ್ತಲೆ ಮಾಡಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ತಮ್ಮ ಸಮುದಾಯದ 20 ವರ್ಷದ ಯುವಕನ ಮೇಲೆ ನಡೆದ ಅಮಾನುಷ ಹಲ್ಲೆ ಖಂಡಿಸಿ ದಲಿತ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಚನ್ನಗಿರಿ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ಆರೋಪಿಗಳು ಸಂತ್ರಸ್ತ ಗಣೇಶ್ ನನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅಮಾನುಷವಾಗಿ ಹಲ್ಲೆ ನಡೆಸಿ ಹಲ್ಲೆ ನಡೆಸಿದ್ದರು. ಈ ಕ್ರೌರ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಹಲ್ಲೆಗೊಳಗಾದ ಯುವಕನ ಸಂಬಂಧಿಕರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾಗಿ ಗಾಯಗೊಂಡ ದಲಿತ ಯುವಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ಘಟನೆ ದಾವಣಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ಕಳೆದ ವಾರ ಹಿಂದೆಯಷ್ಟೇ ನಡೆದಿತ್ತು.