ಬೆಂಗಳೂರು: ರಾಜಧಾನಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳು ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸುತ್ತಿದ್ದಾರೆ. ಸಚಿವ ಕೆ.ಜೆ. ಜಾರ್ಜ್ ಕೂಡ ತಮ್ಮ ಕುಟುಂಬಸ್ಥರೊಂದಿಗೆ ಆಗಮಿಸಿ ಮತದಾನ ಮಾಡಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ ಪರ ಜನರ ಒಲವಿದೆ. ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಾರಿ ಹೆಚ್ಚಿನ ಮತದಾನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇಂದು ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ.