ಸಿರಿಧಾನ್ಯ ಮೇಳ ಹಿನ್ನಲೆಯಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಅವರನ್ನು ಎತ್ತಿನಗಾಡಿಯಲ್ಲಿ ಹಾಗೂ ಪೂರ್ಣಕುಂಭದೊಂದಿಗೆ ಫ್ಯಾಕ್ಟರಿ ಸರ್ಕಲ್ ನಿಂದ ಕಾರ್ಯಕ್ರಮ ನಡೆಯುವ ಡಾ: ರಾಜ್ ಕುಮಾರ್ ಬಡಾವಣೆಯ ವರೆಗೆ ಮೆರವಣಿಗೆಯಲ್ಲಿ ಕರೆ ತರಲಾಯಿತು.
![ಸಿರಿಧಾನ್ಯ ಮೇಳ](https://pratidhvani.com/wp-content/uploads/2023/08/ಸರಿಅ-768x1024.jpeg)
ಮದ್ದೂರು ಶಾಸಕ ಕೆ.ಎಂ ಉದಯ್, ವಿಧಾನಪರಿಷತ್ ಶಾಸಕ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಎತ್ತಿನ ಗಾಡಿಯಲ್ಲಿ ಬಂದ ಸಚಿವರು,ಸ್ವಾಮೀಜಿ. ಕೃಷಿ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಮಂಡ್ಯದಲ್ಲಿ ಏರ್ಪಡಿಸಿರುವ ಸಿರಿಧಾನ್ಯ ಮೇಳ ಹಲವು ವಿಭಿನ್ನತೆಯಿಂದ ಗಮನ ಸೆಳೆಯಿತು . ಸಚಿವರು,ಸ್ವಾಮೀಜಿ, ಗಣ್ಯರಿಗೆ ಪೂರ್ಣಕುಂಭ ಸ್ವಾಗತದ ಜೊತೆಗೆ ಎತ್ತಿನ ಬಂಡಿಯಲ್ಲಿ ಕೂರಿಸಿ ಮೆರವಣಿಗೆಯಲ್ಲಿ ಕರೆತರಲಾಯಿತು, ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರೇ ಎತ್ತಿನ ಗಾಡಿಗೆ ಸಾರಥಿಯಾಗಿ ಮುನ್ನಡೆಸಿದ್ದು ವಿಶೇಷವಾಗಿತ್ತು