• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

KJ George: ಕೌಶಲ ತರಬೇತಿ ಕೇಂದ್ರಕ್ಕೆ ಸಚಿವ ಜಾರ್ಜ್‌ ನೆರವು

ಪ್ರತಿಧ್ವನಿ by ಪ್ರತಿಧ್ವನಿ
September 20, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಸಚಿವರ ಅಧ್ಯಕ್ಷತೆಯ ಕೇಳಚಂದ್ರ ಫೌಂಡೇಷನ್‌ನಿಂದ ಕೌಶಲ ತರಬೇತಿ, ಕೌಶಲ ತರಬೇತಿ ಪಡೆದವರಿಗೆ ಪ್ರಮಾಣಪತ್ರ ವಿತರಿಸಿದ ಸಚಿವ ಕೆ.ಜೆ.ಜಾರ್ಜ್.

ADVERTISEMENT

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಕಾಡುಗೊಂಡನಹಳ್ಳಿಯಲ್ಲಿ ಕೇಳಚಂದ್ರ ಫೌಂಡೇಷನ್ ನಡೆಸುವ ಕೌಶಲ ಕೇಂದ್ರದಲ್ಲಿ ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಇಂಧನ ಸಚಿವ ಹಾಗೂ ಕೆ.ಜೆ.ಜಾರ್ಜ್ ಅವರು ಶನಿವಾರ ಪ್ರಮಾಣಪತ್ರ ವಿತರಿಸಿದರು. ಸರ್ವಜ್ಞನಗರ ಕ್ಷೇತ್ರದಲ್ಲಿ ಕೇಳಚಂದ್ರ ಫಂಡೇಷನ್ 2019ರಿಂದ ಕೌಶಲ್ಯ ತರಬೇತಿ ಕೇಂದ್ರ ನಡೆಸುತ್ತಿದ್ದು, ಈ ಮೂಲಕ ಮಹಿಳೆಯರು ಹಾಗೂ ಯುವಜನರ ಸ್ವಾವಲಂಬಿ ಜೀವನಕ್ಕೆ ಫೌಂಡೇಷನ್‌ನ ಅಧ್ಯಕ್ಷರ ಆಗಿರುವ ಸಚಿವ ಕೆ.ಜೆ. ಜಾರ್ಜ್‌ ನೆರವಾಗುತ್ತಿದ್ದಾರೆ.

ಕೌಶಲ ತರಬೇತಿ ಪಡೆದವರಿಗೆ ಪ್ರಮಾಣಪತ್ರ ವಿತರಿಸಿದ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, “ಫೌಂಡೇಷನ್ ವತಿಯಿಂದ ಕೌಶಲ ತರಬೇತಿ ನೀಡಲಾಗುತ್ತಿದೆ. ಪ್ರಸ್ತುತ ಕಂಪ್ಯೂಟರ್ ಕಲಿಕೆ, ಹೊಲಿಗೆ ತರಬೇತಿ, ಕಸೂತಿ, ಕರಕುಶಲ ವಸ್ತುಗಳ ತಯಾರಿಕೆಗೆ 3 ಮತ್ತು 6 ತಿಂಗಳ ತರಬೇತಿ ನಡೆಸಲಾಗುತ್ತಿದೆ. ಕೌಶಲ ತರಬೇತಿ ಪಡೆದವರು ಸ್ವಯಂ ಉದ್ಯೋಗ ಕೈಗೊಳ್ಳಲು ಸಜ್ಜಾಗಿದ್ದಾರೆ,” ಎಂದು ಹೇಳಿದರು.

“ಅಭಿವೃದ್ಧಿ ಬಗ್ಗೆ ಭಾಷಣ ಮಾಡುವ ಜನಪ್ರತಿನಿಧಿ ನಾನಲ್ಲ. ಕೆಲಸ ಮಾಡಿ ಜನರಿಗೆ ಹತ್ತಿರವಾದವನು ನಾನು. ಕ್ಷೇತ್ರದಲ್ಲಿ ಮೂಲ ಸೌಕರ್ಯ ಕಲ್ಪಿಸುವ ಜತೆಗೆ ಶಿಕ್ಷಣ, ಉದ್ಯೋಗಕ್ಕೆ ಪೂರಕವಾದ ಕೌಶಲ ತರಬೇತಿ ಮತ್ತು ಆರೋಗ್ಯಕ್ಕೆ ಒತ್ತು ನೀಡಿದ್ದೇನೆ. ನಮ್ಮ ಫೌಂಡೇಷನ್ ವತಿಯಿಂದ ಮೊದಲಿಗೆ ಕಾಡುಗೊಂಡನಹಳ್ಳಿಯಲ್ಲಿ ಕೌಶಲ ತರಬೇತಿ ಕೇಂದ್ರ ಆರಂಭ ಮಾಡಲಾಯಿತು. ಇದೀಗ ಜೀವನಹಳ್ಳಿ ವಾರ್ಡ್‌ನಲ್ಲೂ ಒಂದು ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಕೆ.ಜೆ.ಹಳ್ಳಿ ಕೌಶಲ ಕೇಂದ್ರ ಮಾದರಿ ಕೇಂದ್ರವಾಗಿದೆ. 2000ಕ್ಕೂ ಹೆಚ್ಚಿನ ಮಹಿಳೆಯರು ತರಬೇತಿ ಪೂರ್ಣಗೊಳಿಸಿದ್ದಾರೆ ಎಂಬುದು ಹೆಮ್ಮಯ ವಿಷಯ. ಈ ಶ್ರೇಯ ಸುಜಾ ಜಾರ್ಜ್‌ ಅವರಿಗೆ ಸಲ್ಲಬೇಕು,” ಎಂದರು.

“ಶೀಘ್ರದಲ್ಲೇ ಹೆಚ್.ಬಿ.ಆರ್. ಬಡಾವಣೆಯಲ್ಲಿ ನೂತನ ಆಸ್ಪತ್ರೆ ಲೋಕಾರ್ಪಣೆ ಆಗಲಿದೆ. ಕ್ಷೇತ್ರದಲ್ಲಿರುವ ಡಯಾಲಿಸಿಸ್ ಕೇಂದ್ರದಲ್ಲಿ 37,000ಕ್ಕೂ ಹೆಚ್ಚು ಜನರಿಗೆ ಡಯಾಲಿಸಿಸ್ ಸೌಲಭ್ಯ ಒದಗಿಸಲಾಗಿದೆ. ಮಧುಮೇಹ ಮತ್ತಿತರ ಆರೋಗ್ಯ ಸಮಸ್ಯೆಗಳಿಗೆ ಉಚಿತ ಔಷಧ ಒದಗಿಸಿ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ,” ಎಂದು ಹೇಳಿದರು.

ಕೇಳಚಂದ್ರ ಕೌಶಲ ಅಭಿವೃದ್ಧಿ ಕೇಂದ್ರದ ಸಂಚಾಲಕರಾಗಿರುವ ಡಾ.ಬಿ.ಎಸ್.ತ್ರಿವೇಣಿ ಮಾತನಾಡಿ, “ಇಂಟಿಗ್ರೇಟೆಡ್‌ ಮೆಡಿಕಲ್ ಸೆಂಟರ್ ಆಗಿ ಆರಂಭಗೊಂಡ ಕೆ.ಜೆ.ಹಳ್ಳಿ ಕೇಂದ್ರ ಇಂದು ಸಮರ್ಥ ಕೌಶಲ ಅಭಿವೃದ್ಧಿ ಕೇಂದ್ರವಾಗಿದೆ. ಕಂಪ್ಯೂಟರ್ ಕಲಿಕೆ ನಂತರ ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ,” ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಫೌಂಡೇಷನ್ ಉಪಾಧ್ಯಕ್ಷರಾದ ಸುಜಾ ಜಾರ್ಜ್, ಕಾಡುಗೊಂಡನಹಳ್ಳಿ ವಾರ್ಡ್ ಮುಖಂಡರು, ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

ಸರ್ವಜ ನಗರದ ರಸ್ತೆ ಸುಧಾರಣೆಗೆ ಸಚಿವರ ಖಡಕ್ ಸೂಚನೆ
ಬಾಣಸವಾಡಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಕ್ಷೇತ್ರದ ಜನರ ಅಹವಾಲು ಸ್ವೀಕರಿಸಿದ ಬಳಿಕ ರಸ್ತೆ ಸಮೀಕ್ಷೆ ವರದಿ ಪರಿಶೀಲಿಸಿ ಕ್ಷೇತ್ರದ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸಚಿವ ಜಾರ್ಜ್‌ ಸುಧೀರ್ಘ ಚರ್ಚೆ ನಡೆಸಿದರು. ‘ಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚಿ, ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ. ನೆಪ ಹೇಳದೆ ರಸ್ತೆಗಳ ಅಭಿವೃದ್ಧಿಗೆ ಮುಂದಾಗಿ,’ ಎಂದು ಸಚಿವ ಜಾರ್ಜ್ ಖಡಕ್ ಸೂಚನೆ ನೀಡಿದರು. ಕೆಲ ದಿನಗಳ ಬಳಿಕ ಖುದ್ದಾಗಿ ರಸ್ತೆಗಳ ಪರಿಶೀಲನೆ ನಡೆಸುವುದಾಗಿಯೂ ಎಂದು ಅಧಿಕಾರಿಗಳಿಗೆ ಸಚಿವರು ತಿಳಿಸಿದರು.

ಕಲ್ಯಾಣ್ ನಗರದಲ್ಲಿ ಅರೇಬಿಯನ್ ಪ್ಯಾಲೇಸ್ ಹೋಟೇಲ್ ಲೋಕಾರ್ಪಣೆ.
ಕಲ್ಯಾಣ್ ನಗರದ ಸಿಎಂಆರ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಅರೇಬಿಯನ್ ಪ್ಯಾಲೆಸ್ ಮಂಡಿ ರೆಸ್ಟೋರೆಂಟ್ ಉದ್ಘಾಟಿಸಿದ ಸಚಿವ ಜಾರ್ಜ್ ಹೋಟೆಲ್‌ ಉದ್ಯಮಿಗೆ ಶುಭಕೋರಿದರು.

Tags: biography of k j georgecm siddaramaiah and k j georgeenergy minister k j georgeK J Georgek j george biok j george biographyk j george educationk j george familyk j george historyk j george interviewk j george kannadak j george latest newsk j george livek j george political journeyk j george speechk j george statusKJ Georgekj george edkj george housekj george mlakj george newskj george sonkj george votesminister k j george reactmla kj george
Previous Post

Santhosh Lad: ನರೇಂದ್ರ ಮೋದಿ ವಿರುದ್ಧ ಮಾತಾಡೋದೇ ತಪ್ಪಾ..? ಲೋಪಗಳನ್ನು ಪ್ರಶ್ನಿಸೋದೇ ತಪ್ಪಾ..?

Next Post

HD Kumarswamy: ಜಾತಿ ಗಣತಿ ಮುಂದಕ್ಕೆ ಹಾಕಿ ಇಲ್ಲವೇ ವಿಸ್ತರಿಸಿ: ಹೆಚ್.ಡಿ. ಕುಮಾರಸ್ವಾಮಿ

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

September 30, 2025
Next Post

HD Kumarswamy: ಜಾತಿ ಗಣತಿ ಮುಂದಕ್ಕೆ ಹಾಕಿ ಇಲ್ಲವೇ ವಿಸ್ತರಿಸಿ: ಹೆಚ್.ಡಿ. ಕುಮಾರಸ್ವಾಮಿ

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada