• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿದ್ಯಾವಂತ ನಿರುದ್ಯೋಗಿ ಪದವೀಧರರ ಬದುಕಿಗೆ ಆಸರೆ -ನರೇಗಾ

Any Mind by Any Mind
May 6, 2021
in ಕರ್ನಾಟಕ
0
ವಿದ್ಯಾವಂತ ನಿರುದ್ಯೋಗಿ ಪದವೀಧರರ ಬದುಕಿಗೆ ಆಸರೆ -ನರೇಗಾ
Share on WhatsAppShare on FacebookShare on Telegram

ADVERTISEMENT

ಕರೊನಾ ಮಹಾಮಾರಿ ಮಹಾನಗರಗಳಲ್ಲಿ ಹೆಚ್ಚುತ್ತಿರುವುದರಿಂದ ಮತ್ತು ಸೋಂಕು ತಡೆಗಾಗಿ ಸರ್ಕಾರ ಕಪ್ರ್ಯೂ ಜಾರಿಗೊಳಿಸಿದ್ದರಿಂದ ತಮ್ಮ ಹಳ್ಳಿಗಳತ್ತ ವಲಸೆ ಬರುತ್ತಿರುವ ಯುವಕರಿಗೆ ನರೇಗಾ ಕೆಲಸ ಬದುಕಿಗೆ ಆಸರೆಯಾಗಿದೆ.

ಪ್ರತಿ ವರ್ಷ ಬೇಸಿಗೆ ಹಂಗಾಮಿನಲ್ಲಿ ಗ್ರಾಮೀಣ ಪ್ರದೇಶಗಳ ಜನರು ಉದ್ಯೋಗ ಅರಸಿ ಗುಳೆ ಹೋಗಬಾರದು ಮತ್ತು ಅವರಿಗೆ ಸ್ಥಳೀಯವಾಗಿಯೇ ಉದ್ಯೋಗ ಸೃಜಿಸಿ ಸಂಪನ್ಮೂಲ ಹೆಚ್ಚಿಸುವ ಉದ್ದೇಶ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯದ್ದಾಗಿದೆ. ಆದರೆ ಕಳೆದ 2 ವರ್ಷದಿಂದ ನರೇಗಾ ಯೋಜನೆ ಕರೋನಾ ಸಂಕಷ್ಟದಲ್ಲಿ ಸಿಲುಕಿರುವ ಗ್ರಾಮೀಣ ಜನರಿಗೆ ಆಶಾಕಿರಣವಾಗಿದೆ.

ಎಕಾಏಕಿ ಪಟ್ಟಣ ಪ್ರದೇಶಗಳಿಂದ ಹಳ್ಳಿಗಳತ್ತ ಬಂದಿರುವ ಖಾಸಗಿ ಕಂಪನಿ ಉದ್ಯೋಗಿಗಳು, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಪಟ್ಟಣ ಸೇರಿರುವ ನಿರುದ್ಯೋಗಿ ವಿದ್ಯಾವಂತ ಯುವಕರು, ಪದವೀಧರ ಯುವಕರು ಉದ್ಯೋಗ ಇಲ್ಲದೇ ಹಳ್ಳಿಯಲ್ಲಿ ಜೀವನ ನಡೆಸುವುದು ಹೇಗೆ ಎಂಬ ಪ್ರಶ್ನೆಗೆ ನರೇಗಾ ಉತ್ತರ ಕಲ್ಪಿಸಿದೆ.

ನರೇಗಾದಡಿ ಕೃಷಿ, ಅರಣ್ಯ ಮತ್ತು ಗ್ರಾಪಂಚಾಯಿತಿಯಿಂದ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಬದು ನಿರ್ಮಾಣ, ಕೆರೆ ಹೂಳೆತ್ತುವುದು, ರೈತ ಸಂಪರ್ಕ ರಸ್ತೆ ಅಭಿವೃದ್ಧಿ ಇತರೇ ಕಾರ್ಯಗಳು ನಡೆಯುತ್ತಿವೆ. ಹಳ್ಳಿಗಳತ್ತ ಬಂದಿರುವ ಯುವಕರು ಊರಲ್ಲಿ ಕಾಲಹರಣ ಮಾಡುವ ಬದಲು ಉದ್ಯೋಗ ಖಾತ್ರಿ ಕೆಲಸದಲ್ಲಿ ತೊಡಗಿದ್ದಾರೆ.

ಕೈಯಲ್ಲಿ ಲ್ಯಾಪಟಾಪ್, ಮೊಬೈಲ್, ಬುಕ್, ಪೆನ್ ಹಿಡಿಯಬೇಕಾದ ಯುವಕರು ಹೆಗಲ ಮೇಲೆ ಗುದ್ದಲಿ, ಸಲಿಕೆ ಮತ್ತು ತಲೆಯ ಮೇಲೆ ಬುಟ್ಟಿ ಹೊತ್ತು ಕೆಲಸ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದ್ರಳ್ಳಿ, ಯಳವತ್ತಿ, ಅಡರಕಟ್ಟಿ, ಶಿಗ್ಲಿ, ಗೊಜನೂರ ಸೇರಿ ನಿತ್ಯ ತಾಲೂಕಿನ 14 ಗ್ರಾಮ ಪಂಚಾಯಿತು ವ್ಯಾಪ್ತಿಯಲ್ಲಿ ನಡೆಯುತ್ತಿರುವ ನರೇಗಾ ಕೆಲಸದಲ್ಲಿ ನೂರಾರು ಯುವಕರು ಪಾಲ್ಗೊಂಡಿದ್ದಾರೆ.

ಆದ್ರಳ್ಳಿ ಗ್ರಾಮದಲ್ಲಿ ನರೇಗಾದಡಿ ನಡೆಯುತ್ತಿದ್ದ ಬದು ನಿರ್ಮಾಣ ಕಾರ್ಯದಲ್ಲಿ ಇಂಜನೀಯರಿಂಗ್ ಪದವೀಧರ ಪ್ರವೀಣ ಸೇರಿ ತಾಂಡಾದಿಂದ ಉದ್ಯೋಗ ಅರಸಿ ಗೋವಾ, ಮಂಗಳೂರ, ಉಡುಪಿ, ಬೆಂಗಳೂರು ಮತ್ತಿತರ ಕಡೆ ಹೋಗಿದ್ದ ಅನೇಕ ಯುವಕರು ನರೇಗಾದ ಕೆಲಸದಿಂದ ಕೊಡುವ 299 ರೂ ಬದುಕಿಗೆ ಆಸರೆಯಾಗಿದೆ.

ಪ್ರವೀಣ ಲಮಾಣಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದು ಹೀಗೆ

ಬೆಳಗಾವಿಯ ಗೊಗಟೆ ಇಂಜನೀಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ವಿಭಾಗದಲ್ಲಿ ಓದುತ್ತಿರುವ ನಾನು ಕರೋನಾ ಎಪೆಕ್ಟ್‌ನಿಂದ ನಮ್ಮೂರು ಆದ್ರಳ್ಳಿ ತಾಂಡಾಕ್ಕೆ ಬಂದಿದ್ದೇನೆ. ನಮ್ಮದು ಬಡ ಕುಟುಂಬ ಮನೆಯಲ್ಲಿ ಪಾಲಕರು ನಿತ್ಯ ನಸುಕಿನಲ್ಲಿಯೇ ನರೇಗಾ ಕೆಲಸಕ್ಕೆ ಹೋಗುತ್ತಿದ್ದರು. ನಮಗಾಗಿ ಕಷ್ಟಪಟ್ಟು ದುಡಿಯುತ್ತಿರುವ ತಂದೆ-ತಾಯಿಗಳ ಜೊತೆಗೆ ನಾನೂ ಕೆಲಸ ಮಾಡಿದರೆ ಕುಟುಂಬಕ್ಕೆ ಆಸರೆಯಾಗುತ್ತದೆ. ರೈತ ಉಪಯೋಗಿ ನರೇಗಾ ಕೆಲಸಕ್ಕೆ ಕೈ ಜೋಡಿಸಿದಂತಾಗುತ್ತದೆ ಎಂಬ ಕಾರಣದಿಂದ ನರೇಗಾದಡಿ 15 ದಿನಗಳಿಂದ ಮೇಟ್ ಆಗಿ ಕೆಲಸ ಮಾಡುತ್ತಿದ್ದೇನೆ. ಈ ಕೆಲಸ ನನಗೆ ಬದುಕಿನ ಪಾಠ, ಪ್ರಾಯೋಗಿಕ ಅನುಭವ ಕಲಿಸಿದೆ. ಸರ್ಕಾರದ ಈ ಯೋಜನೆ ಅತ್ಯಂತ ಮಹತ್ವಪೂರ್ಣವಾಗಿದೆ.

ಆರ್.ವೈ. ಗುರಿಕಾರ- ತಾಪಂ ಇಓ-ಲಕ್ಷ್ಮೇಶ್ವರ ಅವರನ್ನು ಕೇಳಿದಾಗ, ಈ ಬಗ್ಗೆ ಹೇಳಿದ್ದು ಹೀಗೆ, “

ಕರೋನಾ ಹಿನ್ನೆಲೆ ಗ್ರಾಮೀಣ ಪ್ರದೇಶಗಳನ್ನು ಬಂದು ಸೇರಿಕೊಳ್ಳುತ್ತಿರುವ ಆರೋಗ್ಯವಂತ, ವಿದ್ಯಾವಂತ, ಖಾಸಗಿ ಕಂಪನಿ ಉದ್ಯೋಗಿ ಯುವಕರಿಗೆ ಕೂಡಲೇ ಜಾಬ್‍ಕಾರ್ಡ್ ನೀಡಿ ಉದ್ಯೋಗ ಕಲ್ಪಿಸಲಾಗುತ್ತಿದೆ. ಈ ವೇಳೆ ಕರೋನಾ ಮಾರ್ಗಸೂಚಿ ಪಾಲನೆ ಮಾಡುವ ಮೂಲಕ ಯುವಕರು ನರೇಗಾ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.

Previous Post

ಮೈಸೂರು, ಚಾಮರಾಜನಗರ ಡಿಸಿ ಕಚೇರಿ, ಆಸ್ಪತ್ರೆಯ ಎಲ್ಲ ದಾಖಲೆ ಜಪ್ತಿ: ಹೈಕೋರ್ಟ್ ಆದೇಶ

Next Post

ಕಾಡುಗಳ್ಳ ವೀರಪ್ಪನ್ ತಾಣವಾಗಿದ್ದ ಚಾಮರಾಜನಗರ ಜಿಲ್ಲೆಯ ಮಾರ್ಟಳ್ಳಿ ಇದೀಗ ಅಪ್ಪಟ ಯೋಧರ ಹಳ್ಳಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಕಾಡುಗಳ್ಳ ವೀರಪ್ಪನ್  ತಾಣವಾಗಿದ್ದ ಚಾಮರಾಜನಗರ  ಜಿಲ್ಲೆಯ ಮಾರ್ಟಳ್ಳಿ  ಇದೀಗ ಅಪ್ಪಟ ಯೋಧರ ಹಳ್ಳಿ

ಕಾಡುಗಳ್ಳ ವೀರಪ್ಪನ್ ತಾಣವಾಗಿದ್ದ ಚಾಮರಾಜನಗರ ಜಿಲ್ಲೆಯ ಮಾರ್ಟಳ್ಳಿ ಇದೀಗ ಅಪ್ಪಟ ಯೋಧರ ಹಳ್ಳಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada