• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್‌ ಆಸ್ತಿ ವಿಚಾರದಲ್ಲಿ ಜಮೀರ್‌ಗೆ ಗುಮ್ಮಿದ ಸಚಿವ ಕೆ.ಎನ್‌ ರಾಜಣ್ಣ

ಪ್ರತಿಧ್ವನಿ by ಪ್ರತಿಧ್ವನಿ
November 3, 2024
in Top Story, ಕರ್ನಾಟಕ
0
Share on WhatsAppShare on FacebookShare on Telegram

ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದು ಆಗುತ್ತಿರುವ ವಿಚಾರದಲ್ಲಿ ಸಚಿವ ಕೆ.ಎನ್‌ ರಾಜಣ್ಣ ಸ್ವಂತ ಸರ್ಕಾರದ ವಿರುದ್ದವೇ ಚಾಟಿ ಬಿಸಿದ್ದಾರೆ. ಸಿಎಂ ಸೂಚನೆ ಮೇರೆಗೆ ವಕ್ಫ್ ನೋಟಿಸ್ ಕೊಟ್ಟಿದ್ದು, ಪಹಣಿ ದಾಖಲು ಆಗ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಮಾತನಾಡಿ, ವಕ್ಫ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಾನೂನು ಬಾಹಿರ ಕ್ರಮ ತಗೊಳ್ಳಿ ಅಂತ ಸೂಚನೆ ಕೊಟ್ಟಿಲ್ಲ. ಸಿಎಂ ಸೂಚನೆ ಕೊಡಬೇಕಾದರೆ ಕಾನೂನು ಬದ್ಧವಾಗಿಯೇ ಕೊಡ್ತಾರೆ. ನಿಯಮ ಬಾಹಿರ ಸೂಚನೆಯನ್ನು ಸಿಎಂ ಸಿದ್ದರಾಮಯ್ಯ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.

ADVERTISEMENT

ಇದರ ಮಧ್ಯೆ ಇರೋರು ಸಿಎಂ ಸಿದ್ದರಾಮಯ್ಯ ಹೆಸರು ದುರುಪಯೋಗ ಮಾಡಿಸಿಕೊಂಡು ಈ ರೀತಿ ಮಾಡಿರುವ ಸಾಧ್ಯತೆಯಿದೆ. ಜಮೀರ್ ಅಹಮದ್ ವಕ್ಫ್ ಸಚಿವರಾಗಿ ಇರಬಹುದು, ಹಾಗಂತ ಖಾತೆಗಳನ್ನು ಬದಲಾಯಿಸಿ ಅಂತ ನಿಯಮ ಬಾಹಿರವಾಗಿ ಹೇಳೋದೂ ತಪ್ಪು, ನಿಯಮ ಬಾಹಿರ ಸೂಚನೆಗಳನ್ನು ಪಾಲಿಸಿರುವ ಅಧಿಕಾರಿಗಳದ್ದೂ ತಪ್ಪಿದೆ ಎಂದಿದ್ದಾರೆ. ಹೀಗಾಗಿ ಆರ್‌ಟಿಸಿಯಲ್ಲಿ ಆಗಿರುವ ತಪ್ಪುಗಳಿಗೆ ಯಾರು ಕಾರಣವೋ ಅವರ ಮೇಲೆ ಕ್ರಮ ಆಗಬೇಕು ಎಂದು ಒತ್ತಾಯ ಮಾಡಿದ್ದಾರೆ.ಈ ಮೂಲಕ ಸಚಿವ ಜಮೀರ್ ಅಹಮದ್ ವಿರುದ್ಧ ಸಚಿವ ರಾಜಣ್ಣ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರ ಡಿಸಿಗೆ ಜಮೀರ್ ನೀಡಿದ ಸೂಚನೆ ನಿಯಮ ಬಾಹಿರ ಅಂತ ಪರೋಕ್ಷವಾಗಿ ಹೇಳಿರುವ ಸಚಿವ ಕೆ.ಎನ್‌ ರಾಜಣ್ಣ, ಆರ್‌ಟಿಸಿಯಲ್ಲಿ ವಕ್ಫ್ ಹೆಸರು ನಮೂದು ಆಗಿರೋದು ಇನ್ನೊಬ್ವರ ಚಿತಾವಣೆಯಿಮದ ಆಗಿದೆಯಾ..? ಅಥವಾ ಅಜಾಗರೂಕತೆಯಿಂದ ಆಗಿದೆಯಾ..? ಅನ್ನೋ ಚರ್ಚೆ ಇದೆ. ಯಾರು ರೈತರ ದಾಖಲೆಗಳಲ್ಲಿ ವಕ್ಫ್ ಹೆಸರು ಬರಲು ಕಾರಣ ಆಗಿದ್ದಾರೆ, ಯಾರ ಆದೇಶ ಮೇಲೆ ವಕ್ಫ್ ಹೆಸರು ಬಂದಿದೆ ಅಂತ ತನಿಖೆ ಆಗಬೇಕು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ನಾನು ಭೇಟಿ ಮಾಡಿ ಚರ್ಚೆ ಮಾಡ್ತೇನೆ ಎಂದಿದ್ದಾರೆ. ಇನ್ನು ಬಿಜೆಪಿಯವರೇ ಯಾಕೆ ದಾಖಲೆಗಳಲ್ಲಿ ವಕ್ಫ್ ಹೆಸರು ಹಾಕಿಸಿ, ರಾಜಕೀಯಕ್ಕೆ ಬಳಸ್ತಿದ್ದಾರೆ ಅಂತ ಭಾವಿಸಬಾರದು..? ಅಂತಾನು ಪ್ರಶ್ನೆ ಮಾಡಿದ್ದಾರೆ.

RTC ಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದು ಆಗಿರುವ ಬಗ್ಗೆ ಸಮಗ್ರ ತನಿಖೆ ಆಗಬೇಕಿದೆ. ಯಾರು ಕಾರಣ ಆಗಿದ್ದಾರೋ ಅವರ ವಿರುದ್ಧ ಕ್ರಮ ಆಗಬೇಕು ಎಂದು ಒತ್ತಾಯ ಮಾಡಿರುವ ಸಚಿವ ರಾಜಣ್ಣ, ವಕ್ಫ್ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡ್ತಿದೆ. ಜಮೀನು ದಾಖಲೆಗಳಲ್ಲಿ ವಕ್ಫ್ ಹೆಸರು ಏಕಾಏಕಿ ಬರಲು ಸಾಧ್ಯವಿಲ್ಲ. ಯಾವುದಾದರೂ ಆಧಾರ ಇರಬೇಕು ಅಥವಾ ಹಿರಿಯ ಅಧಿಕಾರಿಗಳು ಸೂಚನೆ ಕೊಟ್ಟಿರಬೇಕು. ಆ ಸೂಚನೆ ಮೇಲೆ ಇವೆಲ್ಲ ಬದಲಾವಣೆ ಆಗಿರಬಹುದು. ಆ ಸೂಚನೆ ಕೊಟ್ಟವರು ಯಾರು..? ಅಂತ ಪತ್ತೆ ಮಾಡಿ ಅವರ ವಿರುದ್ಧ ಕ್ರಮ ತಗೋಬೇಕು ಎಂದು ಆಗ್ರಹ ಮಾಡಿದ್ದಾರೆ. ಒಟ್ಟಾರೆ ಜಮೀರ್‌ ವಿರುದ್ಧ ಕಾಂಗ್ರೆಸ್‌ನಲ್ಲೇ ಆಕ್ರೋಶದ ಕಟ್ಟೆ ಒಡೆಯುತ್ತಿದೆ.

Tags: CM Siddaramaiahminister kn rajannaRTCthreatened JameerVijayapur DC is illegalWaqf property.
Previous Post

ಯಡಿಯೂರಪ್ಪ ಒಬ್ಬರೇ ಅಲ್ಲ, ಹಲವರು ಪಕ್ಷ ಕಟ್ಟಿದ್ದಾರೆ;ಆದ್ರೆ ವಿಜಯೇಂದ್ರ ಏನು ಕಟ್ಟಿದ್ದಾನೆ? ಏಕವಚನದಲ್ಲೇ ಯತ್ನಾಳ್ ಪ್ರಶ್ನೆ

Next Post

ಇಂದು ಡಾಕ್ಟರ್ಸ್‌‌ ಮೀಟಿಂಗ್‌… ಕೋರ್ಟ್‌ ವರದಿ ಬಗ್ಗೆ ನಿರ್ಧಾರ

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post

ಇಂದು ಡಾಕ್ಟರ್ಸ್‌‌ ಮೀಟಿಂಗ್‌... ಕೋರ್ಟ್‌ ವರದಿ ಬಗ್ಗೆ ನಿರ್ಧಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada