ಇಂದು 76ನೇ ಗಣರಾಜ್ಯೋತ್ಸವದ ಅಂಗವಾಗಿ ಇಂಧನ ಸಚಿವ ಕೆಜೆ ಜಾರ್ಜ್ (KJ Georg) ಚಿಕ್ಕಮಗಳೂರು ಜಿಲ್ಲೆಯ ಸುಭಾಸ್ ಚಂದ್ರ ಬೋಸ್ ಮೈದಾನದಲ್ಲಿ ನಡೆದ ಧ್ವಜಾರೋಹಣ ಸಮಾರಂಭ ಮತ್ತು ಪರೇಡ್ ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ.

ಇದೇ ವೇಳೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಚಿವ ಕೆಜೆ ಜಾರ್ಜ್ ಆ ನಂತರದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾದರು.

ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗೋವುಗಳಿಗೆ ಸಚಿವ ಕೆಜೆ ಜಾರ್ಜ್ ಮೇವು ತಿನ್ನಿಸಿದ್ದು ವಿಶೇಷವಾಗಿತ್ತು. ಈ ವೇಳೆ ಧ್ವಜಾರೋಹಣದ ನಂತರ ತೆರೆದ ವಾಹನದಲ್ಲಿ ಪರೇಡ್ ಹೋರಾಟ ಸಚಿವರು ನೆರೆದಿದ್ದ ಎಲ್ಲರಿಗೂ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ.