ಚಿಕ್ಕಮಗಳೂರು: ಸತ್ಯವನ್ನ ಹೂತಾಕಲು ಆಗಲ್ಲ, ಕೆಲ ಕಾಲ ಮುಚ್ಚಿಡಬಹುದು ಆದರೆ ಸತ್ಯ ಎಂದಿದ್ದರೂ ಹೊರಬಂದೇ ಬರುತ್ತದೆ. ಯಾರಾದ್ರು ತಪ್ಪುಮಾಡಿರೋರು ಇದ್ರೆ ಶಿಕ್ಷೆ ಆಗಲೇಬೇಕು. ನಾನು ಸಿಎಂ, ಡಿಸಿಎಂ, ಪ್ರಧಾನಿ ಎನ್ನುವವರಾರೂ ಕಾನೂನಿಗೆ ಅತಿಥರಲ್ಲ. ಊರಿಗೆ ಬಂದೋಳು ನೀರಿಗೆ ಬರಲ್ವಾ. ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್. ಡ್ಯಾಶ್ ಎಂದು ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧಪಟ್ಟಂತೆ ಮಾಜಿ ಸಚಿವ ಸಿ.ಟಿ. ರವಿ ಟಾಂಗ್ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಿಂದ ಸಿಬಿಐ ತನಿಖೆ ಮುಮದುವರೆಸುವಂತೆ ಆದೇಶ ನೀಡಿದ ಬಗ್ಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಹೆಸರೇಳದೆ ತಿವಿದಿದ್ದಾರೆ. ಹಾಲಿಂದು ಹಾಲಿಗೆ, ನೀರಿಂದು ನೀರಿಗೆ, ಉಪ್ಪು ತಿಂದೋನು ನೀರು ಕುಡೀಬೇಕು. ಇವೆಲ್ಲಾ ಹಳೇ ಕಾಲದ ಗಾದೆ ಮಾತುಗಳು. ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು, ಪ್ರಮಾಣಿಕರಿಗೆ ತೊಂದರೆ ಆಗಬಾರದು ಎಂದು ಹೇಳಿದ್ದಾರೆ.