• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿದ್ಯಾವಂತ ನಿರುದ್ಯೋಗಿ ಪದವೀಧರರ ಬದುಕಿಗೆ ಆಸರೆ -ನರೇಗಾ

Any Mind by Any Mind
May 6, 2021
in ಕರ್ನಾಟಕ
0
ವಿದ್ಯಾವಂತ ನಿರುದ್ಯೋಗಿ ಪದವೀಧರರ ಬದುಕಿಗೆ ಆಸರೆ -ನರೇಗಾ
Share on WhatsAppShare on FacebookShare on Telegram

ADVERTISEMENT

ಕರೊನಾ ಮಹಾಮಾರಿ ಮಹಾನಗರಗಳಲ್ಲಿ ಹೆಚ್ಚುತ್ತಿರುವುದರಿಂದ ಮತ್ತು ಸೋಂಕು ತಡೆಗಾಗಿ ಸರ್ಕಾರ ಕಪ್ರ್ಯೂ ಜಾರಿಗೊಳಿಸಿದ್ದರಿಂದ ತಮ್ಮ ಹಳ್ಳಿಗಳತ್ತ ವಲಸೆ ಬರುತ್ತಿರುವ ಯುವಕರಿಗೆ ನರೇಗಾ ಕೆಲಸ ಬದುಕಿಗೆ ಆಸರೆಯಾಗಿದೆ.

ಪ್ರತಿ ವರ್ಷ ಬೇಸಿಗೆ ಹಂಗಾಮಿನಲ್ಲಿ ಗ್ರಾಮೀಣ ಪ್ರದೇಶಗಳ ಜನರು ಉದ್ಯೋಗ ಅರಸಿ ಗುಳೆ ಹೋಗಬಾರದು ಮತ್ತು ಅವರಿಗೆ ಸ್ಥಳೀಯವಾಗಿಯೇ ಉದ್ಯೋಗ ಸೃಜಿಸಿ ಸಂಪನ್ಮೂಲ ಹೆಚ್ಚಿಸುವ ಉದ್ದೇಶ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯದ್ದಾಗಿದೆ. ಆದರೆ ಕಳೆದ 2 ವರ್ಷದಿಂದ ನರೇಗಾ ಯೋಜನೆ ಕರೋನಾ ಸಂಕಷ್ಟದಲ್ಲಿ ಸಿಲುಕಿರುವ ಗ್ರಾಮೀಣ ಜನರಿಗೆ ಆಶಾಕಿರಣವಾಗಿದೆ.

ಎಕಾಏಕಿ ಪಟ್ಟಣ ಪ್ರದೇಶಗಳಿಂದ ಹಳ್ಳಿಗಳತ್ತ ಬಂದಿರುವ ಖಾಸಗಿ ಕಂಪನಿ ಉದ್ಯೋಗಿಗಳು, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಪಟ್ಟಣ ಸೇರಿರುವ ನಿರುದ್ಯೋಗಿ ವಿದ್ಯಾವಂತ ಯುವಕರು, ಪದವೀಧರ ಯುವಕರು ಉದ್ಯೋಗ ಇಲ್ಲದೇ ಹಳ್ಳಿಯಲ್ಲಿ ಜೀವನ ನಡೆಸುವುದು ಹೇಗೆ ಎಂಬ ಪ್ರಶ್ನೆಗೆ ನರೇಗಾ ಉತ್ತರ ಕಲ್ಪಿಸಿದೆ.

ನರೇಗಾದಡಿ ಕೃಷಿ, ಅರಣ್ಯ ಮತ್ತು ಗ್ರಾಪಂಚಾಯಿತಿಯಿಂದ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಬದು ನಿರ್ಮಾಣ, ಕೆರೆ ಹೂಳೆತ್ತುವುದು, ರೈತ ಸಂಪರ್ಕ ರಸ್ತೆ ಅಭಿವೃದ್ಧಿ ಇತರೇ ಕಾರ್ಯಗಳು ನಡೆಯುತ್ತಿವೆ. ಹಳ್ಳಿಗಳತ್ತ ಬಂದಿರುವ ಯುವಕರು ಊರಲ್ಲಿ ಕಾಲಹರಣ ಮಾಡುವ ಬದಲು ಉದ್ಯೋಗ ಖಾತ್ರಿ ಕೆಲಸದಲ್ಲಿ ತೊಡಗಿದ್ದಾರೆ.

ಕೈಯಲ್ಲಿ ಲ್ಯಾಪಟಾಪ್, ಮೊಬೈಲ್, ಬುಕ್, ಪೆನ್ ಹಿಡಿಯಬೇಕಾದ ಯುವಕರು ಹೆಗಲ ಮೇಲೆ ಗುದ್ದಲಿ, ಸಲಿಕೆ ಮತ್ತು ತಲೆಯ ಮೇಲೆ ಬುಟ್ಟಿ ಹೊತ್ತು ಕೆಲಸ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದ್ರಳ್ಳಿ, ಯಳವತ್ತಿ, ಅಡರಕಟ್ಟಿ, ಶಿಗ್ಲಿ, ಗೊಜನೂರ ಸೇರಿ ನಿತ್ಯ ತಾಲೂಕಿನ 14 ಗ್ರಾಮ ಪಂಚಾಯಿತು ವ್ಯಾಪ್ತಿಯಲ್ಲಿ ನಡೆಯುತ್ತಿರುವ ನರೇಗಾ ಕೆಲಸದಲ್ಲಿ ನೂರಾರು ಯುವಕರು ಪಾಲ್ಗೊಂಡಿದ್ದಾರೆ.

ಆದ್ರಳ್ಳಿ ಗ್ರಾಮದಲ್ಲಿ ನರೇಗಾದಡಿ ನಡೆಯುತ್ತಿದ್ದ ಬದು ನಿರ್ಮಾಣ ಕಾರ್ಯದಲ್ಲಿ ಇಂಜನೀಯರಿಂಗ್ ಪದವೀಧರ ಪ್ರವೀಣ ಸೇರಿ ತಾಂಡಾದಿಂದ ಉದ್ಯೋಗ ಅರಸಿ ಗೋವಾ, ಮಂಗಳೂರ, ಉಡುಪಿ, ಬೆಂಗಳೂರು ಮತ್ತಿತರ ಕಡೆ ಹೋಗಿದ್ದ ಅನೇಕ ಯುವಕರು ನರೇಗಾದ ಕೆಲಸದಿಂದ ಕೊಡುವ 299 ರೂ ಬದುಕಿಗೆ ಆಸರೆಯಾಗಿದೆ.

ಪ್ರವೀಣ ಲಮಾಣಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದು ಹೀಗೆ

ಬೆಳಗಾವಿಯ ಗೊಗಟೆ ಇಂಜನೀಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ವಿಭಾಗದಲ್ಲಿ ಓದುತ್ತಿರುವ ನಾನು ಕರೋನಾ ಎಪೆಕ್ಟ್‌ನಿಂದ ನಮ್ಮೂರು ಆದ್ರಳ್ಳಿ ತಾಂಡಾಕ್ಕೆ ಬಂದಿದ್ದೇನೆ. ನಮ್ಮದು ಬಡ ಕುಟುಂಬ ಮನೆಯಲ್ಲಿ ಪಾಲಕರು ನಿತ್ಯ ನಸುಕಿನಲ್ಲಿಯೇ ನರೇಗಾ ಕೆಲಸಕ್ಕೆ ಹೋಗುತ್ತಿದ್ದರು. ನಮಗಾಗಿ ಕಷ್ಟಪಟ್ಟು ದುಡಿಯುತ್ತಿರುವ ತಂದೆ-ತಾಯಿಗಳ ಜೊತೆಗೆ ನಾನೂ ಕೆಲಸ ಮಾಡಿದರೆ ಕುಟುಂಬಕ್ಕೆ ಆಸರೆಯಾಗುತ್ತದೆ. ರೈತ ಉಪಯೋಗಿ ನರೇಗಾ ಕೆಲಸಕ್ಕೆ ಕೈ ಜೋಡಿಸಿದಂತಾಗುತ್ತದೆ ಎಂಬ ಕಾರಣದಿಂದ ನರೇಗಾದಡಿ 15 ದಿನಗಳಿಂದ ಮೇಟ್ ಆಗಿ ಕೆಲಸ ಮಾಡುತ್ತಿದ್ದೇನೆ. ಈ ಕೆಲಸ ನನಗೆ ಬದುಕಿನ ಪಾಠ, ಪ್ರಾಯೋಗಿಕ ಅನುಭವ ಕಲಿಸಿದೆ. ಸರ್ಕಾರದ ಈ ಯೋಜನೆ ಅತ್ಯಂತ ಮಹತ್ವಪೂರ್ಣವಾಗಿದೆ.

ಆರ್.ವೈ. ಗುರಿಕಾರ- ತಾಪಂ ಇಓ-ಲಕ್ಷ್ಮೇಶ್ವರ ಅವರನ್ನು ಕೇಳಿದಾಗ, ಈ ಬಗ್ಗೆ ಹೇಳಿದ್ದು ಹೀಗೆ, “

ಕರೋನಾ ಹಿನ್ನೆಲೆ ಗ್ರಾಮೀಣ ಪ್ರದೇಶಗಳನ್ನು ಬಂದು ಸೇರಿಕೊಳ್ಳುತ್ತಿರುವ ಆರೋಗ್ಯವಂತ, ವಿದ್ಯಾವಂತ, ಖಾಸಗಿ ಕಂಪನಿ ಉದ್ಯೋಗಿ ಯುವಕರಿಗೆ ಕೂಡಲೇ ಜಾಬ್‍ಕಾರ್ಡ್ ನೀಡಿ ಉದ್ಯೋಗ ಕಲ್ಪಿಸಲಾಗುತ್ತಿದೆ. ಈ ವೇಳೆ ಕರೋನಾ ಮಾರ್ಗಸೂಚಿ ಪಾಲನೆ ಮಾಡುವ ಮೂಲಕ ಯುವಕರು ನರೇಗಾ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.

Previous Post

ಮೈಸೂರು, ಚಾಮರಾಜನಗರ ಡಿಸಿ ಕಚೇರಿ, ಆಸ್ಪತ್ರೆಯ ಎಲ್ಲ ದಾಖಲೆ ಜಪ್ತಿ: ಹೈಕೋರ್ಟ್ ಆದೇಶ

Next Post

ಕಾಡುಗಳ್ಳ ವೀರಪ್ಪನ್ ತಾಣವಾಗಿದ್ದ ಚಾಮರಾಜನಗರ ಜಿಲ್ಲೆಯ ಮಾರ್ಟಳ್ಳಿ ಇದೀಗ ಅಪ್ಪಟ ಯೋಧರ ಹಳ್ಳಿ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post
ಕಾಡುಗಳ್ಳ ವೀರಪ್ಪನ್  ತಾಣವಾಗಿದ್ದ ಚಾಮರಾಜನಗರ  ಜಿಲ್ಲೆಯ ಮಾರ್ಟಳ್ಳಿ  ಇದೀಗ ಅಪ್ಪಟ ಯೋಧರ ಹಳ್ಳಿ

ಕಾಡುಗಳ್ಳ ವೀರಪ್ಪನ್ ತಾಣವಾಗಿದ್ದ ಚಾಮರಾಜನಗರ ಜಿಲ್ಲೆಯ ಮಾರ್ಟಳ್ಳಿ ಇದೀಗ ಅಪ್ಪಟ ಯೋಧರ ಹಳ್ಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada