• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಈಶ್ವರಪ್ಪ ಲೆಕ್ಕಾಚಾರ ಉಲ್ಟಾ ಮಾಡಿದ ಓಂ ಶಕ್ತಿ ಪ್ರವಾಸ : ಸಚಿವರೀಗ ಗಪ್‌ಚುಪ್‌!

ಸಾಗರ by ಸಾಗರ
January 9, 2022
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಕಳೆದ ಒಂದು ವಾರದಿಂದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆಎಸ್‌ ಈಶ್ವರಪ್ಪನವರ ಹೇಳಿಕೆಗಳನ್ನ ಗಮನಿಸುತ್ತಾ ಹೋದರೆ, ಕರೋನಾ ಸೋಂಕಿನ ಕುರಿತು ತಲೆಬುಡವಿಲ್ಲದ ಲೆಕ್ಕಾಚಾರ ಏನು ಎಂಬುದು ತಿಳಿಯುತ್ತದೆ. ಸಚಿವರ ಕೃಪಾಪೋಷಿತ ಓಂ ಶಕ್ತಿ ಪ್ರವಾಸ ಶಿವಮೊಗ್ಗದಲ್ಲಿ ಕೋವಿಡ್‌ ಸೋಂಕನ್ನ ಹರಡಿಸಿದ್ದು ಈಗ ಆತಂಕ ಮೂಡಿಸಿದೆ.

ADVERTISEMENT

ಕಳೆದ ವಾರ ವೀಕೆಂಡ್‌ ಕರ್ಫ್ಯೂ ಘೋಷಣೆ ಹೊರಬೀಳುತ್ತಿದ್ದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಶಿವಮೊಗ್ಗ ಉಸ್ತುವಾರಿ ಸಚಿವ ಕೆಎಸ್‌ ಈಶ್ವರಪ್ಪ ಎಲ್ಲಾ ಕಡೆ ಕಟ್ಟುನಿಟ್ಟಿನ ಕ್ರಮ ಅನವಶ್ಯ ಎಂದು ಹೇಳಿದ್ದರು. ಬೆಂಗಳೂರಲ್ಲಿ ಹೆಚ್ಚಿದೆ ಆದರೆ ಶಿವಮೊಗ್ಗದಂತಹ ಜಿಲ್ಲೆಗಳಲ್ಲಿ ಒಂದೋ ಎರಡೋ ಬರುತ್ತಿದೆ. ಇಡೀ ಕರ್ನಾಟಕಕ್ಕೆ ಅನ್ವಯಿಸಿ ನಿಯಮ ಹೇರುವುದು ಸರಿ ಅಲ್ಲ. ಈ ಕುರಿತು ಸಚಿವ ಸಂಪುಟದಲ್ಲಿ ಮಾತಾಡ್ತೀನಿ ಎಂದು ಗೊಂದಲ ಮೂಡಿಸಿದ್ದರು. ಸಚಿವ ಸಂಪುಟ ಸಭೆಯಲ್ಲೂ ಇವರ ಮಾತಿಗೆ ಯಾರೂ ಕಿವಿಗೊಡಲಿಲ್ಲ.

ಈಶ್ವರಪ್ಪನವರು ಬೇರೆಲ್ಲೆಡೆ ಕರ್ಫ್ಯೂ ನಿಯಮಗಳು ಬೇಡ ಅಂದಿದ್ದೇನೋ ನಿಜ ಆದರೆ ಕಾಂಗ್ರೆಸ್ ಪಾದಯಾತ್ರೆ ಮಾತ್ರ ನಡೆಯಕೂಡದು. ಅದು ಸಾವಿನ ಯಾತ್ರೆ ಎಂಬಂತೆ ವಾಗ್ದಾಳಿ ನಡೆಸಿದ್ದರು. ಈಶ್ವರಪ್ಪ ಕೋವಿಡ್‌ ವೀಕೆಂಡ್‌ ಕರ್ಫ್ಯೂ ಬೇಡ ಎಂದಿದ್ದು ಮಾತ್ರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಈ ಹೇಳಿಕೆಗಳ ಮಧ್ಯೆ ಶಿವಮೊಗ್ಗದಿಂದ ನೂರಾರು ಬಸ್‌ಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಓಂ ಪರಾಶಕ್ತಿ ಯಾತ್ರೆಗೆ ತೆರಳಿದ್ದ ಮಹಿಳೆಯರು ಮಕ್ಕಳು ಮರಳಿದರು. ಶಿವಮೊಗ್ಗ ನಗರ ಕೋವಿಡ್‌ ಗೆ ತುತ್ತಾಗುವ ಆತಂಕ ಮೂಡಿತು. ಎಲ್ಲಾ ಬಸ್‌ ಮೇಲೂ ಈಶ್ವರಪ್ಪನವರ ಚಿತ್ರಗಳಿದ್ದರು ಅಧಿಕೃತವಾಗಿ ಈಶ್ವರಪ್ಪನವರೇ ಪ್ರವಾಸಕ್ಕೆ ಅಣಿಮಾಡಿದ್ದು ಎಂದು ಹೇಳಲಾಗುತ್ತಿಲ್ಲ. ಅವರೆಲ್ಲಾ ಸಾಲು ಸಾಲಾಗಿ ಶಿವಮೊಗ್ಗದೆಡೆ ಬರತೊಡಗಿದ್ದರು.

ಶಿವಮೊಗ್ಗ ಜಿಲ್ಲಾಧಿಕಾರಿ ಕೆಬಿ ಶಿವಕುಮಾರ್‌ ಹಾಗೂ ಉಸ್ತುವಾರಿ ಸಚಿವ ಕೆಎಸ್‌ ಈಶ್ವರಪ್ಪ ಸೇರಿ ಇವರನ್ನೆಲ್ಲಾ ಸಹ್ಯಾದ್ರಿ ಕಾಲೇಜಿನ ಗ್ರೌಂಡ್‌ನಲ್ಲಿ ತಪಾಸಣೆ ಮಾಡಲು ಏರ್ಪಾಟು ಮಾಡಿದರು. ಅಂದೇ ಹಲವರಿಗೆ ಕೋವಿಡ್‌ ಸೋಂಕು ಕಾಣಿಸಿಕೊಂಡರೂ ಸಹ ಜಿಲ್ಲಾಡಳಿತ ಮಾಧ್ಯಮಗಳಿಗೆ ಮಾಹಿತಿ ನೀಡಲಿಲ್ಲ. ಭಕ್ತರನ್ನೆಲ್ಲಾ ರ್‍ಯಾಪಿಡ್‌ ಟೆಸ್ಟ್ ಮಾಡಿ, ಏಳು ದಿನಗಳ ಕಾಲ ಹೋಂ ಕ್ವಾರಂಟೈನ್‌ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದರು. ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ತಾವೂ ಸಹ ಭಕ್ತರ ಜೊತೆ ಓಂ ಶಕ್ತಿ ದೇಗುಲಕ್ಕೆ ತೆರಳಿದ್ದಾಗಿ ಮಾಹಿತಿ ನೀಡಿದರು. ಆದರೆ ಹೋಂ ಕ್ವಾರಂಟೈನ್‌ ಆಗದೇ ಮರುದಿನ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಸಭೆಯಲ್ಲಿ ಭಾಗವಹಿಸಿ ಅಲ್ಲೂ ಕೊರೋನಾ ನಿಯಮಗಳನ್ನ ಗಾಳಿಗೆ ತೂರಿದರು.

ಮರು ದಿನ ಶಿವಮೊಗ್ಗ ಜಿಲ್ಲಾಧಿಕಾರಿ ಕೆಬಿ ಶಿವಕುಮಾರ್‍ ಮಾಧ್ಯಮಗಳೊಂದಿಗೆ ಮಾತನಾಡಿ ಓಂ ಶಕ್ತಿಗೆ ತೆರಳಿದ್ದ ಭಕ್ತರಲ್ಲಿ ಆರು ಜನರಿಗೆ ಮಾತ್ರ ಕೋವಿಡ್‌ ಬಂದಿದೆ ಎಂದರು. ಸಂಜೆಯಾಗುತ್ತಿದ್ದಂತೆ ಮೂವತ್ತಕ್ಕೂ ಅಧಿಕ ಜನರಿಗೆ ಸೋಂಕು ದೃಢವಾಗಿತ್ತು. ಇಪ್ಪತ್ತರ ಆಸುಪಾಸಿನಲ್ಲಿದ್ದ ಶಿವಮೊಗ್ಗ ಕೋವಿಡ್‌ ಪ್ರಕರಣಗಳ ಸಂಖ್ಯೆ ನೂರೈವತ್ತರ ಗಡಿಗೆ ಬಂದು ನಿಂತಿವೆ. ಇದಕ್ಕೆ ಓಂ ಶಕ್ತಿ ಪ್ರವಾಸಕ್ಕೆ ತೆರಳಿದ್ದವರ ಕೊಡುಗೆ ಹೆಚ್ವು ಆದರೂ ಒಪ್ಪಿಕೊಳ್ಳದ ಸಚಿವರು ಚರ್ಚ್‌, ಮಸೀದಿ, ದೇವಸ್ಥಾನಗಳಿಂದಷ್ಟೇ ಕೊರೋನಾ ಬರೋದಿಲ್ಲ ಎಂದು ಅಸಂಬಂಧ ಉತ್ತರ ನೀಡಿದ್ದಾರೆ.

ಒಂದೋ ಎರಡೋ ಪ್ರಕರಣಗಳು ದಾಖಲಾಗಿವೆ, ಶಿವಮೊಗ್ಗದಂತಹ ಜಿಲ್ಲೆಗೆ ಕೋವಿಡ್‌ ನಿಯಮಗಳು ಬೇಕಿಲ್ಲ ಎಂದು ಉಡಾಫೆ ಮಾತನಾಡಿದ್ದ ಸಚಿವರೀಗ ಗಪ್‌ಚುಪ್ ಆಗಿದ್ದಾರೆ. ಈಗ ಅವರು ಕಾಂಗ್ರೆಸ್ ಮುಖಂಡರ ಮೇಕೆದಾಟು ಪಾದಯಾತ್ರೆ ಬಗ್ಗೆ

Tags: BJPCongress PartyCovid 19ಕರೋನಾಕೆ ಎಸ್ ಈಶ್ವರಪ್ಪಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

400ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗಳಿಗೆ ಕರೋನಾ ಪಾಸಿಟಿವ್; ಹಾಜರಾತಿ ನಿರ್ಬಂಧಿಸಿದ ರಾಜ್ಯಸಭಾ!

Next Post

ತನ್ನ ಕಾರನ್ನೇ ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿ 1.2 ಲಕ್ಷ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿದ ಬೆಂಗಳೂರಿನ ವೈದ್ಯ

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
ತನ್ನ ಕಾರನ್ನೇ ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿ 1.2 ಲಕ್ಷ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿದ ಬೆಂಗಳೂರಿನ ವೈದ್ಯ

ತನ್ನ ಕಾರನ್ನೇ ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿ 1.2 ಲಕ್ಷ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿದ ಬೆಂಗಳೂರಿನ ವೈದ್ಯ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada