• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ಕಾರಕ್ಕೆ ಕಪ್ಪು ಚುಕ್ಕೆಯನ್ನು ತೆಗಿಯಲು ಸೋಮವಾರ ಸಚಿವ K.J.ಜಾರ್ಜ್ ಮಹತ್ವದ ಸಭೆ..!

ಕೃಷ್ಣ ಮಣಿ by ಕೃಷ್ಣ ಮಣಿ
June 24, 2023
in Top Story, ಕರ್ನಾಟಕ, ರಾಜಕೀಯ
0
ಸರ್ಕಾರಕ್ಕೆ ಕಪ್ಪು ಚುಕ್ಕೆಯನ್ನು ತೆಗಿಯಲು ಸೋಮವಾರ ಸಚಿವ K.J.ಜಾರ್ಜ್ ಮಹತ್ವದ ಸಭೆ..!
Share on WhatsAppShare on FacebookShare on Telegram

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಅದರಲ್ಲಿ ಶಕ್ತಿ ಹಾಗು ಗೃಹಜ್ಯೋತಿ ಯೋಜನೆಗಳನ್ನು ಈಗಾಗಲೇ ಜಾರಿ ಮಾಡಿ ಆಗಿದೆ. ಶಕ್ತಿ ಯೋಜನೆ ಮೂಲಕ ಮಹಿಳೆಯರು ಉಚಿತವಾಗಿ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಸಂಚಾರ ಮಾಡುವುದಕ್ಕೆ ಅವಕಾಶ ಕೊಡಲಾಗಿದೆ. ಇನ್ನು ಗೃಹ ಜ್ಯೋತಿ ಯೋಜನೆಯಲ್ಲಿ ಎಲ್ಲರ ಮನೆಗೂ ವಿದ್ಯುತ್ ಫ್ರೀ ಕೊಡುವ ಯೋಜನೆ ತಾಂತ್ರಿಕವಾಗಿ ಜಾರಿಗೆ ಬಂದಿದೆ. ರಾಜ್ಯಾದ್ಯಂತ ಜನರು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಉತ್ತಮ ಹೆಸರು ಬರಬೇಕಿತ್ತಾದರೂ ಇಂಧನ ಇಲಾಖೆ ಮಾಡಿದ್ದ ಎಡವಟ್ಟು ಸರ್ಕಾರದ ವಿರುದ್ಧ ಜನರು ಮಾತನಾಡುವಂತೆ ಮಾಡಿತ್ತು. ಇದೀಗ ಎಲ್ಲದಕ್ಕೂ ಇತಿಶ್ರೀ ಆಡುವುದಕ್ಕೆ ಮಹತ್ವದ ಸಭೆ ಸೋಮವಾರಕ್ಕೆ ನಿಗದಿಯಾಗಿದೆ.

ADVERTISEMENT

ಹಿಂದಿನ ಸರ್ಕಾರದ ಎಡವಟ್ಟು ಕಾಂಗ್ರೆಸ್‌ಗೆ ಸಂಕಷ್ಟ..!

ಕಳೆದ ಮಾರ್ಚ್ ತಿಂಗಳಲ್ಲಿ ವಿದ್ಯುತ್ ದರ ಏರಿಕೆ ಸಂಬಂಧ ಹಿಂದಿನ ಬಿಜೆಪಿ ಸರ್ಕಾರಕ್ಕೆ ಪ್ರಸ್ತಾವನೆ ಬಂದಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣಕ್ಕೆ ಅಧಿಕೃತವಾಗಿ ಜಾರಿ ಆಗಿರಲಿಲ್ಲ. ತಾತ್ವಿಕೆ ಒಪ್ಪಿಗೆ ಪಡೆದುಕೊಂಡಿದ್ದ ಕೆಇಆರ್‌ಸಿ ಚುನಾವಣಾ ನೀತಿ ಸಂಹಿತೆ ಮುಕ್ತಾಯ ಆಗುತ್ತಿದ್ದ ಹಾಗೆ ದರ ಏರಿಕೆ ಸ್ಲಾಬ್ ಜಾರಿ ಮಾಡಿತ್ತು. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುವ ಮೊದಲೇ ವಿದ್ಯುತ್ ದರ ಹೆಚ್ಚಳ ಆಗಿ ಹೋಗಿತ್ತು. ಇದು ಬಿಜೆಪಿ ಸರ್ಕಾರದ ನಿರ್ಧಾರ ಆದರೂ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರ ವಿದ್ಯುತ್ ಬಿಲ್ ಹೆಚ್ಚಳ ಮಾಡಿದೆ ಎಂದು ಪ್ರಚಾರ ಮಾಡಿ ಯಶಸ್ವಿಯಾದರು. ಇದಕ್ಕೆ ಸಾಕ್ಷಿ ಎನ್ನುವಂತೆ ಗ್ರಾಹಕರ ಕೈಗೆ ಹೆಚ್ಚಳ ಆಗಿರುವ ವಿದ್ಯುತ್ ಬಿಲ್ ಸೇರಿತ್ತು. ಉಚಿತ ವಿದ್ಯುತ್ ಕೊಟ್ಟರೂ ಕಾಂಗ್ರೆಸ್ ಸರ್ಕಾರಕ್ಕೆ ಇರಿಸು ಮುರಿಸು ತಂದಿಟ್ಟಿತ್ತು ಇಂಧನ ಇಲಾಖೆ ಕೆಲಸ. ಇದೀಗ ಬಿಜೆಪಿ ಸರ್ಕಾರದಿಂದ ಕಾಂಗ್ರೆಸ್‌ಗೆ ಎದುರಾಗಿದ್ದ ಸಂಕಷ್ಟ ನಿವಾರಿಸುವ ಸಂಬಂಧ ಸಭೆ ಕರೆಯಲಾಗಿದೆ.

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ FKCCI ಮನವಿ..!

FKCCI ( FEDERATION OF KARNATAKA CHAMBERS OF COMMERCE AND INDUSTRY )ಅಧ್ಯಕ್ಷ ಬಿ.ವಿ ಗೋಪಾಲರೆಡ್ಡಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿದ್ಯುತ್‌ ದರ ಹೆಚ್ಚಳದ ಹೊರೆ ಕಡಿಮೆ ಮಾಡುವಂತೆ ಮನವಿ ಮಾಡಲಾಗಿದೆ. ಶುಕ್ರವಾರ ಭೇಟಿ ಮಾಡಿ ಚರ್ಚಿಸಿದ ಬಳಿಕ ಮಾತನಾಡಿರುವ ಗೋಪಾಲರೆಡ್ಡಿ, ನಾವು ವಿದ್ಯುತ್ ದರ ಹೆಚ್ಚಳ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ. ಸೋಮವಾರ ಮತ್ತೊಂದು ಸಭೆ ಕರೆಯೋದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ. ತೆರಿಗೆ ಕಡಿಮೆ ಮಾಡಲು ಸಿಎಂ ಬಳಿ ಮನವಿ ಮಾಡಿದ್ದೇವೆ. ಸದ್ಯ ಇರುವ ಶೇಕಡ 9ರಷ್ಟು ತೆರಿಗೆಯನ್ನು ಶೇಕಡ 4 ಕ್ಕೆ ಇಳಿಸುವಂತೆ ಒತ್ತಾಯ ಮಾಡಿದ್ದೇವೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ ಕೂಡ ಉಪಸ್ಥಿತರಿದ್ದು, ಸೋಮವಾರ ಇಂಧನ ಸಚಿವರು ಸಭೆ ಕರೆದಿದ್ದಾರೆ, ಸಭೆಯಲ್ಲಿ ನಿರ್ಧಾರ ಹೊರಬೀಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದರ ಹೊರೆ ತಪ್ಪಿಸಲು ಟ್ಯಾಕ್ಸ್‌ ಇಳಿಸುವ ಮುನ್ಸೂಚನೆ..!

ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ. ಗೃಹಜ್ಯೋತಿ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಲಾಗಿದೆ ಎನ್ನುವುದು ಪರಮ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೂ ಕೈಗಾರಿಕೋದ್ಯಮಿಗಳ ಮನವಿಗೆ ಸ್ಪಂದನೆ ಸಿಕ್ಕಿದ್ದು, ಬೇಡಿಕೆಗಳ ಬಗ್ಗೆ ಪರಿಶೀಲಿಸಲು ಸಿಎಂ ಒಪ್ಪಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದ ಏರಿಕೆ ಇದು. ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು ಏರಿಸುವ ನಿರ್ಧಾರ ಮಾಡಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ KERC ನಿರ್ಧಾರ ಕೈಗೊಂಡಿತ್ತು. ನಿಯೋಗ ಮಾಡಿರುವ ಮನವಿಯ ಕುರಿತು ಆರ್ಥಿಕ, ಇಂಧನ ಇಲಾಖೆ, ಕಾಸಿಯಾ, FKCCI ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎನ್ನುವ ಭರವಸೆ ನೀಡಲಾಗಿದೆ. KERC ಸ್ವತಂತ್ರ ಸಂಸ್ಥೆಯಾಗಿದ್ದು, ಸರ್ಕಾರ ಅವರ ನಿರ್ಧಾರವನ್ನು ಈಗ ಪ್ರಶ್ನೆ ಮಾಡಲು ಸಾಧ್ಯವಿಲ್ಲ, ಒಂದು ವೇಳೆ ನೀವೆಲ್ಲಾ ಕೋರ್ಟ್‌ ಮೊರೆ ಹೋದರೆ, ಸರ್ಕಾರ ನಿಮ್ಮ ಪರವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ. ಇದೇ ವೇಳೆ ತೆರಿಗೆ ಇಳಿಸುವ ಬಗ್ಗೆಯೂ ಮಹತ್ವದ ಸುಳಿವು ಸಿಕ್ಕಿದ್ದು, ಸೋಮವಾರ ಅಂತಿಮ ನಿರ್ಧಾರ ಹೊರ ಬೀಳುವ ಲಕ್ಷಣ ಕಾಣಿಸಿದೆ.

ಕೃಷ್ಣಮಣಿ

Tags: BJPBreaking NewscmsiddaramiahCongress PartyEnergy Minister KJ GeorgeFEDERATION OF KARNATAKA CHAMBERS OF COMMERCE AND INDUSTRYFKCCIKERCKJ Georgekj grorge meetingkjgeorge
Previous Post

ಹೊಸ ಆಳ್ವಿಕೆಯೂ ನಾಗರಿಕ ಸಮಾಜದ ಜವಾಬ್ದಾರಿಯೂ..ಕರ್ನಾಟಕದ ಮತದಾರರ ತೀರ್ಪು ಸಾರ್ಥಕವಾಗುವಂತೆ ಪ್ರಗತಿಪರರು ಜನಜಾಗೃತಿ ಮೂಡಿಸಬೇಕಿದೆ  

Next Post

ಗೃಹಜ್ಯೋತಿ ನೋಂದಣಿಗೆ ಭಾರೀ ಬೇಡಿಕೆ, 35 ಲಕ್ಷ ಮಂದಿ ನೋಂದಣಿ; ವಿದ್ಯುತ್‌ ದರ ಇಳಿಸಲ್ಲ : ಸಿಎಂ

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಗೃಹಜ್ಯೋತಿ ನೋಂದಣಿಗೆ ಭಾರೀ ಬೇಡಿಕೆ, 35 ಲಕ್ಷ ಮಂದಿ ನೋಂದಣಿ; ವಿದ್ಯುತ್‌ ದರ ಇಳಿಸಲ್ಲ :  ಸಿಎಂ

ಗೃಹಜ್ಯೋತಿ ನೋಂದಣಿಗೆ ಭಾರೀ ಬೇಡಿಕೆ, 35 ಲಕ್ಷ ಮಂದಿ ನೋಂದಣಿ; ವಿದ್ಯುತ್‌ ದರ ಇಳಿಸಲ್ಲ : ಸಿಎಂ

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada